ಬ್ರೇಕಿಂಗ್ ನ್ಯೂಸ್
26-05-25 10:13 pm HK News Desk ದೇಶ - ವಿದೇಶ
ನವದೆಹಲಿ, ಮೇ 26 : ಭಯೋತ್ಪಾದನೆ ವಿರುದ್ಧ ಭಾರತದ ದೃಢ ಸಂಕಲ್ಪವನ್ನು ಜಾಗತಿಕವಾಗಿ ಎತ್ತಿ ಹಿಡಿಯುವ ಮೂಲಕ ಪಾಕಿಸ್ತಾನದ ನಿಜಬಣ್ಣ ಬಯಲು ಮಾಡುವುದಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ರಷ್ಯಾ ಭೇಟಿ ಬಳಿಕ ಇದೀಗ ಸ್ಲೊವೇನಿಯಾ ದೇಶದಲ್ಲಿದ್ದು, ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ಅಂತಾರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ.
ಸ್ಲೊವೇನಿಯಾ ದೇಶಕ್ಕೆ ಆಗಮಿಸಿದ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿ ಅಮಿತ್ ನಾರಂಗ್ ಅವರು ಬರಮಾಡಿಕೊಂಡಿದ್ದರು. ನಂತರ ಅವರು ಸರ್ವಪಕ್ಷಗಳ ಸಂಸದೀಯ ನಿಯೋಗದ ಜತೆಗೆ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಸ್ಲೊವೇನಿಯಾ ದೇಶವು ಭಾರತದೊಂದಿಗೆ ಬೆಂಬಲವಾಗಿ ನಿಂತಿದ್ದು, ಉಭಯ ದೇಶಗಳ ನಡುವೆ ವೃದ್ಧಿಸುತ್ತಿರುವ ಬಾಂಧವ್ಯದ ಕುರಿತು ಸಮಗ್ರ ಮಾಹಿತಿ ಹಂಚಿಕೊಂಡರು.




ಇದಾದ ಬಳಿಕ ಸರ್ವಪಕ್ಷದ ನಿಯೋಗವು ರಾಷ್ಟ್ರೀಯ ಅಸೆಂಬ್ಲಿಯ ವಿದೇಶಾಂಗ ನೀತಿ ಸಮಿತಿಯ ಅಧ್ಯಕ್ಷರಾದ ಹೆಚ್.ಇ. ಪ್ರೆಡ್ರಾಗ್ ಬಕೋವಿಕ್ ಮತ್ತು ಭಾರತ-ಸ್ಲೊವೇನಿಯಾ ಪಾರ್ಲಿಮೆಂಟರಿ ಫ್ರೆಂಡ್ ಶಿಪ್ ಗ್ರೂಪ್ ನ ಮಿರ್ಸ್ಲಾವ್ ಗ್ರೆಗೋರಿಕ್ ಅವರೊಂದಿಗೆ ಸಭೆ ನಡೆಸಿ ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಕುರಿತ ಭಾರತದ ಬಲವಾದ ಬದ್ಧತೆ ಕುರಿತು ಮನವರಿಕೆ ಮಾಡಿಕೊಟ್ಟಿದೆ. ಭಯೋತ್ಪಾದನೆಯನ್ನು ಪೋಷಿಸುತ್ತಿರುವ ಪಾಕಿಸ್ತಾನದ ಇಬ್ಬಗೆಯ ನೀತಿಯ ಕುರಿತು ಭಾರತದ ಕಳವಳವನ್ನು ಸ್ಲೊವೇನಿಯಾದ ಜನಪ್ರತಿನಿಧಿಗಳು ಹಾಗೂ ಚಿಂತಕರಿಗೆ ಸ್ಪಷ್ಟವಾಗಿ ತಿಳಿಸಲಾಯಿತು.
ಇದಾದ ಬಳಿಕ ಸ್ಲೊವೇನಿಯಾದ ಪ್ರಧಾನ ಮಂತ್ರಿ ಕಚೇರಿಯ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಭದ್ರತಾ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಸಂಯೋಜಕರಾದ ಎಚ್.ಇ. ವೋಜ್ಕೊ ವೋಲ್ಕ್ ಅವರೊಂದಿಗೆ ನಿಯೋಗವು ಮಹತ್ವದ ಸಭೆ ನಡೆಸಿದೆ. ನಂತರ ಸ್ಲೊವೇನಿಯಾದ ವಿದೇಶಾಂಗ ಮತ್ತು ಯುರೋಪಿಯನ್ ವ್ಯವಹಾರಗಳ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಬಾರ್ಬರ ಜ್ವೊಕೆಲ್ಜ್ ಅವರನ್ನು ನಿಯೋಗ ಭೇಟಿ ಮಾಡಿತು. ಈ ವೇಳೆ ಪಹಲ್ಗಾಮ್ ದಾಳಿಯನ್ನು ಸ್ಲೊವೇನಿಯಾ ಸ್ಪಷ್ಟವಾಗಿ ಖಂಡಿಸುವುದರ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಭಾರತವು ಭಯೋತ್ಪಾದನೆ ವಿರುದ್ಧದ ತಳೆದಿರುವ ನಿಲುವಿಗೆ ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಆ ಮೂಲಕ ಭಯೋತ್ಪಾದನೆ ವಿರುದ್ಧದ ಭಾರತದ ದಿಟ್ಟ ಹೋರಾಟದಲ್ಲಿ ಎಲ್ಲ ರೀತಿಯ ಸಹಕಾರದ ಭರವಸೆಯನ್ನು ನೀಡಿದೆ.
The Indian all-party parliamentary delegation led by DMK MP Kanimozhi Karunanidhi on Monday met leaders of Slovenia, reiterating India’s resolute stance on zero tolerance towards terrorism as part of the global outreach campaign of Operation Sindoor.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am