ಬ್ರೇಕಿಂಗ್ ನ್ಯೂಸ್
26-05-25 10:13 pm HK News Desk ದೇಶ - ವಿದೇಶ
ನವದೆಹಲಿ, ಮೇ 26 : ಭಯೋತ್ಪಾದನೆ ವಿರುದ್ಧ ಭಾರತದ ದೃಢ ಸಂಕಲ್ಪವನ್ನು ಜಾಗತಿಕವಾಗಿ ಎತ್ತಿ ಹಿಡಿಯುವ ಮೂಲಕ ಪಾಕಿಸ್ತಾನದ ನಿಜಬಣ್ಣ ಬಯಲು ಮಾಡುವುದಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ರಷ್ಯಾ ಭೇಟಿ ಬಳಿಕ ಇದೀಗ ಸ್ಲೊವೇನಿಯಾ ದೇಶದಲ್ಲಿದ್ದು, ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ಅಂತಾರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ.
ಸ್ಲೊವೇನಿಯಾ ದೇಶಕ್ಕೆ ಆಗಮಿಸಿದ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿ ಅಮಿತ್ ನಾರಂಗ್ ಅವರು ಬರಮಾಡಿಕೊಂಡಿದ್ದರು. ನಂತರ ಅವರು ಸರ್ವಪಕ್ಷಗಳ ಸಂಸದೀಯ ನಿಯೋಗದ ಜತೆಗೆ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಸ್ಲೊವೇನಿಯಾ ದೇಶವು ಭಾರತದೊಂದಿಗೆ ಬೆಂಬಲವಾಗಿ ನಿಂತಿದ್ದು, ಉಭಯ ದೇಶಗಳ ನಡುವೆ ವೃದ್ಧಿಸುತ್ತಿರುವ ಬಾಂಧವ್ಯದ ಕುರಿತು ಸಮಗ್ರ ಮಾಹಿತಿ ಹಂಚಿಕೊಂಡರು.




ಇದಾದ ಬಳಿಕ ಸರ್ವಪಕ್ಷದ ನಿಯೋಗವು ರಾಷ್ಟ್ರೀಯ ಅಸೆಂಬ್ಲಿಯ ವಿದೇಶಾಂಗ ನೀತಿ ಸಮಿತಿಯ ಅಧ್ಯಕ್ಷರಾದ ಹೆಚ್.ಇ. ಪ್ರೆಡ್ರಾಗ್ ಬಕೋವಿಕ್ ಮತ್ತು ಭಾರತ-ಸ್ಲೊವೇನಿಯಾ ಪಾರ್ಲಿಮೆಂಟರಿ ಫ್ರೆಂಡ್ ಶಿಪ್ ಗ್ರೂಪ್ ನ ಮಿರ್ಸ್ಲಾವ್ ಗ್ರೆಗೋರಿಕ್ ಅವರೊಂದಿಗೆ ಸಭೆ ನಡೆಸಿ ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಕುರಿತ ಭಾರತದ ಬಲವಾದ ಬದ್ಧತೆ ಕುರಿತು ಮನವರಿಕೆ ಮಾಡಿಕೊಟ್ಟಿದೆ. ಭಯೋತ್ಪಾದನೆಯನ್ನು ಪೋಷಿಸುತ್ತಿರುವ ಪಾಕಿಸ್ತಾನದ ಇಬ್ಬಗೆಯ ನೀತಿಯ ಕುರಿತು ಭಾರತದ ಕಳವಳವನ್ನು ಸ್ಲೊವೇನಿಯಾದ ಜನಪ್ರತಿನಿಧಿಗಳು ಹಾಗೂ ಚಿಂತಕರಿಗೆ ಸ್ಪಷ್ಟವಾಗಿ ತಿಳಿಸಲಾಯಿತು.
ಇದಾದ ಬಳಿಕ ಸ್ಲೊವೇನಿಯಾದ ಪ್ರಧಾನ ಮಂತ್ರಿ ಕಚೇರಿಯ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಭದ್ರತಾ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಸಂಯೋಜಕರಾದ ಎಚ್.ಇ. ವೋಜ್ಕೊ ವೋಲ್ಕ್ ಅವರೊಂದಿಗೆ ನಿಯೋಗವು ಮಹತ್ವದ ಸಭೆ ನಡೆಸಿದೆ. ನಂತರ ಸ್ಲೊವೇನಿಯಾದ ವಿದೇಶಾಂಗ ಮತ್ತು ಯುರೋಪಿಯನ್ ವ್ಯವಹಾರಗಳ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಬಾರ್ಬರ ಜ್ವೊಕೆಲ್ಜ್ ಅವರನ್ನು ನಿಯೋಗ ಭೇಟಿ ಮಾಡಿತು. ಈ ವೇಳೆ ಪಹಲ್ಗಾಮ್ ದಾಳಿಯನ್ನು ಸ್ಲೊವೇನಿಯಾ ಸ್ಪಷ್ಟವಾಗಿ ಖಂಡಿಸುವುದರ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಭಾರತವು ಭಯೋತ್ಪಾದನೆ ವಿರುದ್ಧದ ತಳೆದಿರುವ ನಿಲುವಿಗೆ ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಆ ಮೂಲಕ ಭಯೋತ್ಪಾದನೆ ವಿರುದ್ಧದ ಭಾರತದ ದಿಟ್ಟ ಹೋರಾಟದಲ್ಲಿ ಎಲ್ಲ ರೀತಿಯ ಸಹಕಾರದ ಭರವಸೆಯನ್ನು ನೀಡಿದೆ.
The Indian all-party parliamentary delegation led by DMK MP Kanimozhi Karunanidhi on Monday met leaders of Slovenia, reiterating India’s resolute stance on zero tolerance towards terrorism as part of the global outreach campaign of Operation Sindoor.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm