ಬ್ರೇಕಿಂಗ್ ನ್ಯೂಸ್
21-12-20 04:17 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.21: ಇಂಗ್ಲೆಂಡಿನಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ಬ್ರಿಟನ್ ನಡುವಿನ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಡಿ.31ರ ವರೆಗೂ ಭಾರತ- ಬ್ರಿಟನ್ ನಡುವೆ ವಿಮಾನ ಮತ್ತು ಹಡಗು ಸಂಚಾರವನ್ನು ಸ್ಥಗಿತ ಮಾಡಲಾಗಿದೆ.
ಬ್ರಿಟನ್ ಸೇರಿ ಯುರೋಪಿನಲ್ಲಿ ಮ್ಯೂಟಂಟ್ ವೈರಸ್ ಪತ್ತೆಯಾಗಿದ್ದು, ಇದು ಅತಿ ವೇಗವಾಗಿ ಹರಡುತ್ತಿರುವ ಕಾರಣ ಇಂಗ್ಲೆಂಡ್ ಸರಕಾರ ಕಟ್ಟೆಚ್ಚರ ಘೋಷಣೆ ಮಾಡಿದೆ. ಅಲ್ಲದೆ, ಇಂಗ್ಲೆಂಡಿನಲ್ಲಿ ನಾಲ್ಕನೇ ಹಂತದ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸೌದಿ ಸೇರಿದಂತೆ ಜಗತ್ತಿನ 59 ರಾಷ್ಟ್ರಗಳು ಬ್ರಿಟನ್ ನಡುವಿನ ಸಂಚಾರವನ್ನು ದಿಢೀರ್ ಬಂದ್ ಮಾಡಿದೆ.
ಇದೀಗ ಪ್ಯಾಸೆಂಜರ್ ವಿಮಾನ ಮತ್ತು ಹಡಗು ಸಂಚಾರವನ್ನು ಮಾತ್ರ ಸ್ಥಗಿತಗೊಳಿಸಲಾಗಿದೆ. ಸರಕು ಸಾಗಾಟದ ವಿಮಾನ, ಹಡಗಿನ ಸಂಚಾರಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿಲ್ಲ. ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತಿರುವ ಕಾರಣ ದಿಢೀರ್ ಆಗಿ ಪ್ರಯಾಣಿಕರ ಸಂಚಾರಕ್ಕೆ ಮಾತ್ರ ಬ್ರೇಕ್ ಹಾಕಲಾಗಿದೆ. ಈ ನಡುವೆ, ಬ್ರಿಟನ್ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೊರೊನಾ ವಿರುದ್ಧ ಲಸಿಕೆ ನೀಡಲು ಆರಂಭಿಸಲಾಗಿದೆ.
ಭಾರತದಲ್ಲಿ ಕೂಡ ಲಸಿಕೆ ನೀಡುವುದಕ್ಕೆ ಸಿದ್ಧತೆ ನಡೆಸಲಾಗಿದೆ. ಜನವರಿಯಿಂದಲೇ ಮೊದಲ ಹಂತದ ಲಸಿಕೆ ನೀಡಲಾಗುವುದು ಎಂದು ಈಗಾಗ್ಲೇ ಕೇಂದ್ರ ಸರಕಾರ ಹೇಳಿದೆ. ಇದಲ್ಲದೆ, ಮ್ಯೂಟಂಟ್ ಕೊರೊನಾ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಇದನ್ನೂ ಓದಿ: ಇಂಗ್ಲೆಂಡಿನಲ್ಲಿ ಮತ್ತೆ ಕೊರೊನಾ ಆರ್ಭಟ ; ಸೌದಿಯಿಂದ ಎಲ್ಲ ಅಂತಾರಾಷ್ಟ್ರೀಯ ಸಂಚಾರ ಸ್ಥಗಿತ !!
Flights to and from the UK have been banned till December 31 over a new fast-spreading strain of the coronavirus in that country, the government said today as several countries announced similar moves.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm