ಬ್ರೇಕಿಂಗ್ ನ್ಯೂಸ್
25-06-25 11:10 am HK News Desk ದೇಶ - ವಿದೇಶ
ನವದೆಹಲಿ, ಜೂನ್ 24 : ಇಸ್ರೇಲ್ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಿಸಿದ್ದರೂ ಉಭಯ ದೇಶಗಳು ಯುದ್ಧದಲ್ಲಿ ತೊಡಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕೂಡಲೇ ಸೇನಾ ಕಾರ್ಯಾಚರಣೆ ನಿಲ್ಲಿಸಿ ಎಂದು ಇಸ್ರೇಲ್ ಗೆ ಎಚ್ಚರಿಕೆ ನೀಡಿದ್ದಾರೆ.
12 ದಿನಗಳ ಇಸ್ರೇಲ್ ಮತ್ತು ಇರಾನ್ ಯುದ್ಧಕ್ಕೆ ಮಂಗಳವಾರ ಬೆಳಗ್ಗೆ ಅಮೆರಿಕ ಕದನ ವಿರಾಮ ಘೋಷಣೆ ಮಾಡಿತ್ತು. ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದ್ದು ಇಸ್ರೇಲ್ ಮೇಲೆ ಅಟ್ಯಾಕ್ ಮಾಡಿತ್ತು. ಇದೇ ನೆಪವೊಡ್ಡಿ ಇಸ್ರೇಲ್ ಮರು ದಾಳಿಗೆ ಮುಂದಾಗಿದ್ದು ತಕ್ಕ ಪ್ರತ್ಯುತ್ತರ ನೀಡುವಂತೆ ಸೇನಾ ಪಡೆಗೆ ಸೂಚಿಸಿದೆ. ದಕ್ಷಿಣ ಇಸ್ರೇಲಿನ ಬೀರ್ ಶೆವಾದ ಮೇಲೆ ಕ್ಷಿಪಣಿ ದಾಳಿಯಾಗಿದ್ದರಿಂದ ಏಳು ಮಂದಿ ಸಾವು ಕಂಡಿದ್ದಾರೆ.
ಈ ಮಧ್ಯೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸದಂತೆ ಇಸ್ರೇಲ್ಗೆ ತಮ್ಮ ಟ್ರುತ್ ಸೋಶಿಯಲ್ ಪೋಸ್ಟ್ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾಕೀತು ಮಾಡಿದ್ದಾರೆ. ನೀವು ಈಗ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದರೆ, ಬಹುದೊಡ್ಡ ಯುದ್ಧ ವಿರಾಮ ಉಲ್ಲಂಘನೆಯಾಗಲಿದೆ. ನಿಮ್ಮ ವಿಮಾನಗಳನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಟ್ರಂಪ್ ಸೂಚಿಸಿದ್ದಾರೆ.
ಅಮೆರಿಕ ಕದನ ವಿರಾಮ ಘೋಷಣೆ ಮಾಡಿದ್ದರೂ, ಈ ಬಗ್ಗೆ ಯಾವುದೇ ಅಧಿಕೃತ ಒಡಂಬಡಿಕೆ ಆಗಿಲ್ಲ. ಟೆಹ್ರಾನ್ ಕಡೆಯಿಂದ ಬೆಳಗ್ಗೆ ನಾಲ್ಕು ಗಂಟೆಯಿಂದ ಯಾವುದೇ ದಾಳಿ ಆಗಿಲ್ಲ. ಇಸ್ರೇಲ್ ಇದನ್ನು ಉಲ್ಲಂಘಿಸಿ ದಾಳಿ ನಡೆಸಿದರೆ ನಾವು ಪ್ರತ್ಯುತ್ತರ ನೀಡಲು ಮುಕ್ತವಾಗಿದ್ದೇವೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಹೇಳಿದ್ದಾರೆ. ಇರಾನ್ ಮಾತುಕತೆ ಮೂಲಕ ಬಗೆಹರಿಸಲು ರೆಡಿಯಾಗಿದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ ಎಂದು ಅರಾಗ್ಚಿ ಹೇಳಿದ್ದಾರೆ.
Despite the announcement of a ceasefire between Israel and Iran, hostilities continue to escalate, drawing sharp criticism from U.S. President Donald Trump, who has urged Israel to halt military operations immediately.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm