ಬ್ರೇಕಿಂಗ್ ನ್ಯೂಸ್
25-06-25 11:10 am HK News Desk ದೇಶ - ವಿದೇಶ
ನವದೆಹಲಿ, ಜೂನ್ 24 : ಇಸ್ರೇಲ್ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಿಸಿದ್ದರೂ ಉಭಯ ದೇಶಗಳು ಯುದ್ಧದಲ್ಲಿ ತೊಡಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕೂಡಲೇ ಸೇನಾ ಕಾರ್ಯಾಚರಣೆ ನಿಲ್ಲಿಸಿ ಎಂದು ಇಸ್ರೇಲ್ ಗೆ ಎಚ್ಚರಿಕೆ ನೀಡಿದ್ದಾರೆ.
12 ದಿನಗಳ ಇಸ್ರೇಲ್ ಮತ್ತು ಇರಾನ್ ಯುದ್ಧಕ್ಕೆ ಮಂಗಳವಾರ ಬೆಳಗ್ಗೆ ಅಮೆರಿಕ ಕದನ ವಿರಾಮ ಘೋಷಣೆ ಮಾಡಿತ್ತು. ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದ್ದು ಇಸ್ರೇಲ್ ಮೇಲೆ ಅಟ್ಯಾಕ್ ಮಾಡಿತ್ತು. ಇದೇ ನೆಪವೊಡ್ಡಿ ಇಸ್ರೇಲ್ ಮರು ದಾಳಿಗೆ ಮುಂದಾಗಿದ್ದು ತಕ್ಕ ಪ್ರತ್ಯುತ್ತರ ನೀಡುವಂತೆ ಸೇನಾ ಪಡೆಗೆ ಸೂಚಿಸಿದೆ. ದಕ್ಷಿಣ ಇಸ್ರೇಲಿನ ಬೀರ್ ಶೆವಾದ ಮೇಲೆ ಕ್ಷಿಪಣಿ ದಾಳಿಯಾಗಿದ್ದರಿಂದ ಏಳು ಮಂದಿ ಸಾವು ಕಂಡಿದ್ದಾರೆ.
ಈ ಮಧ್ಯೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸದಂತೆ ಇಸ್ರೇಲ್ಗೆ ತಮ್ಮ ಟ್ರುತ್ ಸೋಶಿಯಲ್ ಪೋಸ್ಟ್ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾಕೀತು ಮಾಡಿದ್ದಾರೆ. ನೀವು ಈಗ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದರೆ, ಬಹುದೊಡ್ಡ ಯುದ್ಧ ವಿರಾಮ ಉಲ್ಲಂಘನೆಯಾಗಲಿದೆ. ನಿಮ್ಮ ವಿಮಾನಗಳನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಟ್ರಂಪ್ ಸೂಚಿಸಿದ್ದಾರೆ.
ಅಮೆರಿಕ ಕದನ ವಿರಾಮ ಘೋಷಣೆ ಮಾಡಿದ್ದರೂ, ಈ ಬಗ್ಗೆ ಯಾವುದೇ ಅಧಿಕೃತ ಒಡಂಬಡಿಕೆ ಆಗಿಲ್ಲ. ಟೆಹ್ರಾನ್ ಕಡೆಯಿಂದ ಬೆಳಗ್ಗೆ ನಾಲ್ಕು ಗಂಟೆಯಿಂದ ಯಾವುದೇ ದಾಳಿ ಆಗಿಲ್ಲ. ಇಸ್ರೇಲ್ ಇದನ್ನು ಉಲ್ಲಂಘಿಸಿ ದಾಳಿ ನಡೆಸಿದರೆ ನಾವು ಪ್ರತ್ಯುತ್ತರ ನೀಡಲು ಮುಕ್ತವಾಗಿದ್ದೇವೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಹೇಳಿದ್ದಾರೆ. ಇರಾನ್ ಮಾತುಕತೆ ಮೂಲಕ ಬಗೆಹರಿಸಲು ರೆಡಿಯಾಗಿದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ ಎಂದು ಅರಾಗ್ಚಿ ಹೇಳಿದ್ದಾರೆ.
Despite the announcement of a ceasefire between Israel and Iran, hostilities continue to escalate, drawing sharp criticism from U.S. President Donald Trump, who has urged Israel to halt military operations immediately.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm