ಬ್ರೇಕಿಂಗ್ ನ್ಯೂಸ್
25-06-25 11:10 am HK News Desk ದೇಶ - ವಿದೇಶ
ನವದೆಹಲಿ, ಜೂನ್ 24 : ಇಸ್ರೇಲ್ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಿಸಿದ್ದರೂ ಉಭಯ ದೇಶಗಳು ಯುದ್ಧದಲ್ಲಿ ತೊಡಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕೂಡಲೇ ಸೇನಾ ಕಾರ್ಯಾಚರಣೆ ನಿಲ್ಲಿಸಿ ಎಂದು ಇಸ್ರೇಲ್ ಗೆ ಎಚ್ಚರಿಕೆ ನೀಡಿದ್ದಾರೆ.
12 ದಿನಗಳ ಇಸ್ರೇಲ್ ಮತ್ತು ಇರಾನ್ ಯುದ್ಧಕ್ಕೆ ಮಂಗಳವಾರ ಬೆಳಗ್ಗೆ ಅಮೆರಿಕ ಕದನ ವಿರಾಮ ಘೋಷಣೆ ಮಾಡಿತ್ತು. ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದ್ದು ಇಸ್ರೇಲ್ ಮೇಲೆ ಅಟ್ಯಾಕ್ ಮಾಡಿತ್ತು. ಇದೇ ನೆಪವೊಡ್ಡಿ ಇಸ್ರೇಲ್ ಮರು ದಾಳಿಗೆ ಮುಂದಾಗಿದ್ದು ತಕ್ಕ ಪ್ರತ್ಯುತ್ತರ ನೀಡುವಂತೆ ಸೇನಾ ಪಡೆಗೆ ಸೂಚಿಸಿದೆ. ದಕ್ಷಿಣ ಇಸ್ರೇಲಿನ ಬೀರ್ ಶೆವಾದ ಮೇಲೆ ಕ್ಷಿಪಣಿ ದಾಳಿಯಾಗಿದ್ದರಿಂದ ಏಳು ಮಂದಿ ಸಾವು ಕಂಡಿದ್ದಾರೆ.
ಈ ಮಧ್ಯೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸದಂತೆ ಇಸ್ರೇಲ್ಗೆ ತಮ್ಮ ಟ್ರುತ್ ಸೋಶಿಯಲ್ ಪೋಸ್ಟ್ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾಕೀತು ಮಾಡಿದ್ದಾರೆ. ನೀವು ಈಗ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದರೆ, ಬಹುದೊಡ್ಡ ಯುದ್ಧ ವಿರಾಮ ಉಲ್ಲಂಘನೆಯಾಗಲಿದೆ. ನಿಮ್ಮ ವಿಮಾನಗಳನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಟ್ರಂಪ್ ಸೂಚಿಸಿದ್ದಾರೆ.
ಅಮೆರಿಕ ಕದನ ವಿರಾಮ ಘೋಷಣೆ ಮಾಡಿದ್ದರೂ, ಈ ಬಗ್ಗೆ ಯಾವುದೇ ಅಧಿಕೃತ ಒಡಂಬಡಿಕೆ ಆಗಿಲ್ಲ. ಟೆಹ್ರಾನ್ ಕಡೆಯಿಂದ ಬೆಳಗ್ಗೆ ನಾಲ್ಕು ಗಂಟೆಯಿಂದ ಯಾವುದೇ ದಾಳಿ ಆಗಿಲ್ಲ. ಇಸ್ರೇಲ್ ಇದನ್ನು ಉಲ್ಲಂಘಿಸಿ ದಾಳಿ ನಡೆಸಿದರೆ ನಾವು ಪ್ರತ್ಯುತ್ತರ ನೀಡಲು ಮುಕ್ತವಾಗಿದ್ದೇವೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಹೇಳಿದ್ದಾರೆ. ಇರಾನ್ ಮಾತುಕತೆ ಮೂಲಕ ಬಗೆಹರಿಸಲು ರೆಡಿಯಾಗಿದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ ಎಂದು ಅರಾಗ್ಚಿ ಹೇಳಿದ್ದಾರೆ.
Despite the announcement of a ceasefire between Israel and Iran, hostilities continue to escalate, drawing sharp criticism from U.S. President Donald Trump, who has urged Israel to halt military operations immediately.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm