ಬ್ರೇಕಿಂಗ್ ನ್ಯೂಸ್
07-07-25 08:45 pm HK News Desk ದೇಶ - ವಿದೇಶ
ಪಾಟ್ನಾ, ಜುಲೈ 7 : ಫೇಸ್ಬುಕ್ ನಲ್ಲಿ ಪರಿಚಯವಾದ ಮುಸ್ಲಿಂ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಹಿಂದು ಯುವತಿಯನ್ನು ಗೋಮಾಂಸ ತಿನ್ನಿಸಿ ಇಸ್ಲಾಮಿಗೆ ಮತಾಂತರವಾಗುವಂತೆ ಒತ್ತಡ ಹೇರಿದ ಘಟನೆ ಬಿಹಾರದಲ್ಲಿ ನಡೆದಿದ್ದು, ಯುವತಿ ಪೊಲೀಸ್ ದೂರು ನೀಡಿ ತನ್ನನ್ನು ತನ್ನದೇ ಊರಿಗೆ ತಲುಪಿಸುವಂತೆ ಗೋಗರೆದಿದ್ದಾಳೆ.
ಯುವತಿ ಮಧ್ಯಪ್ರದೇಶದ ಇಂದೋರ್ ಮೂಲದ ಆರತಿ ಎಂಬಾಕೆಯಾಗಿದ್ದು, ಬಿಹಾರದ ಬೆಗುಸರಾಯ್ ಜಿಲ್ಲೆಯ ನಿವಾಸಿ ಮೊಹಮ್ಮದ್ ಶಹಬಾಜ್ ಎಂಬಾತನನ್ನು ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದಳು. ಇದೀಗ ತನ್ನನ್ನು ಗೋಮಾಂಸ ತಿನ್ನುವಂತೆ ಹಾಗೂ ಇಸ್ಲಾಮಿಗೆ ಮತಾಂತರ ಆಗಲು ಒತ್ತಡ ಹೇರುತ್ತಿದ್ದಾನೆ. ನನ್ನ ಮೊಬೈಲಿನಲ್ಲಿದ್ದ ಹಿಂದು ದೇವರ ಫೋಟೋಗಳನ್ನು ಡಿಲೀಟ್ ಮಾಡಿದ್ದಾನೆ. ನಿರಾಕರಿಸಿದ್ದಕ್ಕೆ ಹಲ್ಲೆ ಮಾಡಿದ್ದಾನೆಂದು ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ.
ಫೇಸ್ಬುಕ್ ನಲ್ಲಿ ಪರಿಚಯವಾದ ಸಂದರ್ಭದಲ್ಲಿ ತನ್ನನ್ನು ಚಿನ್ನ ಮತ್ತು ಬೆಳ್ಳಿಯ ವ್ಯಾಪಾರಿಯೆಂದು ಶಹಬಾಜ್ ಪರಿಚಯಿಸಿಕೊಂಡಿದ್ದ. ಆದರೆ ಇಲ್ಲಿ ಬಂದು ನೋಡಿದಾಗ ಆತ ಅಂಗಡಿ ಒಂದರಲ್ಲಿ ಮಾಲೆ ನೇಯುವ ಕೆಲಸ ಮಾಡುತ್ತಿದ್ದ. ಆದರೂ ಜೊತೆಗೆ ವಾಸ ಮಾಡಿದ್ದೆ. ಈಗ ಈ ರೀತಿ ಮಾಡುತ್ತಿರುವುದರಿಂದ ನನ್ನನ್ನು ಬದುಕಲು ಬಿಡುತ್ತಾನೆಂಬ ನಂಬಿಕೆ ಇಲ್ಲ ಎಂದು ಹೇಳಿರುವ ಯುವತಿ, ನಾನು ಆತನ ವಿರುದ್ಧ ದೂರು ಕೊಟ್ಟು ಎಫ್ಐಆರ್ ದಾಖಲಿಸಲು ಹೇಳುವುದಿಲ್ಲ. ನನ್ನನ್ನು ಮರಳಿ ಇಂದೋರ್ ತಲುಪಿಸಿ ಎಂದು ಪೊಲೀಸರಲ್ಲಿ ಕೇಳಿಕೊಂಡಿದ್ದಾಳೆ.
ಮದುವೆಯಾಗಿ ಬಂದ ನಂತರ ಹೆತ್ತವರ ಜೊತೆಗೆ ಸಂಪರ್ಕ ಇಟ್ಟುಕೊಂಡಿಲ್ಲ. ಅವರು ನಾನು ಸತ್ತಿರಬಹುದು ಎಂದು ಭಾವಿಸಿರಬಹುದು. ಆದರೆ ಮರಳಿ ನನ್ನ ಊರಿಗೆ ಹೋಗಲೇಬೇಕೆಂದು ಈಗ ಬಯಕೆಯಾಗಿದೆ ಎಂದು ಆಕೆ ತಿಳಿಸಿದ್ದಾಳೆ. ಆದರೆ ಶಹಬಾಜ್ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದು, ಆಕೆ ಮಕ್ಕಳಾಗದಂತೆ ಆಪರೇಶನ್ ಮಾಡಿಕೊಂಡಿದ್ದು, ಮುಂದೆಯೂ ಮಕ್ಕಳು ಆಗಲ್ಲ. ಬೇರೆ ಪುರುಷರ ಜೊತೆಗೂ ಸಂಬಂಧ ಹೊಂದಿದ್ದು, ನನ್ನ ಜೊತೆಗಿದ್ದ ಐದು ವರ್ಷದಲ್ಲಿ ಮೂರು ಬಾರಿ ಮನೆಯಿಂದ ಓಡಿ ಹೋಗಿದ್ದಾಳೆ ಎಂದು ಹೇಳಿದ್ದಾನೆ. ಎಸ್ಪಿ ಸುಬೋಧ್ ಕುಮಾರ್, ಆಕೆ ದೂರು ಕೊಡಲು ಮುಂದೆ ಬರುತ್ತಿಲ್ಲ. ತನ್ನನ್ನು ಮರಳಿ ಇಂದೋರ್ ತಲುಪಿಸುವಂತೆ ದೂರಿನಲ್ಲಿ ಕೇಳಿಕೊಂಡಿದ್ದಾಳೆ. ಸದ್ಯಕ್ಕೆ ನಿಗಾ ಕೇಂದ್ರದಲ್ಲಿ ಇರಿಸಿದ್ದು, ಇಂದೋರ್ ತಲುಪಿಸಲು ಏರ್ಪಾಡು ಮಾಡುತ್ತೇವೆ ಎಂದಿದ್ದಾರೆ.
A woman from Indore alleged that her husband from Begusarai, Bihar forced her to eat beef and change her religion after marriage. The couple met on Facebook and married five years ago.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm