ಬ್ರೇಕಿಂಗ್ ನ್ಯೂಸ್
16-07-25 09:58 pm HK News Desk ದೇಶ - ವಿದೇಶ
ಕೊಲ್ಲಂ, ಜುಲೈ 16: ಯೆಮೆನ್ನಲ್ಲಿ ನರ್ಸ್ ನಿಮಿಷಾ ಪ್ರಿಯಾಗೆ ಗಲ್ಲು ಶಿಕ್ಷೆ ಜಾರಿ ಸದ್ಯಕ್ಕೆ ಮುಂದೂಡಿಕೆಯಾದರೂ, ಕೊಲೆಯಾದ ವ್ಯಕ್ತಿಯ ಕುಟುಂಬಸ್ಥರು ಬ್ಲಡ್ ಮನಿಗೆ ನಿರಾಕರಿಸಿದ್ದಾರೆ. ಕೇರಳದ ಪ್ರಭಾವಿ ಸುನ್ನಿ ಮುಸ್ಲಿಂ ಧರ್ಮಗುರು ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಅವರ ಮಧ್ಯಪ್ರವೇಶದ ನಂತರ ಶಿಕ್ಷೆ ಮುಂದೂಡಲಾಗಿತ್ತು. ಸದ್ಯಕ್ಕೆ ನಿಮಿಷಾ ಗಲ್ಲು ಶಿಕ್ಷೆಯಿಂದ ಬಚಾವ್ ಆಗಿದ್ದರೂ, ಮೃತನ ಕುಟುಂಬದ ನಿಲುವಿನ ಮೇಲೆ ನಿಂತಿದೆ.
ನರ್ಸ್ ನಿಮಿಷಾ ಪರವಾಗಿ ದಾನಿಗಳ ನೆರವಿನಿಂದ ದೊಡ್ಡ ಮೊತ್ತದ ಪರಿಹಾರ ನೀಡಲು ಸಿದ್ಧರಿದ್ದರೂ, ಯೆಮೆನ್ನಲ್ಲಿರುವ ಮೃತ ವ್ಯಕ್ತಿ ತಲಾಲ್ ಅಬ್ದೋ ಮಹ್ದಿ ಅವರ ಸೋದರ ಮಾತ್ರ ಬ್ಲಡ್ ಮನಿ (ಮೃತರ ಕುಟುಂಬಕ್ಕೆ ಅವರು ಕೇಳಿದಷ್ಟು ಆರ್ಥಿಕ ಸಹಾಯ ನೀಡುವುದು) ಸ್ವೀಕರಿಸಲು ಒಪ್ಪಿಕೊಂಡಿಲ್ಲ. ಹೀಗಾಗಿ ಪ್ರಕರಣ ಇನ್ನಷ್ಟು ಜಟಿಲವಾಗಿದ್ದು ಕುಟುಂಬದ ಮನವೊಲಿಕೆ ಮುಂದುವರಿದಿದೆ.
ನಿಮಿಷಾ ಪ್ರಿಯಾ ಅವರ ವಕೀಲ ಸುಭಾಷ್ ಚಂದ್ರನ್ ಕೆ.ಆರ್ ಅವರು ಕಾಂತಪುರಂ ಅಬೂಬಕರ್ ಮುಸ್ಲಿಯಾರ್ ಮೂಲಕ ತಲಾಲ್ ಅಬ್ದೋ ಮಹ್ದಿ ಅವರ ಕುಟುಂಬ ಸದಸ್ಯರನ್ನು ಮನವೊಲಿಸಲು ಮುಂದಾಗಿದ್ದಾರೆ. ನಿಮಿಷಾ ಪರವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಹೆಸರಲ್ಲಿ ಕ್ರೌಡ್ ಫಂಡಿಂಗ್ ಮಾಡಲಾಗುತ್ತಿದ್ದು ಕೇರಳ ಮೂಲದ ಗಲ್ಫ್ ಉದ್ಯಮಿಗಳು ನೆರವು ನೀಡಿದ್ದಾರೆ. ಕೇರಳ ಮೂಲದ ಲುಲ್ಲು ಮಾಲ್ ಮಾಲೀಕ ಸೇರಿದಂತೆ ಹಲವು ಉದ್ಯಮಿಗಳ ನೆರವಿನಿಂದ 12 ಕೋಟಿಯಷ್ಟು ಬ್ಲಡ್ ಮನಿ ನೀಡಲು ಕುಟುಂಬಕ್ಕೆ ಆಫರ್ ಮಾಡಲಾಗಿದೆ.
ಆದರೆ ತಲಾಲ್ ಅಬ್ದೋ ಮಹ್ದಿ ಅವರ ಕುಟುಂಬವು ಬ್ಲಡ್ ಮನಿ ಸ್ವೀಕರಿಸಲು ನಿರಾಕರಿಸಿದ್ದು ಆರೋಪಿಗೆ ಕ್ಷಮೆ ನೀಡುವುದಿಲ್ಲ. ಷರಿಯಾ ಪ್ರಕಾರ ಗಲ್ಲು ಶಿಕ್ಷೆಯನ್ನೇ ಜಾರಿಗೊಳಿಸಬೇಕು ಎಂದು ಪಟ್ಟು ಹಿಡಿದಿದೆ ಎನ್ನಲಾಗುತ್ತಿದೆ.
ಗಲ್ಲು ಶಿಕ್ಷೆಗೆ ಬದಲಾಗಿ ಕ್ಷಮಾದಾನಕ್ಕೆ ಬ್ಲಡ್ ಮನಿ ಮೂಲಕ, ಕೊಲ್ಲಲ್ಪಟ್ಟ ವ್ಯಕ್ತಿಯ ಕುಟುಂಬಕ್ಕೆ ಕೇಳಿದಷ್ಟು ಹಣವನ್ನು ಪಾವತಿಸುವ ಅಂಶ ಷರಿಯಾ ಕಾನೂನಿನಲ್ಲಿದೆ. ಇದನ್ನು, ಯೆಮೆನ್, ಸೌದಿ ಅರೆಬಿಯಾ ಸೇರಿದಂತೆ ಹಲವು ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಅನುಸರಿಸಲಾಗುತ್ತದೆ.
The life of Kerala-based nurse Nimisha Priya - who was facing execution in Yemen - has been temporarily spared thanks to the timely intervention of prominent religious figures across two countries.The Grand Mufti of India, Sheikh Abubakr Ahmad, had reached out to renowned Yemeni cleric Sheikh Umar bin Hafiz to intercede with the family of Talal Abdol Mehdi - Priya's Yemeni employer whom she killed inadvertently.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm