ಬ್ರೇಕಿಂಗ್ ನ್ಯೂಸ್
20-07-25 04:47 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 20 : ಸಿಆರ್ಪಿಎಫ್ ಯೋಧನೊಬ್ಬ ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಪ್ರಿಯತಮೆಯೂ, ವೃತ್ತಿಯಲ್ಲಿ ಎಎಸ್ಐ ಆಗಿದ್ದ ಯುವತಿಯನ್ನು ಇರಿದು ಕೊಂದು ಬಳಿಕ ಆಕೆ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಠಾಣೆಯಲ್ಲಿ ಶರಣಾದ ಘಟನೆ ಗುಜರಾತ್ನ ಕಚ್ ಜಿಲ್ಲೆಯ ಅಂಜಾರ್ನಲ್ಲಿ ನಡೆದಿದೆ.
ಅರುಣಾಬೆನ್ ನಟುಭಾಯಿ ಜಾದವ್ (25) ಕೊಲೆಯಾದ ಯುವತಿಯಾಗಿದ್ದು ಕಛ್ ಜಿಲ್ಲೆಯ ಅಂಜಾರ್ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಹತ್ಯೆಗೈದ ಆರೋಪಿ ದಿಲೀಪ್ ಡಾಂಗ್ಚಿಯಾ ಸಿಆರ್ಪಿಎಫ್ ಯೋಧನಾಗಿದ್ದು, ಇಬ್ಬರೂ ಹಲವು ವರ್ಷಗಳಿಂದ ಲಿವ್ ಇನ್ನಲ್ಲಿದ್ದರು. ಹತ್ಯೆಯ ಬಳಿಕ ಆರೋಪಿ ಆಕೆ ಕೆಲಸ ಮಾಡುತ್ತಿದ್ದ ಅಂಜಾರ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಶುಕ್ರವಾರ ರಾತ್ರಿ ಅರುಣಾಬೆನ್ ಮತ್ತು ಆರೋಪಿ ಮನೆಯಲ್ಲಿ ಜಗಳವಾಡಿದ್ದು ಈ ವೇಳೆ ತಾಯಿ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಕ್ಕೆ ಕೊಲೆ ಮಾಡಿರುವುದಾಗಿ ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. 2021ರಲ್ಲಿ ಇನ್ಸ್ಟಾಗ್ರಾಮ್ ಮೂಲಕ ಇಬ್ಬರು ಪರಿಚಯ ಆಗಿದ್ದರು. ಬಳಿಕ ಪರಿಚಯ ಪ್ರೇಮಕ್ಕೆ ತಿರುಗಿ, ಒಟ್ಟಿಗೆ ವಾಸವಿದ್ದರು. ಇಬ್ಬರೂ ಮುಂದೆ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇದರ ನಡುವೆಯೇ ಇವರ ಬಾಳಲ್ಲಿ ದುರಂತ ನಡೆದುಹೋಗಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಇವರು ವಾಸವಿದ್ದ ಕೊಠಡಿಯಲ್ಲೇ ಸಣ್ಣ ವಿಚಾರಕ್ಕೆ ಜಗಳ ಶುರುವಾಗಿದ್ದು ದಿಲೀಪ್ ತನ್ನ ಪ್ರಿಯತಮೆಯನ್ನು ಕತ್ತು ಹಿಸುಕಿ ಕೊಂದು ಪೊಲೀಸರಿಗೆ ಶರಣಾಗಿದ್ದಾರೆ.
In a shocking incident from Anjar in Gujarat’s Kutch district, a Central Reserve Police Force (CRPF) jawan allegedly strangled his live-in partner, who was serving as an Assistant Sub-Inspector (ASI), and later surrendered at the very police station where she was posted.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm