ಬ್ರೇಕಿಂಗ್ ನ್ಯೂಸ್
23-12-20 08:51 pm Headline Karnataka News Network ದೇಶ - ವಿದೇಶ
ಇಸ್ಲಮಾಬಾದ್, ಡಿ.23: ಪಾಕಿಸ್ತಾನದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಾಗಿದೆ. ಜೊತೆಗೆ ಹಣದುಬ್ಬರವೂ ಏರಿಕೆಯಾಗಿದ್ದು, ಅಲ್ಲಿ ನಿತ್ಯವಸ್ತುಗಳ ಬೆಲೆ ಗಗನಕ್ಕೇರಿದೆ.
ಅಲ್ಲಿನ ಪರಿಸ್ಥಿತಿ ಎಲ್ಲಿಗೆ ಮುಟ್ಟಿದೆ ಅಂದ್ರೆ, ಕೋಳಿ ಮೊಟ್ಟೆಯ ದರ 30 ರೂಪಾಯಿ ಆಗಿದೆ. ಮೊಟ್ಟೆ ಸಾಮಾನ್ಯವಾಗಿ ಅತಿ ಹೆಚ್ಚು ಬಳಕೆಯಾಗುವ ವಸ್ತು. ಆದರೆ, ಜನಸಾಮಾನ್ಯರು ಅಲ್ಲೀಗ ಮೊಟ್ಟೆ ಕೊಂಡು ತಿನ್ನುವ ಹಾಗಿಲ್ಲ. ಡಜನ್ ಮೊಟ್ಟೆಯನ್ನು ಕೊಳ್ಳುವುದಾದರೆ 240 ರೂ.ಗೆ ನೀಡಲಾಗುತ್ತದೆ. ಒಂದು ಮೊಟ್ಟೆ ಖರೀದಿಸಲು ಬಂದರೆ 30 ರೂಪಾಯಿ ನೀಡಬೇಕಾಗುತ್ತದೆ.
ಇನ್ನು ಕೋಳಿ ಮಾಂಸದ ದರವೂ ವಿಪರೀತವಾಗಿ ಏರಿಕೆಯಾಗಿದೆ. ಕೋಳಿ ಮಾಂಸ ಕೇಜಿಗೆ 300 ರೂ.ಗೆ ಏರಿದ್ದು ಚಳಿಗಾಲದಲ್ಲಿ ಮಾಂಸ ಪ್ರಿಯರು ಕೈಸುಟ್ಟುಕೊಂಡಿದ್ದಾರೆ. ಇದರ ಜೊತೆ ಶುಂಠಿಯ ದರವೂ ಭಾರೀ ಏರಿಕೆ ಕಂಡಿದೆ. ಶುಂಠಿಗೆ ಕೇಜಿಗೆ ಒಂದು ಸಾವಿರಕ್ಕಿಂತಲೂ ಹೆಚ್ಚು ಬೆಲೆಯಾಗಿದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಪಾಕಿಸ್ತಾನದ ಜನರು ಮೊಟ್ಟೆ ಮತ್ತು ಶುಂಠಿಯನ್ನು ಹೆಚ್ಚಾಗಿ ಬಳಸುತ್ತಾರೆ. ಇದಲ್ಲದೆ ದಿನವಹಿ ಬಳಸುವ ಬಹುತೇಕ ವಸ್ತುಗಳ ದರವೂ ದುಪ್ಪಟ್ಟಾಗಿದೆ. ಸಕ್ಕರೆ ಬೆಲೆ ಕೇಜಿಗೆ 100 ರೂ. ಗಡಿ ದಾಟಿದ್ದರೆ, ಗೋಧಿ ಬೆಲೆ ಕೇಜಿಗೆ 60 ರೂ. ಆಗಿದೆ. ಗೋಧಿ ಹಿಟ್ಟಿನ ದರ ಇನ್ನಷ್ಟು ಹೆಚ್ಚಿರುವ ಬಗ್ಗೆ ಅಲ್ಲಿನ ವರದಿಗಳು ಹೇಳುತ್ತವೆ. ಪಾಕಿಸ್ತಾನದಲ್ಲಿ ಶೇ.25ರಿಂದ 30 ಪರ್ಸೆಂಟ್ ಜನರು ಬಡತನ ರೇಖೆಗಿಂತ ಕೆಳಗಿದ್ದು ಎರಡು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಉಂಟಾಗಿದೆ.
ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಸರಕಾರ ಆಡಳಿತಕ್ಕೆ ಬಂದ ಮೇಲೆ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎನ್ನಲಾಗುತ್ತಿದ್ದು, ದಿನವಹಿ ವಸ್ತುಗಳ ದರ ಗಗನಮುಖಿಯಾಗುತ್ತಿರುವುದು ಬಡಜನರ ಮೇಲೆ ಬರೆ ಎಳೆದಿದೆ. ಪಾಕಿಸ್ತಾನದ ಬಹುತೇಕ ರಾಜ್ಯಗಳಲ್ಲಿ ನಿತ್ಯಸಾಮಗ್ರಿಗಳ ದರ ಏರಿಕೆಯಾಗಿದ್ಯಂತೆ.
Various poultry products are getting dearer by the day. The rate of eggs reached Rs240 per dozen mark on Wednesday, breaking all the previous records of the increase in the price in winters.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm