ಬ್ರೇಕಿಂಗ್ ನ್ಯೂಸ್
21-07-25 09:56 pm HK News Desk ದೇಶ - ವಿದೇಶ
ಢಾಕಾ, ಜುಲೈ 21 : ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನವು ರಾಜಧಾನಿ ಢಾಕಾದಲ್ಲಿ ಶಾಲಾ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದು ದುರಂತಕ್ಕೀಡಾಗಿದ್ದು 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಸೇರಿ 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಢಾಕಾದ ಉತ್ತರ ಭಾಗದ ಮೈಲ್ ಸ್ಟೋನ್ ಸ್ಕೂಲ್ ಮತ್ತು ಕಾಲೇಜು ಕಟ್ಟಡಕ್ಕೆ ಬಾಂಗ್ಲಾದೇಶ ವಾಯುಪಡೆಯ ಚೀನಾ ನಿರ್ಮಿತ
F-7 BGI ತರಬೇತಿ ವಿಮಾನ ಡಿಕ್ಕಿಯಾಗಿದೆ. ತಾಂತ್ರಿಕ ದೋಷದಿಂದಾಗಿ ವಿಮಾನ ಕೆಳಕ್ಕೆ ಬಿದ್ದಿದೆ ಎನ್ನಲಾಗುತ್ತಿದೆ. ದುರಂತದಲ್ಲಿ 20 ಜನರ ಶವಗಳು ಪತ್ತೆಯಾಗಿದ್ದು, 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಬಾಂಗ್ಲಾ ಸರ್ಕಾರ ಸಮಗ್ರ ತನಿಖೆಗೆ ಆದೇಶಿಸಿದೆ.
ವಿಮಾನ ಬೀಳುತ್ತಿದ್ದಂತೆ ಸ್ಫೋಟಗೊಂಡು ಭಾರೀ ಹೊಗೆ ಆವರಿಸಿದೆ. ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ, ಸೇನಾ ಸಿಬ್ಬಂದಿ ಗಾಯಗೊಂಡ ವಿದ್ಯಾರ್ಥಿಗಳನ್ನು ರಕ್ಷಿಸಿ ರಿಕ್ಷಾ ಮತ್ತು ಇತರ ವಾಹನಗಳಲ್ಲಿ ಆಸ್ಪತ್ರೆಗೆ ಸಾಗಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಬಾಂಗ್ಲಾದೇಶದ ವಾಯುಪಡೆ ವಿಮಾನ ಪತನವನ್ನು ಖಚಿತಪಡಿಸಿದೆ.
ಕಾಲೇಜಿನ ಶಿಕ್ಷಕರು ಮತ್ತು ಸಿಬ್ಬಂದಿ ಸ್ಥಳಕ್ಕೆ ಅಗ್ನಿಶಾಮಕ ದಳ ಬರುವ ಮೊದಲೇ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಮೂರು ಅಂತಸ್ತಿನ ಶಾಲಾ ಕಟ್ಟಡದ ಮುಂಭಾಗಕ್ಕೆ ವಿಮಾನವು ಡಿಕ್ಕಿಯಾಗಿದ್ದು ಹಲವಾರು ವಿದ್ಯಾರ್ಥಿಗಳು ದುರಂತದಲ್ಲಿ ಸಿಲುಕಿಕೊಂಡಿದ್ದರು. 30ಕ್ಕೂ ಹೆಚ್ಚು ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ಇಲ್ಲಿ ಶಾಲೆ ಮತ್ತು ಕಾಲೇಜು ತರಗತಿಗಳಿದ್ದು ಒಟ್ಟು 2000 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಹೇಳಿಕೆ ನೀಡಿದ್ದಾರೆ.
A Bangladesh Air Force jet crashed into a college in the capital Dhaka on Monday, killing at least 19 people, according to emergency officials, in the country’s deadliest air incident in recent memory. The crash at Milestone School and College campus, in the Diabari neighborhood of northern Dhaka, injured more than 100 others, according to a spokesperson for the country’s interim leader Muhammad Yunus.
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm