ಬ್ರೇಕಿಂಗ್ ನ್ಯೂಸ್
21-07-25 11:23 pm HK News Desk ದೇಶ - ವಿದೇಶ
ತಿರುವನಂತಪುರಂ, ಜುಲೈ 21 : ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ ಮತ್ತು ಕಮ್ಯುನಿಸ್ಟ್ ಪಕ್ಷದ ಖ್ಯಾತ ನಾಯಕ ವಿ.ಎಸ್. ಅಚ್ಯುತಾನಂದನ್(101) ಸೋಮವಾರ ನಿಧನರಾಗಿದ್ದಾರೆ. ಕಳೆದ ಜೂನ್ 23 ರಂದು ಬೆಳಗ್ಗೆ ಹೃದಯಾಘಾತಕ್ಕೀಡಾಗಿದ್ದ 101 ವರ್ಷದ ಅಚ್ಯುತಾನಂದನ್ ಅವರನ್ನು ತಿರುವನಂತಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
2019 ರಲ್ಲಿ ಪಾರ್ಶ್ವವಾಯುವಿಗೆ ಒಳಗಾದ ನಂತರ ಹಾಸಿಗೆ ಹಿಡಿದಿದ್ದ ಅಚ್ಯುತಾನಂದನ್ ಅವರಿಗೆ ಇತ್ತೀಚಿಗೆ ಹೃದಯಾಘಾತ ಸಂಭವಿಸಿ ಉಸಿರಾಟದ ತೊಂದರೆ ಉಂಟಾಗಿತ್ತು. ಹೀಗಾಗಿ ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು.
ಭಾರತದ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್ವಾದಿ) ಸ್ಥಾಪಕರಲ್ಲಿ ಓರ್ವರಾದ ವಿ.ಎಸ್. ಅಚ್ಯುತಾನಂದನ್ ಕಳೆದ ಅಕ್ಟೋಬರ್ನಲ್ಲಿ 101 ವರ್ಷಕ್ಕೆ ಕಾಲಿಟ್ಟಿದ್ದರು. 1964 ರಲ್ಲಿ ನಡೆದ ಐತಿಹಾಸಿಕ ಸಿಪಿಐ ರಾಷ್ಟ್ರೀಯ ಮಂಡಳಿ ಸಭೆಯಿಂದ ಹೊರನಡೆದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಸ್ಥಾಪಿಸಿದ್ದರು. ಅಚ್ಯುತಾನಂದನ್ ಕೇರಳ ರಾಜಕಾರಣದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ವ್ಯಕ್ತಿ. ಏಳು ಬಾರಿ ಶಾಸಕರಾಗಿದ್ದ ಅವರು, 2006ರಿಂದ 2011ರ ವರೆಗೆ ಕೇರಳ ಮುಖ್ಯಮಂತ್ರಿಯಾಗಿದ್ದರು. ತಮ್ಮ ರಾಜಕೀಯ ಜೀವನದಲ್ಲಿ ಅವರು ಒಟ್ಟು 10 ಚುನಾವಣೆಗಳನ್ನು ಎದುರಿಸಿದ್ದಾರೆ.
ಅಕ್ಟೋಬರ್ 20, 1923 ರಂದು ಶಂಕರನ್ ಮತ್ತು ಅಕ್ಕಮ್ಮ ದಂಪತಿ ಮಗನಾಗಿ ಜನಿಸಿದ ವಿಎಸ್, ನಾಲ್ಕನೇ ವಯಸ್ಸಿನಲ್ಲಿ ತಾಯಿಯನ್ನು ಕಳೆದುಕೊಂಡರು. ನಂತರ ಕಷ್ಟಕರ ಬಾಲ್ಯವನ್ನು ಕಳೆದ ವಿಎಸ್, ಟೈಲರಿಂಗ್ ಅಂಗಡಿಯಲ್ಲಿ ತಮ್ಮ ಸಹೋದರನಿಗೆ ಸಹಾಯ ಮಾಡಲು ತೊಡಗಿದ್ದರು. ನಂತರ ತೆಂಗಿನಕಾಯಿ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಅಲ್ಲಿರುವಾಗಲೇ ಪಿ ಕೃಷ್ಣ ಪಿಳ್ಳೈ ಅವರಿಂದ ರಾಜಕೀಯ ಚಳುವಳಿಗೆ ಪಾದಾರ್ಪಣೆ ಮಾಡಿದ್ದರು, 1938 ರಲ್ಲಿ ಕುಟ್ಟನಾಡಿನಲ್ಲಿ ಕೃಷಿ ಕಾರ್ಮಿಕರನ್ನು ಸಂಘಟಿಸುವ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದವರು ಆನಂತರ ಹಿಂತಿರುಗಿ ನೋಡಿದ್ದೇ ಇಲ್ಲ. ಸೌಮ್ಯ ಮತ್ತು ಸರಳ ಸ್ವಭಾವ, ಅದೇ ರೀತಿಯ ಎಲ್ಲರೊಂದಿಗಿನ ಒಡನಾಟ ಅವರನ್ನು ಮುಖ್ಯಮಂತ್ರಿ ಪದವಿಗೇರಿಸಿತ್ತು.
Former Kerala chief minister and veteran CPM leader V S Achuthanandan passed away at the age of 101, the Communist Party of India (Marxist) said on Monday.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm