ಬ್ರೇಕಿಂಗ್ ನ್ಯೂಸ್
22-07-25 03:04 pm HK News Desk ದೇಶ - ವಿದೇಶ
ತಿರುವನಂತಪುರಂ, ಜುಲೈ 22 : ದೇಶದ ಭದ್ರತೆ ಮತ್ತು ಪಕ್ಷದ ವಿಚಾರದಲ್ಲಿ ಶಶಿ ತರೂರ್ ತನ್ನ ನಿಲುವು ಬದಲಾಯಿಸಿಕೊಳ್ಳುವವರೆಗೂ ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಆಯೋಜಿಸುವ ಪಕ್ಷದ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುರಳೀಧರನ್, ತರೂರ್ ಅವರ ಇತ್ತೀಚಿನ ಹೇಳಿಕೆಗಳು ಪಕ್ಷದ ಸಾಮೂಹಿಕ ನಿಲುವಿನಿಂದ ಅವರನ್ನು ದೂರವಿಟ್ಟಿದೆ. ಅವರು ನಮ್ಮೊಂದಿಗಿಲ್ಲ, ಹೀಗಾಗಿ ಅವರು ಕಾರ್ಯಕ್ರಮ ಬಹಿಷ್ಕರಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ಸೇರಿದಂತೆ ಇತ್ತೀಚಿನ ದೇಶದ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಶಸಾಸ್ತ್ರ ಪಡೆಯನ್ನು ಬಹಿರಂಗವಾಗಿ ಬೆಂಬಲಿಸಿದ ಶಶಿ ತರೂರ್ ಬಗ್ಗೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ನಡುವೆ, ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಶಶಿ ತರೂರ್, ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದರು. ಕಾಂಗ್ರೆಸ್ ನಾಯಕರೊಂದಿಗೆ ತಮ್ಮ ಭಿನ್ನಾಭಿಪ್ರಾಯದ ನಡುವೆ, ಸಂಸದ ಶಶಿ ತರೂರ್, ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಕೆಲವೊಮ್ಮೆ ಇತರ ಪಕ್ಷಗಳೊಂದಿಗೆ ಸಹಕರಿಸುವುದು ಅಗತ್ಯವಾಗುತ್ತದೆ ಎಂದು ಹೇಳಿದ್ದರು.
ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಶಶಿ ತರೂರ್, ತನ್ನ ನಿಲುವು ಬದಲಾಯಿಸಿಕೊಳ್ಳುವವರೆಗೂ ತಿರುವನಂತಪುರಂನಲ್ಲಿ ಆಯೋಜಿಸುವ ಪಕ್ಷದ ಯಾವುದೇ ಸಮಾರಂಭಕ್ಕೂ ಕರೆಯಲ್ಲ. ತರೂರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಪಕ್ಷದ ರಾಷ್ಟ್ರೀಯ ನಾಯಕರಿಗೆ ಬಿಟ್ಟ ವಿಚಾರ ಎಂದು ಮುರಳೀಧರನ್ ಹೇಳಿದ್ದಾರೆ.
ಕೇರಳ ಸಿಎಂ ಸ್ಥಾನಕ್ಕೆ ಶಶಿ ತರೂರ್ ಟಾಪ್ ಆಯ್ಕೆ ಎಂದು ಸೂಚಿಸುವ ಸಮೀಕ್ಷೆಯೊಂದನ್ನು ತರೂರ್ ಹಂಚಿಕೊಂಡ ನಂತರ ಅಸಮಾಧಾನ ಮತ್ತಷ್ಟು ಹೆಚ್ಚಾಗಿತ್ತು. ತರೂರ್ ಯಾವ ಪಕ್ಷಕ್ಕೆ ಸೇರಿದವರು ಎಂಬುದನ್ನು ಮೊದಲು ನಿರ್ಧರಿಸಬೇಕು ಎಂದು ಮುರಳೀಧರನ್ ಟೀಕಿಸಿದ್ದಾರೆ. ಮಲಯಾಳಂ ದೈನಿಕದಲ್ಲಿ ಇತ್ತೀಚೆಗೆ ಇಂದಿರಾ ಗಾಂಧಿ ಮತ್ತು ತುರ್ತು ಪರಿಸ್ಥಿತಿ ಕುರಿತಾದ ಶಶಿ ತರೂರ್ ಲೇಖನ ಪ್ರಕಟವಾದ ನಂತರ ಅವರ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.
Senior Congress leader K. Muraleedharan has made it clear that party MP Dr. Shashi Tharoor will not be invited to any Congress events in Thiruvananthapuram until he changes his stance on matters concerning national security and party positions.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm