ಬ್ರೇಕಿಂಗ್ ನ್ಯೂಸ್
24-07-25 03:29 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 24 : ಬೃಹತ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಸೇರಿದ ದಿಲ್ಲಿ ಮತ್ತು ಮುಂಬೈನ ಕಚೇರಿಗಳ ಮೇಲೆ ಬೃಹತ್ ದಾಳಿ ನಡೆಸಿದೆ. ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿದ್ದ ಎರಡು ಎಫ್ಐಆರ್ಗಳನ್ನು ಆಧರಿಸಿ ಈ ಕಾರ್ಯಾಚರಣೆ ನಡೆದಿದೆ.
ಇ.ಡಿ ಅಧಿಕಾರಿಗಳು ಸುಮಾರು 35 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, 50ಕ್ಕೂ ಹೆಚ್ಚು ಸಂಸ್ಥೆಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬ್ಯಾಂಕ್ಗಳು, ಹೂಡಿಕೆದಾರರು ಮತ್ತು ಸಾರ್ವಜನಿಕ ಸಂಸ್ಥೆಗಳಿಗೆ ವಂಚಿಸಲು ರೂಪಿಸಲಾದ 'ಮೆಗಾ ಪ್ಲ್ಯಾನ್' ಇದಾಗಿದೆ ಎಂದು ಇ.ಡಿ ಆರೋಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 25ಕ್ಕೂ ಹೆಚ್ಚು ಜನರನ್ನು ವಿಚಾರಣೆಗೊಳಪಡಿಸಲಾಗಿದೆ.
ಈ ದಾಳಿಯ ಕೇಂದ್ರಬಿಂದು ಯೆಸ್ ಬ್ಯಾಂಕ್ ಹಗರಣವಾಗಿದೆ. ಆರೋಪಗಳ ಪ್ರಕಾರ, 2017 ಮತ್ತು 2019ರ ನಡುವೆ ಯೆಸ್ ಬ್ಯಾಂಕ್, ಅನಿಲ್ ಅಂಬಾನಿ ಗ್ರೂಪ್ ಕಂಪನಿಗಳಿಗೆ ಸುಮಾರು 3,000 ಕೋಟಿ ರೂ. ಸಾಲ ವಿತರಿಸಿತ್ತು. ಈ ಬೃಹತ್ ಅಸುರಕ್ಷಿತ ಸಾಲಗಳನ್ನು ಮಂಜೂರು ಮಾಡಲು ಯೆಸ್ ಬ್ಯಾಂಕ್ನ ಹಿರಿಯ ಅಧಿಕಾರಿಗಳು ಮತ್ತು ಮಾಜಿ ಪ್ರವರ್ತಕರು ಲಂಚ ಪಡೆದಿದ್ದಾರೆ ಎಂದು ದೂರಲಾಗಿದೆ.
ಸಾಲ ಮಂಜೂರಾತಿ ಕಡತಗಳಲ್ಲಿ ಅಗತ್ಯ ದಾಖಲೆಗಳೂ ಇರಲಿಲ್ಲ. ಅಲ್ಲದೆ ಹಳೆಯ ಸಾಲವನ್ನು ತೀರಿಸಲು ಹೊಸ ಸಾಲಗಳನ್ನು ನೀಡುವ ಮೂಲಕ ವಂಚನೆ ಎಸಗಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಪ್ರಕರಣದ ತನಿಖೆಗೆ ರಾಷ್ಟ್ರೀಯ ವಸತಿ ಬ್ಯಾಂಕ್ (ಎನ್ಎಚ್ಬಿ), ಸೆಬಿ, ರಾಷ್ಟ್ರೀಯ ಹಣಕಾಸು ವರದಿ ಪ್ರಾಧಿಕಾರ (ಎನ್ಎಫ್ಆರ್ಎ) ಮತ್ತು ಬ್ಯಾಂಕ್ ಆಫ್ ಬರೋಡಾದಂತಹ ಸಂಸ್ಥೆಗಳು ತಮ್ಮ ತನಿಖಾ ವರದಿಗಳನ್ನು ಇ.ಡಿ ಯೊಂದಿಗೆ ಹಂಚಿಕೊಂಡಿವೆ. ಈ ಎಲ್ಲಾ ದಾಖಲೆಗಳನ್ನು ವಿಶ್ಲೇಷಣೆ ಮಾಡಿ, ಇ.ಡಿ ಇದೀಗ ಅನಿಲ್ ಅಂಬಾನಿ ಮೇಲೆ ಮುಗಿಬಿದ್ದಿದೆ.
ಸೆಬಿ ನೀಡಿದ ವರದಿಯಲ್ಲಿ, ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್ ಕಂಪನಿಯಲ್ಲಿ ಗಂಭೀರ ಅಕ್ರಮಗಳು ನಡೆದಿರುವುದಾಗಿ ಹೇಳಲಾಗೊದೆ. ಕೇವಲ ಒಂದೇ ವರ್ಷದಲ್ಲಿ, ಅಂದರೆ 2017-18 ರಿಂದ 2018-19ರ ಅವಧಿಯಲ್ಲಿ, ಕಂಪನಿಯ ಕಾರ್ಪೊರೇಟ್ ಸಾಲದ ಮೊತ್ತವು 3,742 ಕೋಟಿ ರೂ.ನಿಂದ 8,670 ಕೋಟಿ ರೂ.ಗೆ ಏರಿಕೆ ಕಾಣುವ ಮೂಲಕ ದ್ವಿಗುಣಗೊಂಡಿದ್ದು, ಇದು ದೊಡ್ಡ ಮಟ್ಟದ ಅಕ್ರಮವನ್ನು ಸೂಚಿಸುತ್ತದೆ.
The Enforcement Directorate (ED) on Thursday launched raids at 35 locations in connection with a loan fraud probe against Anil Ambani-led Reliance Anil Dhirubhai Group companies, people familiar with the development said. Yes Bank officials, including former chairman Rana Kapoor, are also under the scanner, they added.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm