ಬ್ರೇಕಿಂಗ್ ನ್ಯೂಸ್
30-07-25 09:06 am HK News Desk ದೇಶ - ವಿದೇಶ
ನವದೆಹಲಿ, ಜುಲೈ 30 : ಜಗತ್ತಿನ ಯಾವುದೇ ನಾಯಕನೂ ಆಪರೇಷನ್ ಸಿಂಧೂರ್ ನಿಲ್ಲಿಸುವಂತೆ ಕೇಳಿಲ್ಲ. ಬದಲಿಗೆ ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಯವಿಟ್ಟು ದಾಳಿ ನಿಲ್ಲಿಸಿ, ಮತ್ತಷ್ಟು ನಾಶವಾಗಲು ಬಯಸುವುದಿಲ್ಲ ಎಂದು ಮನವಿ ಮಾಡಿದ್ದರಿಂದ ಕದನ ವಿರಾಮ ಘೋಷಿಸಲಾಗಿತ್ತು ಎಂದು ಸಂಸತ್ತಿನಲ್ಲಿ ಆಪರೇಶನ್ ಸಿಂಧೂರ್ ಕುರಿತ ಚರ್ಚೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದರು.
ಪಹಲ್ಗಾಮ್ ಉಗ್ರ ಕೃತ್ಯದ ನಂತರ ಪಾಕಿಸ್ತಾನವು ದೊಡ್ಡ ದಾಳಿ ನಡೆಸಲಿದೆ ಎಂದು ಅಮೆರಿಕದ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದರು. ಆದರೆ ಇದು ಪಾಕಿಸ್ತಾನದ ಉದ್ದೇಶವಾಗಿದ್ದರೆ, ಅವರಿಗೆ ದುಬಾರಿ ಆಗಲಿದೆ ಎಂದು ಉತ್ತರಿಸಿದ್ದೆ. ಪಾಕಿಸ್ತಾನಕ್ಕೆ ಅದರದೇ ಭಾಷೆಯಲ್ಲೇ ಉತ್ತರಿಸುತ್ತೇವೆ. ನಾವು ದೊಡ್ಡ ದಾಳಿ ಮೂಲಕ ಪ್ರತಿಕ್ರಿಯಿಸುತ್ತೇವೆ. ಇದು ಸುಮಾರು ಮೇ 9ನೇ ದಿನಾಂಕದ ವಿಷಯ. 9ನೇ ತಾರೀಖಿನ ರಾತ್ರಿ ಮತ್ತು 10ನೇ ತಾರೀಖಿನ ಬೆಳಗ್ಗೆ, ನಾವು ಪಾಕಿಸ್ತಾನದ ಮಿಲಿಟರಿ ಶಕ್ತಿಯನ್ನು ನಾಶಪಡಿಸಿದ್ದೇವೆ. ಇದು ನಮ್ಮ ಉತ್ತರ ಮತ್ತು ವೈರಿಗಳ ಹುಟ್ಟಡಗಿಸಿದ್ದ ಪರಿಯಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಉತ್ತರ ನೀಡಿದ್ದಾರೆ.
ಮೇ 9ರ ಮಧ್ಯರಾತ್ರಿ ಮತ್ತು ಮೇ 10ರ ಬೆಳಗ್ಗೆ, ನಮ್ಮ ಕ್ಷಿಪಣಿಗಳು ಪಾಕಿಸ್ತಾನ ಸೇನೆಯ ಮೂಳೆಗಳನ್ನು ಹೊಡೆದು ಹಾಕಿ ಪಾಕಿಸ್ತಾನವನ್ನು ಮೊಣಕಾಲೂರುವಂತೆ ಮಾಡಿದ್ದವು. ಬಲವಾದ ಹೊಡೆತ ಬಿದ್ದಾಗ, ಪಾಕಿಸ್ತಾನ ಡಿಜಿಎಂಒ ಕರೆ ಮಾಡಿ, ಸಾಕು ಸಾಕು ಎಂದು ಬೇಡಿಕೊಂಡರು. ದಯವಿಟ್ಟು ದಾಳಿ ನಿಲ್ಲಿಸಿ ಎಂದು ಬೇಡಿಕೊಂಡಿದ್ದರಿಂದ ಮಾತುಕತೆ ನಡೆಸಲಾಗಿತ್ತು. ನಾವು ನಮ್ಮ ಗುರಿಯನ್ನು ಸಾಧಿಸಿದ್ದೇವೆ ಎಂದು ಭಾರತ ಮೊದಲ ದಿನವೇ ಹೇಳಿತ್ತು ಎಂದು ಮೋದಿ ಹೇಳಿದರು.
ಮೇ 10ರಂದು ಆಪರೇಷನ್ ಸಿಂಧೂರ್ ಅಡಿಯಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮವನ್ನು ನಿಲ್ಲಿಸುವುದಾಗಿ ಭಾರತ ಘೋಷಿಸಿದಾಗ, ವಿಪರ್ಯಾಸ ಎಂದರೆ ಇಲ್ಲಿನ ನಾಯಕರು ಆಪರೇಷನ್ ಸಿಂಧೂರ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು. ಪಾಕಿಸ್ತಾನದ ದುರದ್ದೇಶ ಹರಡುವ ಕೆಲಸವನ್ನು ಮಾಡತೊಡಗಿದ್ದರು. ಕೆಲವರು ಸೇನೆ ನೀಡಿದ ಮಾಹಿತಿಗಳ ಬದಲಿಗೆ ಪಾಕಿಸ್ತಾನದ ಸುಳ್ಳುಗಳನ್ನು ಹರಡಿದ್ದರು. ಆದರೆ ಭಾರತದ ನಿಲುವು ಯಾವಾಗಲೂ ಸ್ಪಷ್ಟವಾಗಿತ್ತು ಎಂದು ಮೋದಿ ಹೇಳಿದರು.
ಪಾಕಿಸ್ತಾನ ಯಾವುದೇ ದುಷ್ಕೃತ್ಯಕ್ಕೆ ಮುಂದಾದರೆ ಅದಕ್ಕೆ ಸೂಕ್ತ ಉತ್ತರ ನೀಡಲಾಗುವುದು. ಇಂದಿನ ಭಾರತವು ಆತ್ಮವಿಶ್ವಾಸದಿಂದ ತುಂಬಿದೆ. ಪೂರ್ಣ ಶಕ್ತಿಯೊಂದಿಗೆ ವೇಗವಾಗಿ ಮುನ್ನಡೆಯುತ್ತಿದೆ. ಭಾರತವು ಸ್ವಾವಲಂಬಿಯಾಗುತ್ತಿದೆ ಎಂದು ದೇಶವು ನೋಡುತ್ತಿದೆ. ಆದರೆ ಒಂದೆಡೆ ಭಾರತ ಸ್ವಾವಲಂಬಿಯಾಗುತ್ತಿದೆ. ಆದರೆ ಕಾಂಗ್ರೆಸ್ ಸಮಸ್ಯೆಗಳಿಗೆ ಪಾಕಿಸ್ತಾನವನ್ನು ಅವಲಂಬಿಸಿದೆ ಎಂಬುದನ್ನು ಈ ದೇಶವು ನೋಡುತ್ತಿದೆ. ಏನಿದ್ದರೂ ಆಪರೇಶನ್ ಸಿಂಧೂರ್ ಮುಗಿದಿಲ್ಲ ಎಂದರು
Prime Minister Narendra Modi today made a strong statement in Parliament, clarifying that no foreign leader had requested India to halt Operation Sindhoor. Instead, he revealed that it was a direct plea from Pakistan’s Director General of Military Operations (DGMO) asking for an end to the strikes that led to the announcement of a ceasefire.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm