ಬ್ರೇಕಿಂಗ್ ನ್ಯೂಸ್
30-07-25 09:06 am HK News Desk ದೇಶ - ವಿದೇಶ
ನವದೆಹಲಿ, ಜುಲೈ 30 : ಜಗತ್ತಿನ ಯಾವುದೇ ನಾಯಕನೂ ಆಪರೇಷನ್ ಸಿಂಧೂರ್ ನಿಲ್ಲಿಸುವಂತೆ ಕೇಳಿಲ್ಲ. ಬದಲಿಗೆ ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಯವಿಟ್ಟು ದಾಳಿ ನಿಲ್ಲಿಸಿ, ಮತ್ತಷ್ಟು ನಾಶವಾಗಲು ಬಯಸುವುದಿಲ್ಲ ಎಂದು ಮನವಿ ಮಾಡಿದ್ದರಿಂದ ಕದನ ವಿರಾಮ ಘೋಷಿಸಲಾಗಿತ್ತು ಎಂದು ಸಂಸತ್ತಿನಲ್ಲಿ ಆಪರೇಶನ್ ಸಿಂಧೂರ್ ಕುರಿತ ಚರ್ಚೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದರು.
ಪಹಲ್ಗಾಮ್ ಉಗ್ರ ಕೃತ್ಯದ ನಂತರ ಪಾಕಿಸ್ತಾನವು ದೊಡ್ಡ ದಾಳಿ ನಡೆಸಲಿದೆ ಎಂದು ಅಮೆರಿಕದ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದರು. ಆದರೆ ಇದು ಪಾಕಿಸ್ತಾನದ ಉದ್ದೇಶವಾಗಿದ್ದರೆ, ಅವರಿಗೆ ದುಬಾರಿ ಆಗಲಿದೆ ಎಂದು ಉತ್ತರಿಸಿದ್ದೆ. ಪಾಕಿಸ್ತಾನಕ್ಕೆ ಅದರದೇ ಭಾಷೆಯಲ್ಲೇ ಉತ್ತರಿಸುತ್ತೇವೆ. ನಾವು ದೊಡ್ಡ ದಾಳಿ ಮೂಲಕ ಪ್ರತಿಕ್ರಿಯಿಸುತ್ತೇವೆ. ಇದು ಸುಮಾರು ಮೇ 9ನೇ ದಿನಾಂಕದ ವಿಷಯ. 9ನೇ ತಾರೀಖಿನ ರಾತ್ರಿ ಮತ್ತು 10ನೇ ತಾರೀಖಿನ ಬೆಳಗ್ಗೆ, ನಾವು ಪಾಕಿಸ್ತಾನದ ಮಿಲಿಟರಿ ಶಕ್ತಿಯನ್ನು ನಾಶಪಡಿಸಿದ್ದೇವೆ. ಇದು ನಮ್ಮ ಉತ್ತರ ಮತ್ತು ವೈರಿಗಳ ಹುಟ್ಟಡಗಿಸಿದ್ದ ಪರಿಯಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಉತ್ತರ ನೀಡಿದ್ದಾರೆ.
ಮೇ 9ರ ಮಧ್ಯರಾತ್ರಿ ಮತ್ತು ಮೇ 10ರ ಬೆಳಗ್ಗೆ, ನಮ್ಮ ಕ್ಷಿಪಣಿಗಳು ಪಾಕಿಸ್ತಾನ ಸೇನೆಯ ಮೂಳೆಗಳನ್ನು ಹೊಡೆದು ಹಾಕಿ ಪಾಕಿಸ್ತಾನವನ್ನು ಮೊಣಕಾಲೂರುವಂತೆ ಮಾಡಿದ್ದವು. ಬಲವಾದ ಹೊಡೆತ ಬಿದ್ದಾಗ, ಪಾಕಿಸ್ತಾನ ಡಿಜಿಎಂಒ ಕರೆ ಮಾಡಿ, ಸಾಕು ಸಾಕು ಎಂದು ಬೇಡಿಕೊಂಡರು. ದಯವಿಟ್ಟು ದಾಳಿ ನಿಲ್ಲಿಸಿ ಎಂದು ಬೇಡಿಕೊಂಡಿದ್ದರಿಂದ ಮಾತುಕತೆ ನಡೆಸಲಾಗಿತ್ತು. ನಾವು ನಮ್ಮ ಗುರಿಯನ್ನು ಸಾಧಿಸಿದ್ದೇವೆ ಎಂದು ಭಾರತ ಮೊದಲ ದಿನವೇ ಹೇಳಿತ್ತು ಎಂದು ಮೋದಿ ಹೇಳಿದರು.
ಮೇ 10ರಂದು ಆಪರೇಷನ್ ಸಿಂಧೂರ್ ಅಡಿಯಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮವನ್ನು ನಿಲ್ಲಿಸುವುದಾಗಿ ಭಾರತ ಘೋಷಿಸಿದಾಗ, ವಿಪರ್ಯಾಸ ಎಂದರೆ ಇಲ್ಲಿನ ನಾಯಕರು ಆಪರೇಷನ್ ಸಿಂಧೂರ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು. ಪಾಕಿಸ್ತಾನದ ದುರದ್ದೇಶ ಹರಡುವ ಕೆಲಸವನ್ನು ಮಾಡತೊಡಗಿದ್ದರು. ಕೆಲವರು ಸೇನೆ ನೀಡಿದ ಮಾಹಿತಿಗಳ ಬದಲಿಗೆ ಪಾಕಿಸ್ತಾನದ ಸುಳ್ಳುಗಳನ್ನು ಹರಡಿದ್ದರು. ಆದರೆ ಭಾರತದ ನಿಲುವು ಯಾವಾಗಲೂ ಸ್ಪಷ್ಟವಾಗಿತ್ತು ಎಂದು ಮೋದಿ ಹೇಳಿದರು.
ಪಾಕಿಸ್ತಾನ ಯಾವುದೇ ದುಷ್ಕೃತ್ಯಕ್ಕೆ ಮುಂದಾದರೆ ಅದಕ್ಕೆ ಸೂಕ್ತ ಉತ್ತರ ನೀಡಲಾಗುವುದು. ಇಂದಿನ ಭಾರತವು ಆತ್ಮವಿಶ್ವಾಸದಿಂದ ತುಂಬಿದೆ. ಪೂರ್ಣ ಶಕ್ತಿಯೊಂದಿಗೆ ವೇಗವಾಗಿ ಮುನ್ನಡೆಯುತ್ತಿದೆ. ಭಾರತವು ಸ್ವಾವಲಂಬಿಯಾಗುತ್ತಿದೆ ಎಂದು ದೇಶವು ನೋಡುತ್ತಿದೆ. ಆದರೆ ಒಂದೆಡೆ ಭಾರತ ಸ್ವಾವಲಂಬಿಯಾಗುತ್ತಿದೆ. ಆದರೆ ಕಾಂಗ್ರೆಸ್ ಸಮಸ್ಯೆಗಳಿಗೆ ಪಾಕಿಸ್ತಾನವನ್ನು ಅವಲಂಬಿಸಿದೆ ಎಂಬುದನ್ನು ಈ ದೇಶವು ನೋಡುತ್ತಿದೆ. ಏನಿದ್ದರೂ ಆಪರೇಶನ್ ಸಿಂಧೂರ್ ಮುಗಿದಿಲ್ಲ ಎಂದರು
Prime Minister Narendra Modi today made a strong statement in Parliament, clarifying that no foreign leader had requested India to halt Operation Sindhoor. Instead, he revealed that it was a direct plea from Pakistan’s Director General of Military Operations (DGMO) asking for an end to the strikes that led to the announcement of a ceasefire.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm