ಬ್ರೇಕಿಂಗ್ ನ್ಯೂಸ್
01-08-25 10:48 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 1 : ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಕೇಸರಿ ಭಯೋತ್ಪಾದನೆ ಎನ್ನುವುದನ್ನು ಬಿಂಬಿಸಲು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಬಂಧಿಸುವಂತೆ ಆದೇಶ ಮಾಡಲಾಗಿತ್ತು. ಆಗಿನ ಮುಂಬೈ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಮತ್ತು ಅವರ ಮೇಲಿನ ಅಧಿಕಾರಿಗಳು ನನಗೆ ಬಂಧನಕ್ಕೆ ಸೂಚಿಸಿದ್ದರು. ಆದರೆ ಭಾಗವತ್ ಅವರನ್ನು ಬಂಧಿಸುವುದು ನನ್ನ ಮಿತಿಯಲ್ಲಿ ಇರಲಿಲ್ಲ ಎಂದು ಮಹಾರಾಷ್ಟ್ರ ಎಟಿಎಸ್ ಘಟಕದಲ್ಲಿ ಇನ್ಸ್ ಪೆಕ್ಟರ್ ಆಗಿದ್ದು ನಿವೃತ್ತಿಯಾಗಿರುವ ಮೆಹಬೂಬ್ ಮುಜಾವರ್ ಹೇಳಿದ್ದಾರೆ.
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್ ತೀರ್ಪಿನ ವಿಚಾರದಲ್ಲಿ ಇಂಡಿಯಾ ಟುಡೇ ಜೊತೆಗೆ ಮಾಹಿತಿ ಹಂಚಿಕೊಂಡಿರುವ ಮುಜಾವರ್, ದೇಶದಲ್ಲಿ ಕೇಸರಿ ಭಯೋತ್ಪಾದನೆ ಆಗುತ್ತಿರುವುದಾಗಿ ಬಿಂಬಿಸಲು ಷಡ್ಯಂತ್ರ ನಡೆದಿತ್ತು. ಅದಕ್ಕಾಗಿ ಮೋಹನ್ ಭಾಗವತ್, ರಾಮ್ ಕಲ್ಸಂಗ್ರಾ, ಸಂದೀಪ್ ಡಾಂಗೆ, ದಿಲೀಪ್ ಪಾಟಿದಾರ್ ಅವರನ್ನು ಬಂಧಿಸುವಂತೆ ಸೂಚಿಸಲಾಗಿತ್ತು. ಆದರೆ ಭಾಗವತ್ ಮಹಾರಾಷ್ಟ್ರದಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದು ಅಂಥವರನ್ನು ಬಂಧಿಸುವುದು ನನ್ನ ಸಾಮರ್ಥ್ಯ ಮೀರಿದ್ದಾಗಿತ್ತು. ಅದನ್ನು ನಿರಾಕರಿಸಿದ್ದಕ್ಕಾಗಿ ನನ್ನ ಮೇಲೆ ಕಮಿಷನರ್ ಪರಮ್ ಬೀರ್ ಸಿಂಗ್ ಹಗೆ ಸಾಧಿಸಿದ್ದರು.
ಇದಲ್ಲದೆ, ಚಾರ್ಜ್ ಶೀಟ್ ನಲ್ಲಿ ಸತ್ತ ವ್ಯಕ್ತಿಗಳನ್ನು ಜೀವಂತ ಇರುವಂತೆ ತೋರಿಸುವಂತೆ ನನಗೆ ಒತ್ತಡ ಹೇರಿದ್ದರು. ನಾನು ನಿರಾಕರಣೆ ಮಾಡಿದ್ದಕ್ಕೆ ಸುಳ್ಳು ಆರೋಪಗಳನ್ನು ಹೊರಿಸಿ ನನ್ನ ಮೇಲೆ ಕೇಸು ದಾಖಲಿಸಿದ್ದರು. ಆದರೆ ಎಲ್ಲ ಕೇಸುಗಳಿಂದಲೂ ನ್ಯಾಯಾಂಗ ಖುಲಾಸೆಗೊಳಿಸಿ ನನಗೆ ಮುಕ್ತಿ ನೀಡಿತ್ತು ಎಂದು ಮೆಹಬೂಬ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧ್ವಿ ಪ್ರಜ್ಞಾ ಸಿಂಗ್, ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲ ಏಳು ಮಂದಿಯನ್ನ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಎನ್ಐಎ ಕೋರ್ಟ್ ಖುಲಾಸೆಗೊಳಿಸಿ ತೀರ್ಪು ನೀಡಿತ್ತು.
ಬಲಪಂಥೀಯ ಅಭಿನವ ಭಾರತ ಸಂಘಟನೆಗೆ ಸೇರಿದವರು ಮಾಲೆಗಾಂವ್ ಸ್ಫೋಟ ಕೃತ್ಯ ನಡೆಸಿದ್ದರು ಎಂದು ಎಟಿಎಸ್ ಪೊಲೀಸರು ಪ್ರಜ್ಞಾ ಸಿಂಗ್ ಸೇರಿ ಏಳು ಮಂದಿ ವಿರುದ್ಧ ಕೇಸು ದಾಖಲಿಸಿದ್ದರು. ಪ್ರಜ್ಞಾಗೆ ಸೇರಿದ್ದ ಮೋಟರ್ ಸೈಕಲ್ ನಲ್ಲಿ ಕರ್ನಲ್ ಪುರೋಹಿತ್ ಅವರು ಸ್ಫೋಟಕಗಳನ್ನು ಇಟ್ಟಿದ್ದರು ಎಂದು ಎಟಿಎಸ್ ಆರೋಪಿಸಿತ್ತು. ಆದರೆ ಆ ಮೋಟರ್ ಸೈಕಲ್ ಪ್ರಜ್ಞಾಗೆ ಸೇರಿದ್ದು ಅನ್ನುವುದನ್ನು ಸಾಬೀತುಪಡಿಸಲು ಪೊಲೀಸರು ವಿಫಲವಾಗಿದ್ದರು. ಅಲ್ಲದೆ, ಕರ್ನಲ್ ಪುರೋಹಿತ್ ಬಾಂಬ್ ಗಳನ್ನು ಇಟ್ಟಿದ್ದರು ಎಂಬುದನ್ನು ಸಾಬೀತುಪಡಿಸುವುದಕ್ಕೂ ಎಟಿಎಸ್ ವಿಫಲವಾಗಿತ್ತು. ಸುದೀರ್ಘ 17 ವರ್ಷಗಳ ಕಾಲ ಕೋರ್ಟಿನಲ್ಲಿ ವಿಚಾರಣೆ ನಡೆಸಲಾಗಿತ್ತು. ಮೊದಲು ಎಟಿಎಸ್ 2009ರಲ್ಲಿ ಸಾಧ್ವಿ ಸೇರಿದಂತೆ ಏಳು ಮಂದಿ ವಿರುದ್ಧ ಆರೋಪ ಪಟ್ಟಿ ಹಾಕಿದ್ದರೂ, ಸೂಕ್ತ ಸಾಕ್ಷ್ಯಗಳಿಲ್ಲ ಎಂದು ಮುಂಬೈ ಕೋರ್ಟ್ ಮರು ತನಿಖೆಗೆ ಆದೇಶ ಮಾಡಿತ್ತು. 20011ರಲ್ಲಿ ತನಿಖೆಯನ್ನು ಎನ್ಐಎ ತಂಡಕ್ಕೆ ವಹಿಸಲಾಗಿತ್ತು. 2017ರಲ್ಲಿ ಎನ್ಐಎ ತಂಡ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿತ್ತು.
2008ರಲ್ಲಿ ಮಹಾರಾಷ್ಟ್ರ ಮತ್ತು ಕೇಂದ್ರದಲ್ಲಿ ಆಳ್ವಿಕೆ ನಡೆಸುತ್ತಿದ್ದ ಕಾಂಗ್ರೆಸ್ ಸರಕಾರ ದೇಶದಲ್ಲಿ ಕೇಸರಿ ಭಯೋತ್ಪಾದನೆ ಇದೆಯೆಂದು ಬಿಂಬಿಸಲು ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಸೇರಿದಂತೆ ಹಿಂದು ಬಲಪಂಥೀಯರನ್ನು ಸಿಲುಕಿಸಿತ್ತು ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಈಗ ಎನ್ಐಎ ಕೋರ್ಟ್ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದ್ದಲ್ಲದೆ, ಉಗ್ರವಾದಕ್ಕೆ ಧರ್ಮ ಇಲ್ಲ, ಹಾಗಂತ ಕೇವಲ ಸಂಶಯದ ಮೇಲೆ ಆರೋಪಿಗಳಿಗೆ ಶಿಕ್ಷೆ ವಿಧಿಸುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿರುವುದು ಚರ್ಚೆಗೆ ಕಾರಣವಾಗಿದೆ.
In a sensational revelation, former Maharashtra ATS Inspector Mehboob Mujawar has claimed that he was instructed to arrest Rashtriya Swayamsevak Sangh (RSS) chief Mohan Bhagwat in connection with the 2008 Malegaon blast case, but was later falsely implicated for refusing to comply.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm