ಬ್ರೇಕಿಂಗ್ ನ್ಯೂಸ್
03-08-25 04:25 pm HK News Desk ದೇಶ - ವಿದೇಶ
ಮುಂಬೈ, ಆ.3: ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ ಸೇರಿದಂತೆ ಹಲವರ ಹೆಸರನ್ನು ಹೇಳುವಂತೆ ತನಿಖಾಧಿಕಾರಿಗಳು ಒತ್ತಡ ಹೇರಿ ನನಗೆ ಚಿತ್ರಹಿಂಸೆ ನೀಡಿದ್ದರು ಎಂದು ಪ್ರಕರಣದಲ್ಲಿ ಖುಲಾಸೆಗೊಂಡಿರುವ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.
ಮಾಲೆಗಾಂವ್ ಪ್ರಕರಣದಲ್ಲಿ ಎನ್ಐಎ ನ್ಯಾಯಾಲಯವು ತೀರ್ಪು ಪ್ರಕಟಿಸಿದ ಮರುದಿನ ಸಾಧ್ವಿ ತನಗಾದ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾರೆ.
ಪ್ರಕರಣದ ತನಿಖೆಯ ಸಂದರ್ಭದಲ್ಲಿ ನನಗೆ ತೀವ್ರ ಚಿತ್ರಹಿಂಸೆ ನೀಡಲಾಗಿತ್ತು. ಗುಜರಾತಿನ ಸೂರತ್ ನಲ್ಲಿ ಉಳಿದಿದ್ದಾಗ ನರೇಂದ್ರ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರ ಹೆಸರು ಹೇಳುವಂತೆ ತನಿಖಾಧಿಕಾರಿಗಳು ಒತ್ತಾಯಪಡಿಸಿದ್ದರು. ಆದರೆ ನಾನು ಯಾರ ಹೆಸರನ್ನೂ ಉಲ್ಲೇಖಿಸಿರಲಿಲ್ಲ. ಇದು ಸತ್ಯ ವಿಷಯವಾಗಿದ್ದು ಯಾವುದೇ ಕಾರಣಕ್ಕು ಸುಳ್ಳು ಹೇಳುತ್ತಿಲ್ಲ ಎಂದು ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.
ನಾನು ಈ ಎಲ್ಲ ವಿಚಾರವನ್ನು ಲಿಖಿತವಾಗಿ ದಾಖಲಿಸಿದ್ದೇನೆ. ನನಗೆ ಚಿತ್ರಹಿಂಸೆ ನೀಡುವುದೇ ಅವರ ಮೂಲ ಉದ್ದೇಶವಾಗಿತ್ತು. ಹೆಸರು ಹೇಳದಿದ್ದರೆ ಚಿತ್ರಹಿಂಸೆ ಮುಂದುವರಿಸುವುದಾಗಿ ಬೆದರಿಸುತ್ತಿದ್ದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಆರೆಸ್ಸೆಸ್ ನ ಸುದರ್ಶನ್, ಇಂದ್ರೇಶ್ ಹಾಗೂ ರಾಮಮಾಧವ್ ಸೇರಿದಂತೆ ಹೆಸರು ಹೇಳುವಂತೆ ಒತ್ತಾಯಿಸಿದ್ದರು.
ನನಗೆ ಪ್ರಜ್ಞೆ ತಪ್ಪಿ ಆಸ್ಪತ್ರೆಗೆ ದಾಖಲಾಗಿದ್ದರೂ ಬಂಧಿಸಿಡಲಾಗಿತ್ತು. ನಾನು ಹೇಳಿದ ಎಲ್ಲ ವಿಚಾರವನ್ನೂ ದಾಖಲಿಸಿದ್ದೇನೆ. ಈಗ ಸತ್ಯ ಹೊರಬಂದಿದ್ದು ಹಿಂದುತ್ವಕ್ಕೆ, ಸನಾತನ ರಾಷ್ಟ್ರಕ್ಕೆ ಸಿಕ್ಕ ಗೆಲುವಾಗಿದೆ ಎಂದು ಹೇಳಿದರು.
ಆದರೆ ಸಾಧ್ವಿ ಮಾಡಿರುವ ಆರೋಪವನ್ನು ಎನ್ಐಎ ಕೋರ್ಟ್ ನ್ಯಾಯಾಧೀಶ ಎ.ಕೆ. ಲಹೋಟಿ ಆದೇಶದಲ್ಲಿ ಉಲ್ಲೇಖ ಮಾಡಿಲ್ಲ. ಎನ್ಐಎ ತನಿಖಾ ತಂಡ ಈ ಬಗ್ಗೆ ಯಾವುದೇ ಸಾಕ್ಷ್ಯ ಉಲ್ಲೇಖಿಸಿಲ್ಲ ಎಂದು ಲಹೋಟಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Acquitted in the 2008 Malegaon blast case, former BJP MP Sadhvi Pragya said she was "forced to name" Prime Minister Narendra Modi and Uttar Pradesh Chief Minister Yogi Adityanath in the case. She claimed she was “tortured a lot” for not doing so.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am