ಬ್ರೇಕಿಂಗ್ ನ್ಯೂಸ್
04-08-25 05:11 pm HK News Desk ದೇಶ - ವಿದೇಶ
ನವದೆಹಲಿ, ಆ.4 : ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗಡೆಯಾಗಿದ್ದು, 70ಕ್ಕೂ ಹೆಚ್ಚು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಗಲ್ಫ್ ಆಫ್ ಏಡನ್ ಸಮುದ್ರದಲ್ಲಿ ಘಟನೆ ನಡೆದಿದ್ದು, ದುರಂತ ಸಂದರ್ಭದಲ್ಲಿ ಹಡಗಿನಲ್ಲಿ 157 ಮಂದಿಯಷ್ಟು ಪ್ರಯಾಣಿಕರು ಇದ್ದರೆಂದು ವಿಶ್ವಸಂಸ್ಥೆಯ ಮೈಗ್ರೇಶನ್ ಏಜನ್ಸಿ ಹೇಳಿದೆ.
ಯೆಮೆನಿ ಅಧಿಕಾರಿಗಳು 76 ಶವಗಳನ್ನು ಮೇಲೆತ್ತಿದ್ದಾರೆ, 32 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಸಾವನ್ನಪ್ಪಿದವರಲ್ಲಿ ಇತಿಯೋಪಿಯಾದ ವಲಸಿಗರು ಹೆಚ್ಚಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ದಕ್ಷಿಣ ಯೆಮೆನ್ ಸಮುದ್ರ ಮಾರ್ಗದಲ್ಲಿ ವಲಸಿಗರನ್ನು ಹೊತ್ತುಕೊಂಡು ಸಾಗುತ್ತಿದ್ದಾಗ ಹಡಗು ಮುಳುಗಡೆಯಾಗಿದೆ. ಆಫ್ರಿಕದ ವಲಸಿಗರನ್ನು ಕೆಂಪು ಸಮುದ್ರ ಮಾರ್ಗದಲ್ಲಿ ಕಳ್ಳದಾರಿಯ ಮೂಲಕ ಗಲ್ಫ್ ದೇಶಗಳಿಗೆ ಒಯ್ಯುವುದಕ್ಕೆ ಬಳಸುತ್ತಿದ್ದರು.
ಯೆಮೆನ್- ಇತಿಯೋಪಿಯಾದಲ್ಲಿ ಜನರನ್ನು ಬೇರೆ ಬೇರೆ ಉದ್ದೇಶಕ್ಕೆ ಅಕ್ರಮವಾಗಿ ಸಾಗಾಟ ನಡೆಸಲಾಗುತ್ತದೆ. ಇತಿಯೋಪಿಯಾದಲ್ಲಿ ಅತಿ ಹೆಚ್ಚು ಬಡತನವಿದ್ದು, ಅಲ್ಲಿನ ಜನರನ್ನು ಆಮಿಷವೊಡ್ಡಿ ಒಯ್ಯಲಾಗುತ್ತದೆ. ಇದೇ ಉದ್ದೇಶಕ್ಕೆ ಪ್ಯಾಸೆಂಜರ್ ಹಡಗಿನ ಮೂಲಕ ಒಯ್ಯುತ್ತಿದ್ದಾಗ ದುರಂತ ಸಂಭವಿಸಿದೆ. ಪ್ರತಿ ವರ್ಷ ಸೌದಿ ಅರೇಬಿಯಾ ಮತ್ತು ಯುಎಇ ದೇಶಗಳಿಗೆ ಕಾರ್ಮಿಕರಾಗಿ ದುಡಿಯಲು ಇತಿಯೋಪಿಯಾದಿಂದ ಸಾವಿರಾರು ಜನರನ್ನು ಒಯ್ಯಲಾಗುತ್ತದೆ. ಕಳೆದ ಒಂದು ವರ್ಷದಲ್ಲಿ ಕೆಂಪು ಸಮುದ್ರದಲ್ಲಿ ಇಂತಹದ್ದೇ ದುರಂತಗಳಿಂದ 558 ಮಂದಿ ಮಡಿದಿದ್ದಾರೆ. ಬೋಟ್ ದುರಂತಗಳಲ್ಲಿಯೇ 462 ಮಂದಿ ಸಾವಿಗೀಡಾಗಿದ್ದಾರೆ. ಕಳೆದ ಮಾರ್ಚ್ ತಿಂಗಳಲ್ಲಿ ಎರಡು ಬೋಟ್ ಮುಳುಗಡೆಯಾಗಿ 180 ವಲಸಿಗರು ಸಾವನ್ನಪ್ಪಿದ್ದರು.
In a devastating maritime tragedy, more than 76 people have died after a passenger boat capsized near the coast of Yemen in the Gulf of Aden. According to the United Nations migration agency, the boat was carrying approximately 157 passengers, most of whom were migrants from Ethiopia.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm