ಬ್ರೇಕಿಂಗ್ ನ್ಯೂಸ್
05-08-25 09:33 pm HK News Desk ದೇಶ - ವಿದೇಶ
ನವದೆಹಲಿ, ಆ.5 : ಉತ್ತರಾಖಂಡದ ಉತ್ತರಕಾಶಿಯಲ್ಲಿ ಮೇಘಸ್ಫೋಟ ಉಂಟಾಗಿದ್ದು ಧರಾಲಿ ಪ್ರದೇಶದಲ್ಲಿ ಖೀರ್ ಗಂಗಾ ನದಿ ಅಬ್ಬರಕ್ಕೆ ಇಡೀ ಗ್ರಾಮಕ್ಕೆ ಗ್ರಾಮವೇ ನಾಶಕ್ಕೀಡಾಗಿದೆ. ಅತಿ ಎತ್ತರದ ಪ್ರದೇಶದಲ್ಲಿ ಉಂಟಾದ ಭಾರೀ ಪ್ರವಾಹಕ್ಕೆ ಅಂಗಡಿಗಳು, ವಾಹನಗಳು ಮತ್ತು ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ.
ಘಟನೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರು ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ, ಎಸ್ಡಿಆರ್ಎಫ್ ತಂಡವನ್ನು ಸ್ಥಳಕ್ಕೆ ರವಾನಿಸಲಾಗಿದೆ. ಸ್ಥಳೀಯ ಆಡಳಿತ, ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.










![]()
ಉತ್ತರ ಕಾಶಿಯಲ್ಲಿ 40-50 ಮನೆಗಳು ಕೊಚ್ಚಿಕೊಂಡು ಹೋಗಿವೆ. 50ಕ್ಕು ಹೆಚ್ಚು ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಶಂಕೆ ಇದೆ. ಹರ್ಸಿಲ್ ನಗರದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಪ್ರವಾಹ, ಭೂಕುಸಿತ ಸಂಭವಿಸಿದೆ. ಸ್ಥಳಕ್ಕೆ ಮೂರು ಎನ್ ಡಿಆರ್ ಎಫ್ ತಂಡಗಳನ್ನು ಕಳುಹಿಸಲಾಗಿದೆ ಎಂದು ಎನ್ ಡಿಆರ್ ಎಫ್ ಡಿಐಜಿ ಮೊಹ್ಸೀನ್ ಶಾಹಿದ್ ತಿಳಿಸಿದ್ದಾರೆ. ಉತ್ತರಕಾಶಿ, ಧಾರಾಲಿ ಮತ್ತು ಸುಖಿ ಏರಿಯಾದಲ್ಲಿ ಒಂದೇ ದಿನ ಭಾರೀ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು ಆಸುಪಾಸಿನ ರಸ್ತೆಗಳು, ವಾಹನಗಳು ಕೊಚ್ಚಿ ಹೋಗಿವೆ. ಅಲ್ಲದೆ, ಬೆಟ್ಟದ ಮೇಲ್ಬಾಗದಲ್ಲಿ ಹಲವಾರು ಮನೆಗಳು ಪ್ರವಾಹದಲ್ಲಿ ಸಿಲುಕಿ ಕೊಚ್ಚಿ ಹೋಗಿವೆ. ಖೀರ್ ನದಿಯಲ್ಲಿ ಪ್ರವಾಹ ಉಂಟಾಗಿ ಎತ್ತರದ ನಗರ ಪ್ರದೇಶದಲ್ಲಿ ಧುಮ್ಮಿಕ್ಕಿ ಹರಿಯುವುದು, ಜನರು ಕೊಚ್ಚಿಕೊಂಡು ಹೋಗುವ ಭಯಾನಕ ವಿಡಿಯೋ ವೈರಲ್ ಆಗಿದೆ. 2013ರಲ್ಲಿ ಉತ್ತರಾಖಂಡದಲ್ಲಿ ಎದುರಾಗಿದ್ದ ಪ್ರವಾಹ ದುರಂತವನ್ನೂ ಮೀರಿಸುವಷ್ಟು ನಾಶ ನಷ್ಟ ಆಗಿದೆ ಎಂದು ತೇಹ್ರಿ ಘರ್ ವಾಲ್ ಸಂಸದೆ ಮಾಲಾ ರಾಜ್ಯ ಲಕ್ಷ್ಮಿ ಹೇಳಿದ್ದಾರೆ.
A powerful cloudburst struck Dharali village in Uttarkashi district on Tuesday afternoon, unleashing a massive landslide and flooding that have caused extensive destruction and killing at least four people. The village, located about 4 kilometers from the Indian Army camp at Harsil, was hit around 1:45 pm, with a torrent of water and debris cutting off all road connectivity to the Gangotri Dham.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm