ಬ್ರೇಕಿಂಗ್ ನ್ಯೂಸ್
07-08-25 10:02 pm HK News Desk ದೇಶ - ವಿದೇಶ
ಇಂದೋರ್, ಆ.7 : ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಸಿಹೋರಾ ತಹಸಿಲ್ ಎಂಬಲ್ಲಿ ಅಪಾರ ಪ್ರಮಾಣದ ಚಿನ್ನದ ನಿಕ್ಷೇಪಗಳನ್ನು ಭೂವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ. ಮಹಾಂಗ್ವಾ ಕೆವಾಲ್ರಿ ಎನ್ನುವ ಗ್ರಾಮದಲ್ಲಿಹಲವು ವರ್ಷಗಳ ಕಾಲ ನಡೆಸಿದ ಭೂವೈಜ್ಞಾನಿಕ ಸಮೀಕ್ಷೆಗಳ ನಂತರ ಇಲ್ಲಿ ಅಪಾರ ಚಿನ್ನದ ನಿಕ್ಷೇಪ ಇರುವುದನ್ನು ವಿಜ್ಞಾನಿಗಳು ತಿಳಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಈ ಭಾಗದಲ್ಲಿ ಚಿನ್ನದ ನಿಕ್ಷೇಪಗಳು ಸುಮಾರು 100 ಹೆಕ್ಟೇರ್ ಪ್ರದೇಶದಲ್ಲಿ ಹರಡಿಕೊಂಡಿವೆ ಮತ್ತು ಇದರ ಪ್ರಮಾಣವು ಲಕ್ಷ ಟನ್ಗಳಷ್ಟು ಇರಬಹುದು ಎಂದು ಅಂದಾಜಿಸಿದ್ದಾರೆ. ಈ ಪ್ರದೇಶದಿಂದ ತೆರೆಯಲ್ಪಟ್ಟ ಮಣ್ಣಿನ ಮಾದರಿಗಳನ್ನು ರಾಸಾಯನಿಕ ವಿಶ್ಲೇಷಣೆಗೆ ಒಳಪಡಿಸಿದ ಬಳಿಕ ಚಿನ್ನದ ಕುರುಹುಗಳನ್ನು ಪತ್ತೆ ಮಾಡಲಾಗಿದೆ. ಇದಲ್ಲದೆ, ಈ ಜಾಗದಲ್ಲಿ ತಾಮ್ರ ಮತ್ತು ಇತರ ಅಮೂಲ್ಯ ಲೋಹಗಳನ್ನೂ ಪತ್ತೆ ಮಾಡಲಾಗಿದೆ.
ಜಬಲ್ಪುರವು ಈಗಾಗಲೇ ಕಬ್ಬಿಣ, ಮ್ಯಾಂಗನೀಸ್, ಸುಣ್ಣದ ಕಲ್ಲು ಮತ್ತು ಸಿಲಿಕಾ ಮರಳಿನಿಂದಾಗಿ ಖ್ಯಾತಿ ಹೊಂದಿದೆ. ಈಗಾಗಲೇ ವಿವಿಧ ಮಾದರಿಯ ಈ ಭಾಗದಲ್ಲಿ 42 ಗಣಿಗಳಿದ್ದು ಹೊಸತಾಗಿ ಚಿನ್ನದ ಗಣಿಯೂ ಸೇರಿಕೊಳ್ಳುವ ಸಾಧ್ಯತೆಯಿದೆ. ಪಕ್ಕದ ಕತ್ನಿ ಜಿಲ್ಲೆಯಲ್ಲು ವರ್ಷಗಳ ಹಿಂದೆ ಚಿನ್ನದ ನಿಕ್ಷೇಪ ಇದೆಯೆಂದು ಸುದ್ದಿಯಾಗಿತ್ತು. ಆದರೆ ಅದನ್ನು ಹೊರ ತೆಗೆಯಲು ಯಾವುದೇ ಕಂಪನಿ ಮುಂದೆ ಬಂದಿರಲಿಲ್ಲ. ಇದೀಗ ಜಬಲ್ಪುರದಲ್ಲಿಯೂ ಚಿನ್ನದ ನಿಕ್ಷೇಪ ಇದೆಯೆಂಬ ಸುದ್ದಿ ಬಂದಿರುವುದರಿಂದ ದೇಶದ ಗಮನ ಸೆಳೆದಿದೆ. ಸದ್ಯಕ್ಕೆ ಚಿನ್ನದ ನಿಕ್ಷೇಪ ಇದೆ ಎನ್ನಲಾದ ಪ್ರದೇಶದಲ್ಲಿ ಆಳ, ಅಗಲದ ಬಗ್ಗೆ ಮತ್ತು ಆರ್ಥಿಕ ಬೇಡಿಕೆ ವಿಚಾರದಲ್ಲಿ ಇನ್ನಷ್ಟು ಅಧ್ಯಯನ ಅಗತ್ಯ ಇದೆಯೆಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
In a significant geological discovery, massive gold reserves have reportedly been found in the Sihora tehsil of Jabalpur district in Madhya Pradesh. After years of geological surveys in the Mahangwa Cavalry region, experts have now confirmed the presence of substantial gold deposits in the area.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm