ಬ್ರೇಕಿಂಗ್ ನ್ಯೂಸ್
09-08-25 02:49 pm HK News Desk ದೇಶ - ವಿದೇಶ
ನವದೆಹಲಿ, ಆ.9: ರಷ್ಯಾ ಪ್ರವಾಸದಲ್ಲಿರುವ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ರಷ್ಯಾದ ಉಪ ಪ್ರಧಾನಿ ಡೆನಿಸ್ ಮಾಂಟುರೋವ್ ಅವರನ್ನು ಭೇಟಿಯಾಗಿದ್ದು ಹಲವಾರು ವ್ಯೂಹಾತ್ಮಕ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮುಖ್ಯವಾಗಿ ಅಮೇರಿಕಾ ಭಾರತದ ಸರಕುಗಳ ಮೇಲೆ ವಿಧಿಸಿರುವ ಶೇ.50ರ ಸುಂಕ ನೀತಿಗೆ ಸೆಡ್ಡು ಹೊಡೆಯಲು ಮಾಡಬೇಕಾದ ವ್ಯೂಹ ಹೆಣೆಯಲು ಅಜಿತ್ ದೋವಲ್ ಫಲಪ್ರದ ಮಾತುಕತೆಯಲ್ಲಿದ್ದಾರೆ ಎನ್ನಲಾಗಿದೆ.
ವಿಶೇಷವಾಗಿ ದ್ವೀಪಕ್ಷೀಯ ರಕ್ಷಣಾ ಮತ್ತು ತಾಂತ್ರಿಕ ವಿಷಯಗಳಲ್ಲಿ ಮಾಡಬೇಕಾದ ರಚನಾತ್ಮಕ ಕೆಲಸಗಳ ಬಗ್ಗೆ ಇವರ ಮಾತುಕತೆ ನಡೆಯಬೇಕಿತ್ತಾದರೂ ಅಮೆರಿಕಾದ ಸದ್ದು ಅಡಗಿಸಲು ಜಂಟಿಯಾಗಿ ಮಾಡಬೇಕಾದ ತಂತ್ರಗಳು ಹಾಗೂ ಅದಕ್ಕೆ ಪೂರಕವಾಗಿ ಆಗಬೇಕಾದ ಜಂಟಿ ಕಾರ್ಯಾಚರಣೆಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.
ಮುಂದಿನ ವರ್ಷ ರಷ್ಯಾ ಅಧ್ಯಕ್ಷ ವ್ಲ್ಯಾದಿಮಿರ್ ಪುಟಿನ್ ಭಾರತ ಪ್ರವಾಸ ಕೈಗೊಳ್ಳುತ್ತಿದ್ದು ಆ ಸಂದರ್ಭ ಕೈಗೊಳ್ಳಬೇಕಾದ ಪರಮಾಣು ಶಕ್ತಿ, ದ್ವಿಪಕ್ಷೀಯ ರಕ್ಷಣಾ ಒಪ್ಪಂದಗಳ ಬಗ್ಗೆಯೂ ಅಂತಿಮ ರೂಪುರೇಷೆ ಬಗ್ಗೆಯೂ ಮಾತುಕತೆ ಮಾಡಿದ್ದಾರೆ. ರಷ್ಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ನೀಡಿರುವ ಮಾಹಿತಿಯಂತೆ, ಅಜಿತ್ ದೋವಲ್ ಹಾಗೂ ಮಾಂಟುರೋವ್ ಮಧ್ಯೆ ಭಾರತ -ರಷ್ಯಾ ಭದ್ರತಾ-ತಾಂತ್ರಿಕ ಒಪ್ಪಂದ ಹಾಗೂ ಸಹಕಾರ, ಇತರ ವ್ಯೂಹಾತ್ಮಕ ವಲಯಗಳಲ್ಲಿ ಜಂಟಿ ಯೋಜನೆಗಳು, ಯುದ್ಧ ವಿಮಾನಗಳು, ರಾಸಾಯನಿಕ ಕ್ಷೇತ್ರ ಇತ್ಯಾದಿಗಳ ವಿಷಯದಲ್ಲಿ ಸಕಾರಾತ್ಮಕ ಮಾತುಕತೆ ನಡೆದಿದೆ.
ಈ ಮಧ್ಯೆ ಅಜಿತ್ ದೋವಲ್ ಗುರುವಾರ ರಷ್ಯಾ ಅಧ್ಯಕ್ಷ ವ್ಲ್ಯಾದಿಮಿರ್ ಪುಟಿನ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು ಹೊರಗಿನ ಯಾವುದೇ ಒತ್ತಡ ಬಂದರೂ ಭಾರತವು ರಷ್ಯಾ ಜೊತೆಗಿನ ಎಲ್ಲಾ ಒಪ್ಪಂದಗಳಿಗೆ ಬದ್ಧವಾಗಿ ಕಾರ್ಯ ನಿರ್ವಹಿಸಲಿದೆ. ಇದುವರೆಗಿನ ಒಪ್ಪಂದಗಳನ್ನು ಯಾರದೋ ಒತ್ತಡ ತಂತ್ರಕ್ಕೆ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಗಟ್ಟಿ ಧ್ವನಿಯಲ್ಲಿ ಪ್ರತಿಪಾದಿಸಿದ್ದಾರೆ. ಅಂತಿಮವಾಗಿ ಅಜಿತ್ ದೋವಲ್ ರಷ್ಯಾ ಅಧ್ಯಕ್ಷರಿಗೆ ಭಾರತಕ್ಕೆ ಬರುವಂತೆ ಪ್ರಧಾನಿ ನರೇಂದ್ರ ಮೋದಿಯವರ ಪರ ಆಮಂತ್ರಣ ನೀಡಿದ್ದು ಅದನ್ನು ಪುಟಿನ್ ಸ್ವೀಕರಿಸಿದ್ದಾರೆ.
National Security Advisor Ajit Doval held talks with Russia's First Deputy Prime Minister Denis Manturov here on bilateral military-technical ties and implementation of joint projects in strategic sectors.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm