ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರಾಜಸ್ಥಾನದಲ್ಲಿ ಭೀಕರ ಅಪಘಾತ, ಏಳು ಮಕ್ಕಳು ಸೇರಿ 10 ಮಂದಿ ದುರ್ಮರಣ ! 

13-08-25 10:41 am       HK News Desk   ದೇಶ - ವಿದೇಶ

ರಾಜಸ್ಥಾನದಲ್ಲಿ ಬುಧವಾರ ನಸುಕಿನ ವೇಳೆ ಸಂಭವಿಸಿದ ರಣಭೀಕರ ರಸ್ತೆ ಅಪಘಾತವೊಂದರಲ್ಲಿ ಏಳು ಮಕ್ಕಳು, ಮೂವರು ಮಹಿಳೆಯರು ಸೇರಿ ಒಟ್ಟು 10 ಮಂದಿ ದುರ್ಮರಣಕ್ಕೀಡಾಗಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಜೈಪುರ, ಆ.13 : ರಾಜಸ್ಥಾನದಲ್ಲಿ ಬುಧವಾರ ನಸುಕಿನ ವೇಳೆ ಸಂಭವಿಸಿದ ರಣಭೀಕರ ರಸ್ತೆ ಅಪಘಾತವೊಂದರಲ್ಲಿ ಏಳು ಮಕ್ಕಳು, ಮೂವರು ಮಹಿಳೆಯರು ಸೇರಿ ಒಟ್ಟು 10 ಮಂದಿ ದುರ್ಮರಣಕ್ಕೀಡಾಗಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಯಾತ್ರಾರ್ಥಿಗಳಿದ್ದ ಪಿಕ್ ಅಪ್ ವ್ಯಾನ್ ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಬಡಿದು ಅಪಘಾತ ಉಂಟಾಗಿದೆ. ರಾಜಸ್ಥಾನದ ದೌಸಾ ಎಂಬಲ್ಲಿಯ ಮನೋಹರ್ ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ 4 ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ. ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ಯಾತ್ರಿಗಳು ರಾಜಸ್ಥಾನದ ಪ್ರಸಿದ್ಧ ಪುಣ್ಯಕ್ಷೇತ್ರ ಸಾಲ್ಸರ್ ಬಾಲಾಜಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಎರಡು ಪಿಕ್ ಅಪ್ ಗಳಲ್ಲಿ ಯಾತ್ರಿಗಳಿದ್ದರು. ಒಂದು ಪಿಕ್ ಅಪ್ ಮುಂದೆ ಹೋಗಿದ್ದು, ಮತ್ತೊಂದು ಪಿಕ್ ಅಪ್ ಅಪಘಾತಕ್ಕೀಡಾಗಿದೆ. 9 ಮಂದಿ ಗಂಭೀರ ಗಾಯಗೊಂಡಿದ್ದು ಅವರನ್ನು ಜೈಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

Rajasthan Tragedy: 7 Children Among 11 People Killed In Pickup Van–Truck  Collision In Dausa; Videos Surface

ರಸ್ತೆ ಅಪಘಾತದ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

In a horrific road accident in Rajasthan early Wednesday morning, ten people — including seven children and three women — lost their lives, while nine others sustained serious injuries.