ಬ್ರೇಕಿಂಗ್ ನ್ಯೂಸ್
13-08-25 11:56 am HK News Desk ದೇಶ - ವಿದೇಶ
ಚೆನ್ನೈ, ಆಗಸ್ಟ್ 13 : ಸರ್ಕಾರಿ ವಸತಿ ಗೃಹದಲ್ಲಿ ಆಶ್ರಯ ಪಡೆಯುವಂತೆ ಬಾಲಕಿಗೆ ಆದೇಶ ಹೊರಡಿಸಿದ ಮದ್ರಾಸ್ ಹೈಕೋರ್ಟ್ ತೀರ್ಪು ಕೇಳಿದ ಹದಿಹರೆಯದ ಬಾಲಕಿಯೋರ್ವಳು ಕೋರ್ಟಿನ ಮೊದಲನೇ ಮಹಡಿಯಿಂದ ಧುಮುಕಿದ ನಾಟಕೀಯ ಘಟನೆ ಮಂಗಳವಾರ ಚೆನ್ನೈನಲ್ಲಿ ನಡೆದಿದೆ. ಗಾಯಾಳು 15ರ ಹರೆಯದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕಿಯ ಹೆತ್ತವರು ವಿಚ್ಚೇದಿತರಾಗಿದ್ದು ಮಗಳು ನಾಪತ್ತೆಯಾಗಿದ್ದಾಳೆ ಎಂದು ಆಕೆಯ ತಂದೆ ಹೆಬಿಯಸ್ ಕಾರ್ಪಸ್ ಅರ್ಜಿ ದಾಖಲಿಸಿದ್ದರು. ಕೇಸು ಜಾಡು ಹಿಡಿದು ಹೊರಟ ಪೊಲೀಸರು ಬಾಲಕಿಯನ್ನು ಆಕೆಯ ಅಜ್ಜಿ ಮನೆಯಲ್ಲಿ ಪತ್ತೆ ಮಾಡಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ವಿಚಾರಣೆಯಲ್ಲಿ ಆಕೆ ತಾನು ತಾಯಿಯ ಜೊತೆ ಅಂಡಮಾನ್ ನಲ್ಲಿ ವಾಸಿಸುವುದಾಗಿ ಅಚ್ಚರಿಯ ಹೇಳಿಕೆ ನೀಡಿದ್ದಳು. ಬಳಿಕ ನ್ಯಾಯಮೂರ್ತಿಗಳಾದ ಎಂ.ಎಸ್ ರಮೇಶ್ ಮತ್ತು ವಿ. ಲಕ್ಷ್ಮೀನಾರಾಯಣನ್ ಅವರಿದ್ದ ಪೀಠ, ಬಾಲಕಿ ಹಾಗೂ ಕೌನ್ಸಿಲರ್ ಒಬ್ಬರ ಜೊತೆ ಅಭಿಪ್ರಾಯ ಪಡೆದು, ಅಂಡಮಾನ್ ವಾತಾವರಣ ಬಾಲಕಿಯ ವಾಸ್ತವ್ಯಕ್ಕೆ ಪೂರಕವಾಗಿಲ್ಲ ಎಂದು ಪ್ರಕಟಿಸಿ, ಸರ್ಕಾರಿ ವಸತಿ ಗೃಹದಲ್ಲಿರುವಂತೆ ಬಾಲಕಿಗೆ ನಿರ್ದೇಶನ ನೀಡಿತ್ತು. ಜೊತೆಗೆ ಬಾಲಕಿಗೆ ಮನೋವೈಜ್ಞಾನಿಕ ಚಿಕಿತ್ಸೆ ನೀಡುವಂತೆ ಆದೇಶಿಸಿ ಆಗಸ್ಟ್ 26ಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿತು.


ಆದರೆ ಕೋರ್ಟ್ ಆದೇಶ ಕೇಳಿದ ಬಾಲಕಿ ಕೋರ್ಟ್ ನ ಮೊದಲ ಮಹಡಿಯಿಂದ ಕೆಳಗೆ ಧುಮುಕಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾಯದಿಂದ ಪಾರಾಗಿದ್ದಾಳೆ ಎನ್ನುವ ಮಾಹಿತಿ ಇದೆ.
In a dramatic incident at the Madras High Court on Tuesday, a 15-year-old girl jumped from the first floor of the court premises after being denied permission to stay with her mother in the Andaman Islands. She was immediately rushed to the hospital and is reported to be out of danger.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm