ಬ್ರೇಕಿಂಗ್ ನ್ಯೂಸ್
17-08-25 09:09 pm HK News Desk ದೇಶ - ವಿದೇಶ
ನವದೆಹಲಿ, ಆ.17 : ಉಪ ರಾಷ್ಟ್ರಪತಿ ಚುನಾವಣೆಗೆ ಎನ್.ಡಿ.ಎ ಮೈತ್ರಿಕೂಟ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು ಹಾಲಿ ಮಹಾರಾಷ್ಟ್ರ ರಾಜ್ಯಪಾಲ, ತಮಿಳುನಾಡು ಮೂಲದ ಸಿ.ಪಿ ರಾಧಾಕೃಷ್ಣನ್ ಅವರನ್ನು ಅಭ್ಯರ್ಥಿಯಾಗಿ ಆರಿಸಲಾಗಿದೆ.
ಸೆ.9ರಂದು ಉಪ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಸಲುವಾಗಿ ಬಿಜೆಪಿ ಸಂಸದೀಯ ಸಮಿತಿಯ ಸಭೆ ನಡೆಸಲಾಯಿತು. ಸಭೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ರಾಧಾಕೃಷ್ಣನ್ ಹೆಸರು ಫೈನಲ್ ಮಾಡಲಾಗಿದೆ. ತಮಿಳುನಾಡು ಮೂಲದ ಅಭ್ಯರ್ಥಿ ಘೋಷಣೆ ಮೂಲಕ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಎನ್.ಡಿ.ಎ ಮಾಸ್ಟರ್ ಸ್ಟ್ರೋಕ್ ನೀಡಿದೆ.

ಸಿ.ಪಿ ರಾಧಾಕೃಷ್ಣನ್ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷರಾಗಿದ್ದು, ಕೊಯಂಬತ್ತೂರು ಕ್ಷೇತ್ರದಿಂದ ಎರಡು ಬಾರಿ ಸಂಸದರೂ ಆಗಿದ್ದರು. 2003ರಿಂದ 2006ರ ಅವಧಿಯಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದ ರಾಧಾಕೃಷ್ಣನ್ 1998 ಮತ್ತು 1999ರಲ್ಲಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದರು. ಆರೆಸ್ಸೆಸ್ ಹಿನ್ನೆಲೆಯಿದ್ದು, ಭಾರತೀಯ ಜನಸಂಘದಿಂದ ರಾಜಕೀಯ ಜೀವನ ಆರಂಭಿಸಿದ್ದ ರಾಧಾಕೃಷ್ಣನ್, ವಾಜಪೇಯಿ ಅವರ ಒಡನಾಡಿಯಾಗಿದ್ದರು. 2024ರ ಜುಲೈ 31ರಿಂದ ಮಹಾರಾಷ್ಟ್ರ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಅದಕ್ಕೂ ಹಿಂದೆ ಜಾರ್ಖಂಡ್ ರಾಜ್ಯಪಾಲರಾಗಿದ್ದರು. ಕೆಲಕಾಲ ತೆಲಂಗಾಣ ರಾಜ್ಯಪಾಲ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕೂಡ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದರು.
ಉಪ ರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿದೆ. ಇಂಡಿಯಾ ಒಕ್ಕೂಟದಿಂದ ಅಭ್ಯರ್ಥಿ ಘೋಷಿಸುವ ವಿಚಾರ ಇನ್ನೂ ಚರ್ಚೆಗೆ ಬಂದಿಲ್ಲ.
In a surprise move, the NDA alliance has announced Maharashtra Governor and Tamil Nadu native C.P. Radhakrishnan as its official candidate for the upcoming Vice Presidential election scheduled for September 9.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm