ಬ್ರೇಕಿಂಗ್ ನ್ಯೂಸ್
25-12-20 12:51 pm Headline Karnataka News Network ದೇಶ - ವಿದೇಶ
ಮೀರತ್, ಡಿ.25 : ಜೀನ್ಸ್ ತೊಡಲ್ಲ, ಡ್ಯಾನ್ಸ್ ಮಾಡಲ್ಲವೆಂದ ಪತ್ನಿಗೆ ವ್ಯಕ್ತಿಯೊಬ್ಬ ತ್ರಿಪಲ್ ತಲಾಖ್ ನೀಡಿದ ವಿಲಕ್ಷಣ ಘಟನೆ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮೀರತ್ ಬಳಿಯ ಹಾಪುರದ ಪಿಲ್ಖುವಾ ನಿವಾಸಿ ಅನಾಸ್ ತನ್ನ ಪತ್ನಿಗೆ ತಲಾಖ್ ನೀಡಿದ ಭೂಪ. ನಗರದ ಲಿಸಾರಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಇಸ್ಮಾಯಿಲ್ ನಗರದ ನಿವಾಸಿ ಅಮೀರುದ್ದೀನ್ ಅವರು 8 ವರ್ಷಗಳ ಹಿಂದೆ ತನ್ನ ಮಗಳನ್ನು ಅನಾಸ್ ಗೆ ಮದುವೆ ಮಾಡಿಕೊಟ್ಟಿದ್ದರು.
ದೆಹಲಿಯಲ್ಲಿ ಕೆಲಸ ಮಾಡುತ್ತಿದ್ದ ಅನಾಸ್ ತನ್ನ ಪತ್ನಿಗೆ ಜೀನ್ಸ್ ಹಾಕುವಂತೆ ಒತ್ತಾಯಿಸುತ್ತಿದ್ದ. ಅಲ್ಲದೆ ಡ್ಯಾನ್ಸ್ ಮಾಡು, ಹಾಡು ಹೇಳು ಎಂದೆಲ್ಲ ಕಿರುಕುಳ ನೀಡುತ್ತಿದ್ದ. ಆದರೆ ಪತಿಯ ಈ ವರ್ತನೆಯನ್ನು ಪತ್ನಿ ನಿರಾಕರಿಸುತ್ತಿದ್ದಳು. ಇದರಿಂದ ಸಿಟ್ಟಿಗೆದ್ದ ಅನಾಸ್, ಡಿಸೆಂಬರ್ 22ರಂದು ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ.
ಪತ್ನಿಯನ್ನು ಆಕೆಯ ತಾಯಿ ಮನೆಗೆ ಕಳಿಸಿಕೊಟ್ಟಿದ್ದಾನೆ. ತಲಾಖ್ ನೀಡಿದ ಬಳಿಕ ಅನಾಸ್ ನೇರವಾಗಿ ಆಕೆಯ ತವರು ಮನೆಗೆ ಬಂದಿದ್ದಾನೆ. ನಂತರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಪತ್ನಿ ಕುಟುಂಬಸ್ಥರು ಬೆಂಕಿ ನಂದಿಸುವ ಮೂಲಕ ಅನಾಸ್ ನನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಹಿಂದೆ, ಜೀನ್ಸ್ ತೊಟ್ಟರೆ, ಹಾಡು ಹಾಡಿರೆ, ಡ್ಯಾನ್ಸ್ ಮಾಡಿದರೆ ಇಸ್ಲಾಂ ವಿರುದ್ಧ ಎಂದು ಫತ್ವಾ ನೀಡುವ ಪರಿಪಾಠ ಇತ್ತು. ಕೆಲವು ಮೂಲಭೂತವಾದಿ ಮೌಲ್ವಿಗಳು ಈಗಲೂ ಇಂಥ ಫತ್ವಾ ಹೇರಿಕೆಯನ್ನು ಮಾಡುತ್ತಾರೆ. ಆದರೆ, ಇಲ್ಲೊಬ್ಬ ಮುಸ್ಲಿಂ ಅದರ ವಿರುದ್ಧವೇ ವರ್ತಿಸಿದ್ದಲ್ಲದೆ, ಅದಕ್ಕಾಗಿ ಪತ್ನಿಯನ್ನೇ ಅಗಲುವ ಹಂತಕ್ಕೆ ಹೋಗಿದ್ದಾನೆ.
In a shocking incident reported from the Meerut district of Uttar Pradesh, a man pronounced triple talaq to his wife after she allegedly refused to dance and wear jeans.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm