ಬ್ರೇಕಿಂಗ್ ನ್ಯೂಸ್
25-12-20 12:51 pm Headline Karnataka News Network ದೇಶ - ವಿದೇಶ
ಮೀರತ್, ಡಿ.25 : ಜೀನ್ಸ್ ತೊಡಲ್ಲ, ಡ್ಯಾನ್ಸ್ ಮಾಡಲ್ಲವೆಂದ ಪತ್ನಿಗೆ ವ್ಯಕ್ತಿಯೊಬ್ಬ ತ್ರಿಪಲ್ ತಲಾಖ್ ನೀಡಿದ ವಿಲಕ್ಷಣ ಘಟನೆ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮೀರತ್ ಬಳಿಯ ಹಾಪುರದ ಪಿಲ್ಖುವಾ ನಿವಾಸಿ ಅನಾಸ್ ತನ್ನ ಪತ್ನಿಗೆ ತಲಾಖ್ ನೀಡಿದ ಭೂಪ. ನಗರದ ಲಿಸಾರಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಇಸ್ಮಾಯಿಲ್ ನಗರದ ನಿವಾಸಿ ಅಮೀರುದ್ದೀನ್ ಅವರು 8 ವರ್ಷಗಳ ಹಿಂದೆ ತನ್ನ ಮಗಳನ್ನು ಅನಾಸ್ ಗೆ ಮದುವೆ ಮಾಡಿಕೊಟ್ಟಿದ್ದರು.
ದೆಹಲಿಯಲ್ಲಿ ಕೆಲಸ ಮಾಡುತ್ತಿದ್ದ ಅನಾಸ್ ತನ್ನ ಪತ್ನಿಗೆ ಜೀನ್ಸ್ ಹಾಕುವಂತೆ ಒತ್ತಾಯಿಸುತ್ತಿದ್ದ. ಅಲ್ಲದೆ ಡ್ಯಾನ್ಸ್ ಮಾಡು, ಹಾಡು ಹೇಳು ಎಂದೆಲ್ಲ ಕಿರುಕುಳ ನೀಡುತ್ತಿದ್ದ. ಆದರೆ ಪತಿಯ ಈ ವರ್ತನೆಯನ್ನು ಪತ್ನಿ ನಿರಾಕರಿಸುತ್ತಿದ್ದಳು. ಇದರಿಂದ ಸಿಟ್ಟಿಗೆದ್ದ ಅನಾಸ್, ಡಿಸೆಂಬರ್ 22ರಂದು ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ.

ಪತ್ನಿಯನ್ನು ಆಕೆಯ ತಾಯಿ ಮನೆಗೆ ಕಳಿಸಿಕೊಟ್ಟಿದ್ದಾನೆ. ತಲಾಖ್ ನೀಡಿದ ಬಳಿಕ ಅನಾಸ್ ನೇರವಾಗಿ ಆಕೆಯ ತವರು ಮನೆಗೆ ಬಂದಿದ್ದಾನೆ. ನಂತರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಪತ್ನಿ ಕುಟುಂಬಸ್ಥರು ಬೆಂಕಿ ನಂದಿಸುವ ಮೂಲಕ ಅನಾಸ್ ನನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಹಿಂದೆ, ಜೀನ್ಸ್ ತೊಟ್ಟರೆ, ಹಾಡು ಹಾಡಿರೆ, ಡ್ಯಾನ್ಸ್ ಮಾಡಿದರೆ ಇಸ್ಲಾಂ ವಿರುದ್ಧ ಎಂದು ಫತ್ವಾ ನೀಡುವ ಪರಿಪಾಠ ಇತ್ತು. ಕೆಲವು ಮೂಲಭೂತವಾದಿ ಮೌಲ್ವಿಗಳು ಈಗಲೂ ಇಂಥ ಫತ್ವಾ ಹೇರಿಕೆಯನ್ನು ಮಾಡುತ್ತಾರೆ. ಆದರೆ, ಇಲ್ಲೊಬ್ಬ ಮುಸ್ಲಿಂ ಅದರ ವಿರುದ್ಧವೇ ವರ್ತಿಸಿದ್ದಲ್ಲದೆ, ಅದಕ್ಕಾಗಿ ಪತ್ನಿಯನ್ನೇ ಅಗಲುವ ಹಂತಕ್ಕೆ ಹೋಗಿದ್ದಾನೆ.
In a shocking incident reported from the Meerut district of Uttar Pradesh, a man pronounced triple talaq to his wife after she allegedly refused to dance and wear jeans.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm