ಬ್ರೇಕಿಂಗ್ ನ್ಯೂಸ್
25-12-20 01:49 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.25 : ಜನವರಿ 1ರಿಂದ ದೇಶದಲ್ಲಿ ವಾಹನಗಳ ಫಾಸ್ಟ್ ಟ್ಯಾಗ್ ಕಡ್ಡಾಯವಾಗಲಿದೆ. ನಾಲ್ಕು ಚಕ್ರ ಮತ್ತು ಅದಕ್ಕಿಂತ ಹೆಚ್ಚು ಚಕ್ರಗಳುಳ್ಳ ಎಲ್ಲ ರೀತಿಯ ವಾಹನಗಳು ಫಾಸ್ಟ್ ಟ್ಯಾಗ್ ಕಡ್ಡಾಯ ಹೊಂದಿರಬೇಕು. ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳಿಗೆ ಟೋಲ್ ಗೇಟ್ ಪ್ರವೇಶ ಇರುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಪ್ರಸ್ತುತ ದಿನಗಳಲ್ಲಿ ಫಾಸ್ಟ್ ಟ್ಯಾಗ್ ಉಪಯುಕ್ತವಾಗಿದ್ದು, ವಾಹನಗಳನ್ನು ಟೋಲ್ ಪ್ಲಾಜಾಗಳಲ್ಲಿ ನಿಲ್ಲಿಸುವ ಅಗತ್ಯ ಇರುವುದಿಲ್ಲ. ಇದರಿಂದ ಸಮಯ ಹಾಗೂ ಇಂಧನ ಉಳಿತಾಯವಾಗಲಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಸಹ ಈ ಕುರಿತು ಆದೇಶ ಹೊರಡಿಸಿತ್ತು. ಹಳೆ ವಾಹನ ಸೇರಿ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಎಂದು ತಿಳಿಸಿತ್ತು.

ಈ ಬಗ್ಗೆ ನವೆಂಬರ್, 2020ರಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದಿಂದ ಸುತ್ತೋಲೆ ಹೊರಡಿಸಲಾಗಿದ್ದು , ಫಾಸ್ಟ್ ಟ್ಯಾಗ್ ಮೂಲಕ ಡಿಜಿಟಲ್ ಆಧರಿತ ಶುಲ್ಕ ಪಾವತಿಯನ್ನು ಉತ್ತೇಜಿಸಲಾಗುವುದು. ಜನವರಿ 1, 2021ರಿಂದ ಹಳೆ ವಾಹನಗಳು ಸೇರಿ ಎಂ ಹಾಗೂ ಎನ್ ಮಾದರಿಯ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿದೆ ಎಂದು ತಿಳಿಸಿದೆ.

ಡಿಸೆಂಬರ್ 1, 2017ರಿಂದ ನಾಲ್ಕು ಚಕ್ರದ ವಾಹನಗಳ ನೋಂದಣಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಲಾಗಿತ್ತು. ವಾಹನ ಉತ್ಪಾದನೆ ಕಂಪನಿಗಳು ಅಥವಾ ಡೀಲರ್ ಗಳು ವಾಹನದ ಜೊತೆಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿ ನೀಡಬೇಕು. ಅಲ್ಲದೆ ಫಿಟ್ನೆಸ್ ಸರ್ಟಿಫಿಕೇಟ್ ನವೀಕರಿಸಬೇಕಾದರೆ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯವಾಗಿರುತ್ತದೆ. ನ್ಯಾಷನಲ್ ಪರ್ಮಿಟ್ ವಾಹನಗಳಿಗೆ ಅಕ್ಟೋಬರ್ 1, 2019ರಿಂದಲೇ ಕಡ್ಡಾಯಗೊಳಿಸಲಾಗಿದೆ ಎಂದು ಸಾರಿಗೆ ಸಚಿವಾಲಯ ಸ್ಪಷ್ಟಪಡಿಸಿದೆ.
Union Minister Nitin Gadkari on Thursday announced that FASTag will be made mandatory for all vehicles in the country from January 1, 2021.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm