ಬ್ರೇಕಿಂಗ್ ನ್ಯೂಸ್
20-08-25 11:01 am HK News Desk ದೇಶ - ವಿದೇಶ
ನವದೆಹಲಿ, ಆ.20 : ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತನ್ನ ನಿವಾಸದಲ್ಲಿ ಜನಸಂಪರ್ಕ ಕಾರ್ಯಕ್ರಮದಲ್ಲಿದ್ದಾಗ ಅವರ ಮೇಲೆ ಯುವಕನೊಬ್ಬ ಏಕಾಏಕಿ ಹಲ್ಲೆ ನಡೆಸಿದ ಘಡನೆ ನಡೆದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೇಖಾ ಗುಪ್ತಾ ಅವರು ತಮ್ಮ ಅಧಿಕೃತ ನಿವಾಸದಲ್ಲಿ 'ಜನ್ ಸುನ್ ವಾಯಿ' (ಜನರ ಅಹವಾಲು) ಕಾರ್ಯಕ್ರಮದಲ್ಲಿದ್ದಾಗ ಅಂದಾಜು 30ರ ಹರೆಯದ ವ್ಯಕ್ತಿಯೊಬ್ಬ ಕೋರ್ಟ್ ಕೇಸ್ ಸಂಬಂಧಿಸಿ ದಾಖಲೆ ಪತ್ರಗಳನ್ನು ಹಿಡಿದು ಬಂದಿದ್ದು ಏಕಾಏಕಿ ಸಿಟ್ಟಿಗೆದ್ದು ಹಲ್ಲೆ ನಡೆಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಸೆರೆಹಿಡಿದು ವಿಚಾರಣೆ ನಡೆಸಿದ್ದಾರೆ. ದೂರು ಹೇಳುವ ನೆಪದಲ್ಲಿ ಬಂದಿದ್ದು ಇದರ ನಡುವಲ್ಲೇ ಕೈಯನ್ನು ಹಿಡಿದೆಳೆದು ಕೂದಲು ಹಿಡಿದು ಹಲ್ಲೆ ನಡೆಸಿದ್ದಾನೆ. ಇದರಿಂದ ರೇಖಾ ಗುಪ್ತಾ ತನ್ನ ಕುರ್ಚಿಯಿಂದ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ.
ಆಗಂತುಕ ವ್ಯಕ್ತಿಯನ್ನು ರಾಜೇಶ್ ಕಿಮ್ಜಿ ಎಂದು ಗುರುತಿಸಲಾಗಿದ್ದು ಹಲ್ಲೆ ಉದ್ದೇಶ ಏನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಎಂ ರೇಖಾ ಗುಪ್ತಾ ಅವರ ಮೇಲಿನ ದಾಳಿಯನ್ನು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಮತ್ತು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದರ್ ಯಾದವ್ ಖಂಡಿಸಿದ್ದಾರೆ.
ಜನ್ ಸುನ್ವಾಯಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ನೇರವಾಗಿ ಮುಖ್ಯಮಂತ್ರಿಗೆ ಅಹವಾಲು, ದೂರುಗಳನ್ನು ಸಲ್ಲಿಸಬಹುದು. ಬುಧವಾರ ಬೆಳಗ್ಗೆ ಎಂದಿನಂತೆ ಸಿಎಂ ಗುಪ್ತಾ ತನ್ನ ಕೆಲಸದಲ್ಲಿ ನಿರತವಾಗಿದ್ದಾಗಲೇ ಯುವಕ ಹಲ್ಲೆ ನಡೆಸಿದ್ದಾನೆ. ಹಲ್ಲೆ ಘಟನೆ ದೆಹಲಿಯಲ್ಲಿ ಭದ್ರತಾ ವೈಫಲ್ಯದ ಬಗ್ಗೆ ಆತಂಕ ಹೆಚ್ಚಿಸಿದೆ. ಮುಖ್ಯಮಂತ್ರಿಗೇ ಭದ್ರತೆ ಕೊಡುವಲ್ಲಿ ದೆಹಲಿ ಪೊಲೀಸರು ವಿಫಲರಾದರೇ ಎಂಬ ಪ್ರಶ್ನೆ ಎದುರಾಗಿದೆ.
Delhi Chief Minister Rekha Gupta was attacked by an intruder while interacting with the public at her official residence during a Jan Sunwai (public grievance hearing) program on Wednesday. She was immediately rushed to the hospital, while police apprehended the accused on the spot.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm