ಬ್ರೇಕಿಂಗ್ ನ್ಯೂಸ್
10-08-20 03:08 pm Headline Karnataka News Network ದೇಶ - ವಿದೇಶ
ಕೋಲ್ಕತ್ತಾ , ಆಗಸ್ಟ್ 10: ಕೊರೊನಾದಿಂದ ಸಾವನ್ನಪ್ಪಿದವರ ದೇಹವನ್ನು ನೋಡಲು ಖಾಸಗಿ ಆಸ್ಪತ್ರೆ 51 ಸಾವಿರ ರೂ. ನೀಡಲುವಂತೆ ಬೇಡಿಕೆ ಇಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಕೊರೊನಾ ಸೋಂಕಿನಿಂದಾಗಿ ನಮ್ಮ ತಂದೆ ಹರಿ ಗುಪ್ತಾ ಶನಿವಾರ ಮಧ್ಯರಾತ್ರಿ ಸಾವನ್ನಪ್ಪಿದ್ದು, ಈ ಕುರಿತು ಖಾಸಗಿ ಆಸ್ಪತ್ರೆಯವರು ಕುಟುಂಬಸ್ಥರಿಗೆ ಯಾವುದೇ ಮಾಹಿತಿ ನೀಡಿಲ್ಲ. ಅಲ್ಲದೆ ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಸಾಗರ್ ಗುಪ್ತಾ ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ ಆಸ್ಪತ್ರೆಯವರು ಕರೆ ಮಾಡಿ ಶನಿವಾರ ಮಧ್ಯರಾತ್ರಿ ನಮ್ಮ ತಮದೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ರಾತ್ರಿಯೇ ಏಕೆ ನಮಗೆ ಹೇಳಲಿಲ್ಲ ಎಂದು ಆಸ್ಪತ್ರೆಯವನ್ನು ಪ್ರಶ್ನಿಸಿದರೆ, ಸಂಪರ್ಕದ ಮಾಹಿತಿ ಇರಲಿಲ್ಲ ಎಂದು ಹೇಳಿದರು ಎಂದು ಸಾಗರ್ ಆರೋಪಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಆಸ್ಪತ್ರೆಗೆ ತೆರಳಿದ್ದು, ಆಗ ದೇಹವನ್ನು ಅಂತ್ಯಸಂಸ್ಕಾರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ. ನಂತರ ಕುಟುಂಬಸ್ಥರು ಶಿಬ್ಪುರ್ ಸ್ಮಶಾಣಕ್ಕೆ ತೆರಳಿದ್ದು, ಈ ವೇಳೆ ಸಿಬ್ಬಂದಿ ದೇಹವನ್ನು ನೋಡಲು 51 ಸಾವಿರ ರೂ. ಪಾವತಿಸುವಂತೆ ತಿಳಿಸಿದರು. ನಂತರ ಕುಟುಂಬಸ್ಥರು ಮಾತನಾಡಿ ಈ ಹಣವನ್ನು 31 ಸಾವಿರಕ್ಕೆ ಇಳಿಸಿದ್ದಾರೆ. ಆದರೆ ಈ ಹಣವನ್ನು ಕುಟುಂಬಸ್ಥರಿಗೆ ಪಾವತಿಸಲು ಸಾಧ್ಯವಾಗಿಲ್ಲ. ಹೀಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಸ್ಥಳಕ್ಕಾಗಮಿಸಿದ್ದು, ಈ ವೇಳೆ ಪೊಲೀಸರು ಸಹ ಮನವಿ ಮಾಡಿಕೊಂಡಿದ್ದಾರೆ. ಆದರೆ ಆಸ್ಪತ್ರೆ ಸಿಬ್ಬಂದಿ ಇದಾವುದನ್ನೂ ಕೇಳದೆ ಮೇಲಾಧಿಕಾರಿಗಳನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ. ಈ ವೇಳೆ ಕುಟುಂಬಸ್ಥರು ಘಟನೆಯನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಇದನ್ನು ಕಂಡ ಆಸ್ಪತ್ರೆ ಸಿಬ್ಬಂದಿ ಕುಟುಂಬಸ್ಥರ ಮೊಬೈಲ್ ಕಸಿದುಕೊಂಡಿದ್ದಾರೆ.
ಅಂತಿಮವಾಗಿ ಕುಟುಂಬಸ್ಥರಿಗೆ ಮೃತ ದೇಹವನ್ನು ನೋಡಲು ಬಿಡದೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಈಗಲೂ ಆಸ್ಪತ್ರೆ ಸಿಬ್ಬಂದಿ ಸುಳ್ಳು ಹೇಳಿದ್ದು, ಯಾವುದೇ ಕುಟುಂಬ ಸದಸ್ಯರು ಸಂಪರ್ಕಕ್ಕೆ ಬಾರದ ಕಾರಣ ನಾವೇ ಅಂತ್ಯಸಂಸ್ಕಾರ ಮಾಡಿದ್ದೇವೆ ಎಂದು ವಾದಿಸಿದ್ದಾರೆ. ಇದೀಗ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಲು ಯೋಚಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm