ಬ್ರೇಕಿಂಗ್ ನ್ಯೂಸ್
10-08-20 03:08 pm Headline Karnataka News Network ದೇಶ - ವಿದೇಶ
ಕೋಲ್ಕತ್ತಾ , ಆಗಸ್ಟ್ 10: ಕೊರೊನಾದಿಂದ ಸಾವನ್ನಪ್ಪಿದವರ ದೇಹವನ್ನು ನೋಡಲು ಖಾಸಗಿ ಆಸ್ಪತ್ರೆ 51 ಸಾವಿರ ರೂ. ನೀಡಲುವಂತೆ ಬೇಡಿಕೆ ಇಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಕೊರೊನಾ ಸೋಂಕಿನಿಂದಾಗಿ ನಮ್ಮ ತಂದೆ ಹರಿ ಗುಪ್ತಾ ಶನಿವಾರ ಮಧ್ಯರಾತ್ರಿ ಸಾವನ್ನಪ್ಪಿದ್ದು, ಈ ಕುರಿತು ಖಾಸಗಿ ಆಸ್ಪತ್ರೆಯವರು ಕುಟುಂಬಸ್ಥರಿಗೆ ಯಾವುದೇ ಮಾಹಿತಿ ನೀಡಿಲ್ಲ. ಅಲ್ಲದೆ ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಸಾಗರ್ ಗುಪ್ತಾ ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ ಆಸ್ಪತ್ರೆಯವರು ಕರೆ ಮಾಡಿ ಶನಿವಾರ ಮಧ್ಯರಾತ್ರಿ ನಮ್ಮ ತಮದೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ರಾತ್ರಿಯೇ ಏಕೆ ನಮಗೆ ಹೇಳಲಿಲ್ಲ ಎಂದು ಆಸ್ಪತ್ರೆಯವನ್ನು ಪ್ರಶ್ನಿಸಿದರೆ, ಸಂಪರ್ಕದ ಮಾಹಿತಿ ಇರಲಿಲ್ಲ ಎಂದು ಹೇಳಿದರು ಎಂದು ಸಾಗರ್ ಆರೋಪಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಆಸ್ಪತ್ರೆಗೆ ತೆರಳಿದ್ದು, ಆಗ ದೇಹವನ್ನು ಅಂತ್ಯಸಂಸ್ಕಾರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ. ನಂತರ ಕುಟುಂಬಸ್ಥರು ಶಿಬ್ಪುರ್ ಸ್ಮಶಾಣಕ್ಕೆ ತೆರಳಿದ್ದು, ಈ ವೇಳೆ ಸಿಬ್ಬಂದಿ ದೇಹವನ್ನು ನೋಡಲು 51 ಸಾವಿರ ರೂ. ಪಾವತಿಸುವಂತೆ ತಿಳಿಸಿದರು. ನಂತರ ಕುಟುಂಬಸ್ಥರು ಮಾತನಾಡಿ ಈ ಹಣವನ್ನು 31 ಸಾವಿರಕ್ಕೆ ಇಳಿಸಿದ್ದಾರೆ. ಆದರೆ ಈ ಹಣವನ್ನು ಕುಟುಂಬಸ್ಥರಿಗೆ ಪಾವತಿಸಲು ಸಾಧ್ಯವಾಗಿಲ್ಲ. ಹೀಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಸ್ಥಳಕ್ಕಾಗಮಿಸಿದ್ದು, ಈ ವೇಳೆ ಪೊಲೀಸರು ಸಹ ಮನವಿ ಮಾಡಿಕೊಂಡಿದ್ದಾರೆ. ಆದರೆ ಆಸ್ಪತ್ರೆ ಸಿಬ್ಬಂದಿ ಇದಾವುದನ್ನೂ ಕೇಳದೆ ಮೇಲಾಧಿಕಾರಿಗಳನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ. ಈ ವೇಳೆ ಕುಟುಂಬಸ್ಥರು ಘಟನೆಯನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಇದನ್ನು ಕಂಡ ಆಸ್ಪತ್ರೆ ಸಿಬ್ಬಂದಿ ಕುಟುಂಬಸ್ಥರ ಮೊಬೈಲ್ ಕಸಿದುಕೊಂಡಿದ್ದಾರೆ.
ಅಂತಿಮವಾಗಿ ಕುಟುಂಬಸ್ಥರಿಗೆ ಮೃತ ದೇಹವನ್ನು ನೋಡಲು ಬಿಡದೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಈಗಲೂ ಆಸ್ಪತ್ರೆ ಸಿಬ್ಬಂದಿ ಸುಳ್ಳು ಹೇಳಿದ್ದು, ಯಾವುದೇ ಕುಟುಂಬ ಸದಸ್ಯರು ಸಂಪರ್ಕಕ್ಕೆ ಬಾರದ ಕಾರಣ ನಾವೇ ಅಂತ್ಯಸಂಸ್ಕಾರ ಮಾಡಿದ್ದೇವೆ ಎಂದು ವಾದಿಸಿದ್ದಾರೆ. ಇದೀಗ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಲು ಯೋಚಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm