ಬ್ರೇಕಿಂಗ್ ನ್ಯೂಸ್
29-08-25 12:50 pm HK News Desk ದೇಶ - ವಿದೇಶ
ನವದೆಹಲಿ, ಆ.29 : ತಿಂಗಳ ಹಿಂದೆ ತಾನು ನೀಡಿದ್ದ ಹೇಳಿಕೆಯೊಂದನ್ನು ಆಧರಿಸಿ ಪ್ರಧಾನಿ ನರೇಂದ್ರ ಮೋದಿಯವರ ನಿವೃತ್ತಿಯ ಬಗ್ಗೆ ಹಬ್ಬಿದ್ದ ಊಹಾಪೋಹಗಳಿಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ತೆರೆ ಎಳೆದಿದ್ದಾರೆ. ಸಂಘದಲ್ಲಿ 75 ವರ್ಷ ದಾಟಿದ ನಾಯಕರಿಗೆ ನಿವೃತ್ತಿ ನೀಡುವ ನಿಯಮ ಇಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಮೋದಿಯವರು ರಾಜಕೀಯದಲ್ಲಿ ಸಕ್ರಿಯರಾಗಿ ಮುಂದುವರಿಯಲು ಅಡ್ಡಿ ಇಲ್ಲ ಎಂಬ ಸಂದೇಶ ರವಾನಿಸಿದ್ದಾರೆ.
ಇದರೊಂದಿಗೆ ಬಿಜೆಪಿ ಮತ್ತು ಬಿಜೆಪಿಯ ಮಾರ್ಗದರ್ಶಕ ಸಂಸ್ಥೆ ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ 75 ವರ್ಷ ಆದ ನಾಯಕರಿಗೆ ನಿವೃತ್ತಿ ನೀಡುವ ಅಲಿಖಿತ ನಿಯಮವಿದೆ ಎಂಬ ಚರ್ಚೆಗಳಿಗೆ ಅವರು ಪೂರ್ಣ ವಿರಾಮ ಹಾಕಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಕಾರ್ಯಕ್ರಮದ ಉಪನ್ಯಾಸದ ಬಳಿಕ ಮಾತನಾಡಿದ ಮೋಹನ್ ಭಾಗ್ವತ್ 75 ವರ್ಷವಾದಾಗ ನಾನು ನಿವೃತ್ತಿಯಾಗುತ್ತೇನೆ ಅಥವಾ ಬೇರೆಯವರು ನಿವೃತ್ತಿಯಾಗಬೇಕು ಎಂದು ನಾನು ಎಂದಿಗೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾವೆಲ್ಲರೂ ಸಂಘದ ಸ್ವಯಂಸೇವಕರು. ನಮಗೆ ವಹಿಸಿದ ಜವಾಬ್ದಾರಿಯನ್ನು ನಾವು ನಿರ್ವಹಿಸುತ್ತೇವೆ. ನಾನು 80 ವರ್ಷವಾದರೂ ಸಂಘವನ್ನು ಮುನ್ನಡೆಸುತ್ತೇನೆ ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿಯವರು 75ನೇ ವಯಸ್ಸಿನಲ್ಲಿ ನಿವೃತ್ತಿಯಾಗುತ್ತಾರೆ ಎಂಬ ವದಂತಿಯನ್ನು ಬಿಜೆಪಿ ಕೂಡ ತಳ್ಳಿ ಹಾಕಿದೆ. 75 ವರ್ಷದ ಮಿತಿ ಎಂಬ ನಿಯಮವೇ ಇಲ್ಲ ಎಂದು ಈಗಾಗಲೇ ಹಲವು ಬಾರಿ ಪಕ್ಷ ಸ್ಪಷ್ಟಪಡಿಸಿದೆ. ಇದಕ್ಕೆ ಉದಾಹರಣೆಯಾಗಿ, ಕೇಂದ್ರ ಸಚಿವ ಸಂಪುಟದಲ್ಲಿ 80 ವರ್ಷದ ಜಿತನ್ ರಾಮ್ ಮಾಂಝಿ ಅವರು ಸಚಿವರಾಗಿರುವುದನ್ನೂ ಬಿಜೆಪಿ ಉಲ್ಲೇಖಿಸಿದೆ.
ಮೂರು ಮಕ್ಕಳನ್ನು ಹೊಂದುವಂತೆ ಕರೆ
ದೇಶದ ಎಲ್ಲ ನಾಗರಿಕರೂ ಕನಿಷ್ಠ ಮೂರು ಮಕ್ಕಳನ್ನು ಪಡೆಯಬೇಕು. ನಾವಿಬ್ಬರು, ನಮಗೆ ಮೂವರು' ಎಂಬ ಸೂತ್ರವನ್ನು ಪಾಲಿಸುವುದು ಒಳ್ಳೆಯದು ಎಂದು ಮೋಹನ್ ಭಾಗ್ವತ್ ಹೇಳಿದ್ದಾರೆ. ದೇಶದಲ್ಲಿ ಜನಸಂಖ್ಯಾ ಕುಸಿತ ತಡೆಗಟ್ಟಿ ಅದನ್ನು ಸ್ಥಿರಗೊಳಿಸಲು ಮೂರು ಮಕ್ಕಳನ್ನು ಹೊಂದುವುದು ಅಗತ್ಯ ಎಂದು ಅವರು ತಿಳಿಸಿದ್ದಾರೆ.
RSS chief Mohan Bhagwat has put an end to speculations regarding Prime Minister Narendra Modi’s retirement, clarifying that he never stated Modi must step down after turning 75. Addressing discussions sparked by one of his earlier remarks, Bhagwat made it clear that there is no such rule in the RSS requiring leaders to retire after the age of 75.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm