ಬ್ರೇಕಿಂಗ್ ನ್ಯೂಸ್
29-08-25 01:47 pm HK News Desk ದೇಶ - ವಿದೇಶ
ಟೋಕಿಯೋ, ಆ.29 : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಬೆಳಗ್ಗೆ ಜಪಾನ್ಗೆ ಭೇಟಿ ನೀಡಿದ್ದು, ಅಲ್ಲಿನ ಜಪಾನ್ ಸಮುದಾಯವು ಗಾಯತ್ರಿ ಮಂತ್ರದ ಉಚ್ಛಾರದೊಂದಿಗೆ ಮೋದಿಯವರನ್ನು ಸ್ವಾಗತಿಸಿದೆ. ಗಾಯತ್ರಿ ಮಂತ್ರದ ಜಪದೊಂದಿಗೆ ಟೋಕಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾಂಸ್ಕೃತಿಕವಾಗಿ ಸ್ವಾಗತ ಕೋರಲಾಯಿತು. ಅನೇಕ ಜಾನಪದ ಹಾಗೂ ಮಂತ್ರ, ಶ್ಲೋಕಗಳ ಮೂಲಕ ಜಪಾನಿಯರು ಮೋದಿಯವರನ್ನು ತಮ್ಮ ದೇಶಕ್ಕೆ ಬರಮಾಡಿಕೊಂಡರು.
ಟೋಕಿಯೋ ವಿಮಾನ ನಿಲ್ದಾಣದಲ್ಲಿ ಜಪಾನಿನ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದ್ದು, ಅಲ್ಲಿನ ಭಾರತೀಯ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಮೋದಿಯವರನ್ನು ಬರಮಾಡಿಕೊಂಡರು. ಜಪಾನ್ ಭೇಟಿಗೂ ಮುನ್ನ ಪ್ರಧಾನಿಯವರು ಈ ಭೇಟಿಯು ಭಾರತ ಮತ್ತು ಜಪಾನ್ ನಡುವಿನ ಬಾಂಧವ್ಯ ಬಲಪಡಿಸುವ ಗುರಿ ಹೊಂದಿದೆ ಎಂದು ಹೇಳಿದ್ದು, ಜಪಾನ್ ಭೇಟಿ ಎರಡು ದಿನ ನಿಗದಿಯಾಗಿದೆ. ಈ ವೇಳೆ ಜಪಾನ್ ಪ್ರಧಾನಿ ಇಶಿಬಾ ಅವರೊಂದಿಗೆ ಪ್ರಧಾನಿಯವರು ಮಾತುಕತೆ ನಡೆಸಲಿದ್ದಾರೆ.
ಜಪಾನ್ ಭೇಟಿ ಮೂಲಕ ದೇಶದ ಬೆಳವಣಿಗೆಗೆ ಪೂರಕವಾಗಿ ಜಂಟಿ ಸಹಯೋಗದಲ್ಲಿ ಕಾರ್ಯಾಚರಣೆ ಮಾಡುವುದು, ಆರ್ಥಿಕ ಮತ್ತು ಹೂಡಿಕೆ ಸಂಬಂಧಗಳ ವ್ಯಾಪ್ತಿ ಮತ್ತು ಮಹತ್ವಾಕಾಂಕ್ಷೆಯನ್ನು ವಿಸ್ತರಿಸುವುದು, ಎಐ ಮತ್ತು ಸೆಮಿ ಕಂಡಕ್ಟರ್ಗಳು ಸೇರಿದಂತೆ ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ.
ಜಪಾನ್ ಬಳಿಕ ಚೀನಾಕ್ಕೆ ಭೇಟಿ
ಜಪಾನ್ ಭೇಟಿ ಬಳಿಕ ಪ್ರಧಾನಿ ಮೋದಿಯವರು ಚೀನಾಕ್ಕೆ ಭೇಟಿ ನೀಡಲಿದ್ದಾರೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಅವರು ಟಿಯಾಂಜಿನ್ನಲ್ಲಿ ನಡೆಯುವ ಎಸ್ಸಿಒ (ಶಾಂಘೈ ಕಾರ್ಪೊರೇಷನ್ ಆರ್ಗನೈಸೇಶನ್) ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಕ್ಕೆ ತೆರಳಲಿದ್ದಾರೆ. ಭಾರತಕ್ಕೆ ಅಮೆರಿಕ ಸುಂಕ ಬೆದರಿಕೆ ಹಿನ್ನೆಲೆಯಲ್ಲಿ ಚೀನಾ ಅಧ್ಯಕ್ಷರೇ ಮೋದಿಯವರನ್ನು ಸ್ವಾಗತಿಸಿ ಪಾಶ್ಚಾತ್ಯ ದೇಶಗಳಿಗೆ ಸಂದೇಶ ನೀಡುವ ನಿರೀಕ್ಷೆಯಿದೆ.
Prime Minister Narendra Modi received a grand cultural welcome upon his arrival in Japan on Friday morning, with the local Indian diaspora and Japanese community chanting the Gayatri Mantra at the Tokyo airport. The recitation of traditional mantras and shlokas created a spiritual ambiance as Japan warmly embraced the Indian leader.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm