ಬ್ರೇಕಿಂಗ್ ನ್ಯೂಸ್
04-09-25 08:47 pm HK News Desk ದೇಶ - ವಿದೇಶ
ಮುಂಬೈ, ಸೆ.4: ಮುಂಬೈ ಮತ್ತು ಮಹಾನಗರದ ವಿವಿಧ ಪ್ರದೇಶಗಳಲ್ಲಿ ಗಣೇಶ ವಿಸರ್ಜನೆ ವಿಜೃಂಭಣೆಯಿಂದ ನಡೆಯಲಿರುವ ಕಾರಣ ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್ ಮಿಲಾದ್ ರಜೆಯನ್ನು ಸೆ5ರ ಬದಲು ಸೆ.8ಕ್ಕೆ ಬದಲಾವಣೆ ಮಾಡಿದೆ. ಅದೇ ದಿನ ಈದ್ ಮೆರವಣಿಗೆ ಇನ್ನಿತರ ಹಬ್ಬದ ಕಾರ್ಯಕ್ರಮಗಳ ನಡೆಯಲಿವೆ.
ಮುಸ್ಲಿಂ ಸಮುದಾಯವು ಅದ್ದೂರಿಯಾಗಿ ಈದ್ ಮಿಲಾದ್ ಆಚರಣೆ ಮಾಡುವುದರಿಂದ ಒಂದೇ ದಿನ ಎರಡು ಸಮುದಾಯದ ಹಬ್ಬಗಳು ನಡೆದು ಸಂಭಾವ್ಯ ಅಪಾಯಗಳು ನಡೆಯುವುದನ್ನು ತಪ್ಪಿಸಲು ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್-ಎ-ಮಿಲಾದ್ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 8ಕ್ಕೆ ಬದಲಾಯಿಸಿದೆ. ಅನಂತ ಚತುರ್ದಶಿ (ಗಣೇಶ ವಿಗ್ರಹಗಳನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ನೀರಿನಲ್ಲಿ ಮುಳುಗಿಸುವ ಹಿಂದೂ ಹಬ್ಬ) ಸೆಪ್ಟೆಂಬರ್ 6ರಂದು ಬರುವುದರಿಂದ ಈ ಬದಲಾವಣೆ ಮಾಡಲಾಗಿದೆ.

ಸಂಭಾವ್ಯ ಜನಸಂದಣಿ ತಪ್ಪಿಸಲು ಮತ್ತು ಶಾಂತಿಯಿಂದ ಹಬ್ಬದ ಆಚರಣೆ ನಡೆಯಲು ಅನುಕೂಲವಾಗುವಂತೆ ಮುಸ್ಲಿಂ ಸಮುದಾಯವು ಈದ್ ಹಬ್ಬದ ಆಚರಣೆಗೆ ನಿರ್ಧರಿಸಿದ್ದು, ಅದಕ್ಕಾಗಿ ಈದ್ ಮಿಲಾದ್ ಮೆರವಣಿಗೆಯನ್ನು ಸೆಪ್ಟೆಂಬರ್ 8ರಂದು ನಡೆಸಲು ತೀರ್ಮಾನಿಸಿದೆ. ಆದ್ದರಿಂದ ಸರ್ಕಾರವು ಸೆ.5ರ ರಜೆಯನ್ನು ಆ ದಿನಾಂಕಕ್ಕೆ ಬದಲಾಯಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದೇ ರಜೆ ಇರಲಿದೆ. ಮುಂಬೈ ನಗರ ಮತ್ತು ಉಪ ನಗರಗಳಲ್ಲಿ ಮಾತ್ರ ಸೆಪ್ಟೆಂಬರ್ 8ಕ್ಕೆ ಬದಲಾಯಿಸಲಾಗಿದೆ ಎಂದು ಸರ್ಕಾರದ ಸುತ್ತೋಲೆ ತಿಳಿಸಿದೆ. ಮುಂಬೈ ನಗರ ಮತ್ತು ಉಪನಗರಗಳಲ್ಲಿನ ಸರ್ಕಾರಿ ಕಚೇರಿಗಳು ಸೆಪ್ಟೆಂಬರ್ 5ರಂದು ಎಂದಿನಂತೆ ತೆರೆದಿರುತ್ತವೆ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
In view of the grand Ganesh Visarjan celebrations across Mumbai and surrounding areas, the Maharashtra government has officially rescheduled the Eid Milad (Eid-e-Milad) public holiday in Mumbai from September 5 to September 8.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am