ಬ್ರೇಕಿಂಗ್ ನ್ಯೂಸ್
06-09-25 10:34 am HK News Desk ದೇಶ - ವಿದೇಶ
ನವದೆಹಲಿ, ಸೆ.6: ಡಿಜಿಟಲ್ ಪಾವತಿಗೆ ಜನ ಹೆಚ್ಚೆಚ್ಚು ಒಗ್ಗಿಕೊಳ್ಳುತ್ತಿರುವುದು ಮತ್ತು ಇಷ್ಟಪಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಅನುಕೂಲ ಒದಗಿಸಲು 'ಭಾರತೀಯ ರಾಷ್ಟ್ರೀಯ ಪಾವತಿ ನಿಗಮ'ವು ಯುಪಿಐ ಪಾವತಿ ಮಿತಿಯನ್ನು ಮತ್ತಷ್ಟು ಹೆಚ್ಚಳ ಮಾಡಿದೆ. ಸೆಪ್ಟೆಂಬರ್ 15ರಿಂದ ಹೊಸ ನಿಯಮ ಜಾರಿಯಾಗಲಿದ್ದು ಎಲ್ಲ ಬ್ಯಾಂಕುಗಳಿಗೆ ಈ ಕುರಿತು ಸುತ್ತೋಲೆ ಕಳುಹಿಸಲಾಗಿದೆ.
ಇದರಂತೆ ಇನ್ನು ಮುಂದೆ ಗ್ರಾಹಕರು ಒಮ್ಮೆಲೇ ಯುಪಿಐ ಮೂಲಕ 5 ಲಕ್ಷ ರೂ. ವರೆಗೆ ಹಣ ವರ್ಗಾವಣೆ ಮಾಡಬಹುದು. ಮತ್ತು 24 ಗಂಟೆ ಅವಧಿಯಲ್ಲಿ ಒಟ್ಟು 10 ಲಕ್ಷ ರೂ. ವರೆಗಿನ ಮೊತ್ತವನ್ನು ಯುಪಿಐ ಮೂಲಕ ಪಾವತಿಸಿ ಬ್ಯಾಂಕ್ ವಹುವಾಟು ಮಾಡಬಹುದು. ಆದರೆ, ಇದು ವ್ಯಕ್ತಿಯಿಂದ ವರ್ತಕರು ಅಥವಾ ಕಂಪನಿಗಳಿಗೆ ಮಾಡುವ ಪಾವತಿಗಳಿಗೆ ನಿರ್ದಿಷ್ಟ 12 ವ್ಯವಹಾರಗಳಿಗೆ ಮಾತ್ರ ಅನ್ವಯವಾಗುತ್ತದೆ.
ವ್ಯಕ್ತಿಯಿಂದ ವ್ಯಕ್ತಿಗೆ ಕಳುಹಿಸುವ ಹಣಕ್ಕೆ ದೈನಂದಿನ ಗರಿಷ್ಠ 1 ಲಕ್ಷ ರೂ. ಮಿತಿ ಮುಂದುವರಿಯಲಿದೆ. ಸದ್ಯಕ್ಕೆ ಷೇರು ಮಾರುಕಟ್ಟೆ, ವಿಮೆ ಮತ್ತು ಸರಕಾರಿ ಇ-ಮಾರ್ಕೆಟ್ ಪ್ಲೇಸ್, ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಸೇರಿದಂತೆ ಒಟ್ಟು 12 ವರ್ಗಗಳಿಗೆ ಹೆಚ್ಚುವರಿ ಪಾವತಿ ಮಿತಿ ಅನ್ವಯವಾಗಲಿದೆ. ಇದರಂತೆ, ಒಬ್ಬ ವ್ಯಕ್ತಿ ಗರಿಷ್ಠ ಎಂದರೆ ಒಂದು ಬಾರಿಗೆ ಐದು ಲಕ್ಷದಷ್ಟು ಮೊತ್ತವನ್ನು ಯುಪಿಐ ಮೂಲಕ ನಿರ್ದಿಷ್ಟ ಉದ್ದೇಶಕ್ಕೆ ಪಾವತಿ ಮಾಡಬಹುದು. 24 ಗಂಟೆ ಅವಧಿಯಲ್ಲಿ 10 ಲಕ್ಷ ರೂ. ವಹಿವಾಟನ್ನು ಯುಪಿಐನಲ್ಲಿಯೇ ಮಾಡಬಹುದಾಗಿದೆ. ಕ್ರೆಡಿಟ್ ಕಾರ್ಡ್ ಮಿತಿಯನ್ನೂ ಹೆಚ್ಚಿಸಲಾಗಿದ್ದು ಒಂದೇ ಬಾರಿಗೆ ಐದು ಲಕ್ಷ ಪಾವತಿ ಹಾಗೂ ದಿನದಲ್ಲಿ 6 ಲಕ್ಷದಷ್ಟು ಮೊತ್ತ ಪಾವತಿಸಲು ಅವಕಾಶ ನೀಡಲಾಗಿದೆ. ಹೊಸ ನೀತಿಯನ್ನು ಸೆ.15ರಿಂದಲೇ ಜಾರಿಗೆ ತರಲು ಬ್ಯಾಂಕ್ ಗಳಿಗೆ ಸೂಚಿಸಲಾಗಿದೆ.
In response to the growing adoption and popularity of digital payments, the National Payments Corporation of India (NPCI) has announced an increase in the transaction limits for Unified Payments Interface (UPI) payments. The new rules will come into effect from September 15, and all banks have been notified accordingly. As per the revised guidelines, users will now be able to transfer up to ₹5 lakh in a single UPI transaction, and a total of ₹10 lakh within a 24-hour period.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm