ಬ್ರೇಕಿಂಗ್ ನ್ಯೂಸ್
08-09-25 06:07 pm HK News Desk ದೇಶ - ವಿದೇಶ
ನವದೆಹಲಿ, ಸೆ.8 : ಕೈದಿಯೊಬ್ಬ ನಿಗದಿತ ಏಳು ವರ್ಷಗಳ ಶಿಕ್ಷೆ ಪೂರ್ಣಗೊಳಿಸಿದ ಬಳಿಕವೂ ಅಧಿಕಾರಿಗಳು ಹೆಚ್ಚುವರಿಯಾಗಿ ನಾಲ್ಕು ವರ್ಷ ಏಳು ತಿಂಗಳ ಕಾಲ ಜೈಲಿನಲ್ಲಿರಿಸಿದ್ದಕ್ಕೆ ಪ್ರತಿಯಾಗಿ 25 ಲಕ್ಷ ರು. ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲಾ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು, ಪ್ರಕರಣ ಸಂಬಂಧಿಸಿ ಮಧ್ಯಪ್ರದೇಶ ಸರ್ಕಾರವನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಲ್ಲದೆ, ವ್ಯಕ್ತಿಗೆ ಪರಿಹಾರ ನೀಡಲು ಆದೇಶಿಸಿದೆ. ಅಪರಾಧಿ ಸೋಹನ್ ಸಿಂಗ್ ಪರ ವಾದ ಮಂಡಿಸಿದ ವಕೀಲ ಮಹ್ಫೂಜ್ ನಜ್ಕಿ, ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪೂರ್ಣಗೊಂಡ ನಂತರವೂ ನಾಲ್ಕು ವರ್ಷ ಏಳು ತಿಂಗಳು ಹೆಚ್ಚುವರಿಯಾಗಿ ಜೈಲಿನಲ್ಲಿ ಕಳೆದಿದ್ದಾರೆ. ಅವರು ಒಟ್ಟು 11 ವರ್ಷ 7 ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಅವರಿಗೆ ವಿಧಿಸಿದ್ದ ಜೈಲು ಶಿಕ್ಷೆ ಕೇವಲ 7 ವರ್ಷಗಳಾದರೂ ಹೆಚ್ಚುವರಿಯಾಗಿ ಜೈಲಿನಲ್ಲಿ ಇರಿಸಲಾಗಿದೆ ಎಂದು ಆಕ್ಷೇಪಿಸಿದ್ದಾರೆ.
ತಪ್ಪು ದಾರಿಗೆಳೆಯುವ ಅಫಿಡವಿಟ್ ಸಲ್ಲಿಸಿದ್ದಕ್ಕಾಗಿ ರಾಜ್ಯ ಸರ್ಕಾರದ ಪರ ವಕೀಲರನ್ನು ತರಾಟೆಗೆ ತೆಗೆದಿದ್ದಲ್ಲದೆ, 25 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿತು. ಇದೇ ರೀತಿ ಅಕ್ರಮವಾಗಿ ಜೈಲಿನಲ್ಲಿ ಯಾರನ್ನಾದರೂ ಇರಿಸಲಾಗಿದೆಯೇ ಎಂದು ಪರಿಶೀಲಿಸಲು ಮಧ್ಯಪ್ರದೇಶ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿತು. ಶಿಕ್ಷೆಯನ್ನು ಪೂರ್ಣಗೊಳಿಸಿದ ನಂತರ ಅಪರಾಧಿಗಳನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ ಹೇಳಿದೆ.
ಇದಕ್ಕೂ ಮೊದಲು ಏಳು ವರ್ಷಗಳ ಸಂಪೂರ್ಣ ಶಿಕ್ಷೆಯನ್ನು ಅನುಭವಿಸಿದ ನಂತರವೂ ನಾಲ್ಕು ವರ್ಷ ಹೆಚ್ಚು ಕಾಲ ಜೈಲಿನಲ್ಲಿ ಏಕೆ ಇದ್ದರು ಮತ್ತು ಅಂತಹ ಗಂಭೀರ ಲೋಪ ಹೇಗೆ ಸಂಭವಿಸಿತು ಎಂಬ ಬಗ್ಗೆ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠವು ಆಗಸ್ಟ್ 22 ರಂದು ರಾಜ್ಯ ಸರ್ಕಾರಕ್ಕೆ ವರದಿ ಕೇಳಿತ್ತು. ಸರ್ಕಾರದ ಪರ ವಕೀಲರ ವರದಿ ಮತ್ತು ತಪ್ಪಾದ ಅಫಿಡವಿಟ್ ನೋಡಿ ಗರಂ ಆಗಿರುವ ನ್ಯಾಯಪೀಠವು ಸರ್ಕಾರಕ್ಕೆ ಛೀಮಾರಿ ಹಾಕಿದ್ದಲ್ಲದೆ, 25 ಲಕ್ಷ ಪರಿಹಾರ ನೀಡಲು ಆದೇಶಿಸಿದೆ.
In a strong rebuke to the Madhya Pradesh government, the Supreme Court on Monday directed the state to pay ₹25 lakh in compensation to a man who was wrongfully kept in prison for four years and seven months beyond his legally mandated sentence.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm