ಬ್ರೇಕಿಂಗ್ ನ್ಯೂಸ್
14-09-25 07:31 pm HK News Desk ದೇಶ - ವಿದೇಶ
ಗುವಾಹಟಿ, ಸೆ.14 : ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಭೂಕಂಪ ಸಂಭವಿಸಿದ್ದು, ಪಕ್ಕದ ಉತ್ತರ ಬಂಗಾಳ ಮತ್ತು ಭೂತಾನ್ ನಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಭಾನುವಾರ ಸಂಜೆ 4.41ರ ಸುಮಾರಿಗೆ ಗುವಾಹತಿಯಲ್ಲಿ ಭೂಕಂಪದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.8ರ ತೀವ್ರತೆ ದಾಖಲಾಗಿದೆ. ಇದುವರೆಗೆ ಯಾವುದೇ ಜೀವಹಾನಿ ಹಾಗೂ ಆಸ್ತಿ ನಷ್ಟದ ವರದಿಯಾಗಿಲ್ಲ.
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಲೇ ಭೂಕಂಪನದ ಅನುಭವ ಆಗಿದೆ. ಗುವಾಹಟಿ ಬಳಿಯ ಉದೈಗುರಿ ಎಂಬಲ್ಲಿ ಭೂಕಂಪದ ಕೇಂದ್ರ ಬಿಂದು ಇತ್ತು ಮತ್ತು 5 ಕಿಮೀ ಆಳದಲ್ಲಿತ್ತು ಎಂದು ಭೂವಿಜ್ಞಾನಿಗಳು ತಿಳಿಸಿದ್ದಾರೆ. ಯಾವುದೇ ದೊಡ್ಡ ಅನಾಹುತ ಆಗಿಲ್ಲ. ಪರಿಸ್ಥಿತಿಯ ಬಗ್ಗೆ ನಿಗಾ ಇರಿಸಿದ್ದೇವೆ ಎಂದು ಅಸ್ಸಾಂ ಸಿಎಂ ಹಿಮಾಂತ ಶರ್ಮಾ ತಿಳಿಸಿದ್ದಾರೆ.
ಅಸ್ಸಾಂ ಭೂಕಂಪ ತೀವ್ರತೆಯ ಪ್ರದೇಶವಾಗಿದ್ದು, ಹಿಮಾಲಯದ ತಪ್ಪಲು ಪ್ರದೇಶವಾಗಿರುವ ಕಾರಣ ಭೂಕಂಪದಂತ ಪ್ರಕೃತಿ ವಿಕೋಪಗಳು ಇಲ್ಲಿ ವರದಿಯಾಗುತ್ತಿರುತ್ತವೆ ಎಂದು ತಜ್ಞರು ಹೇಳುತ್ತಾರೆ. ಇದೇ ಸೆ.2ರಂದು ಅಸ್ಸಾಂ ರಾಜ್ಯದ ಸೋನಿತ್ ಪುರ್ ಜಿಲ್ಲೆಯಲ್ಲಿ 3.5 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಪದೇ ಪದೇ ಲಘು ಕಂಪನ ಆಗುತ್ತಿರುವುದು ದೊಡ್ಡ ಘಟನೆಯ ಮುನ್ಸೂಚನೆಯೇ ಎನ್ನುವ ಆತಂಕ ಇದೆ. ಇತ್ತೀಚೆಗಷ್ಟೇ ಅಫ್ಘಾನಿಸ್ತಾನದಲ್ಲಿ ಭಾರೀ ಭೂಕಂಪ ಉಂಟಾಗಿ ಸಾವಿರಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.
A 5.8 magnitude earthquake jolted Assam's Guwahati at 4:41 pm, with tremors felt as far as North Bengal and neighbouring Bhutan. The quake had a depth of 5 kilometers and its epicenter was in the town of Udalguri, according to India's National Center for Seismology. Terrified residents rushed outside their homes in Guwahati. No reports of injury or damage to property have been received so far.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm