ಬ್ರೇಕಿಂಗ್ ನ್ಯೂಸ್
14-09-25 10:49 pm HK News Desk ದೇಶ - ವಿದೇಶ
ಗುವಾಹಟಿ, ಸೆ.14 : ನಾನು ಶಿವನನ್ನು ಆರಾಧಿಸುವ ಭಕ್ತ. ನನ್ನ ಮೇಲೆ ಪ್ರಯೋಗಿಸುವ ನಿಂದನೆಗಳ ವಿಷವನ್ನು ನುಂಗಿ ಜೀರ್ಣಿಸಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅಸ್ಸಾಂನ ದರಂಗ್ನಲ್ಲಿ ಭಾನುವಾರ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ನಾನು ಶಿವಭಕ್ತ, ಎಲ್ಲಾ ವಿಷವನ್ನು ನಾನು ನುಂಗುತ್ತೇನೆ. ನನಗೆ ಎಷ್ಟೇ ನಿಂದನೆ ಮಾಡಿದರೂ ತಡೆದುಕೊಳ್ಳುತ್ತೇನೆ. ಆದರೆ ಬೇರೆಯವರಿಗೆ ಅವಮಾನವಾದರೆ, ಮೌನವಾಗಿರಲು ಸಾಧ್ಯವಿಲ್ಲ ಎಂದು ಆರ್ಜೆಡಿ -ಕಾಂಗ್ರೆಸ್ ಮೈತ್ರಿಕೂಟದ ಆರೋಪಕ್ಕೆ ತಿರುಗೇಟು ನೀಡಿದರು.

ಬಿಹಾರದಲ್ಲಿ ವಿಪಕ್ಷಗಳು ನಿಂದನೆಯ ಮಾತುಗಳಿಂದ ಟೀಕೆ ಮಾಡುತ್ತಿರುವ ಬಗ್ಗೆ ಮೋದಿ ಈ ರೀತಿ ತಿರುಗೇಟು ನೀಡಿದ್ದಾರೆ. ಇಡೀ ಕಾಂಗ್ರೆಸ್ ನನ್ನನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ. ಆದರೆ ಜನರೇ ನನ್ನ ದೇವರು ; ನಾನು ನನ್ನ ನೋವನ್ನು ಅವರ ಮುಂದೆ ವ್ಯಕ್ತಪಡಿಸದಿದ್ದರೆ ಮತ್ತೆಲ್ಲಿ ಮಾಡಲಿ? ಜನರೇ ನನ್ನ ಯಜಮಾನರು, ಅವರೇ ನನ್ನ ರಿಮೋಟ್ ಕಂಟ್ರೋಲ್, ನನ್ನ ನೋವನ್ನು ಅವರಲ್ಲಿ ಹೇಳಿಕೊಳ್ಳದೆ ಬೇರೆ ಯಾರಲ್ಲಿ ಹೇಳಲಿ ಎಂದು ಕೇಳಿದರು.
ಪಾಕಿಸ್ತಾನಿ ಪ್ರೇರಿತ ಭಯೋತ್ಪಾದಕರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದನೆ ನಡೆದಾಗ ಮೌನವಾಗಿರುತ್ತಿತ್ತು. ಆದರೆ ಈಗ ಭಯೋತ್ಪಾದಕರು ಕೆಣಕಿದರೆ ನಮ್ಮ ಭದ್ರತಾ ಪಡೆಗಳು ಆಪರೇಷನ್ ಸಿಂದೂರ್ ನಡೆಸುತ್ತವೆ. ಪಾಕಿಸ್ತಾನದ ಪ್ರತಿಯೊಂದು ಮೂಲೆಯಿಂದಲೂ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕುತ್ತವೆ. ಇಷ್ಟಾದರೂ ಕಾಂಗ್ರೆಸ್ ನಾಯಕರು ಮಾತ್ರ ಪಾಕಿಸ್ತಾನದ ಸೇನೆಯ ಪರವಾಗಿ ನಿಲ್ಲುತ್ತಾರೆ, ಪಾಕಿಸ್ತಾನದ ಸುಳ್ಳುಗಳೇ ಕಾಂಗ್ರೆಸ್ ಅಜೆಂಡಾಗಳಾಗುತ್ತವೆ ಎಂದರು.
Prime Minister Narendra Modi, during a public address in Assam’s Darrang district on Sunday, launched a sharp counterattack on the opposition RJD-Congress alliance, asserting that he has the strength to endure their continuous criticism.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm