ಬ್ರೇಕಿಂಗ್ ನ್ಯೂಸ್
16-09-25 02:46 pm HK News Desk ದೇಶ - ವಿದೇಶ
ಡೆಹ್ರಾಡೂನ್ (ಉತ್ತರಾಖಂಡ), ಸೆ.16 : ಭಾರೀ ಮಳೆಯಿಂದಾಗಿ ಸೋಮವಾರ ರಾತ್ರಿ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹ ಪರಿಸ್ಥಿತಿ ತಲೆದೋರಿದೆ. ತಮ್ಸಾ ನದಿ ಉಕ್ಕಿ ಹರಿಯುತ್ತಿದ್ದು, ಹಲವಾರು ಮನೆಗಳು ಮುಳುಗಿ ಸಹಸ್ತ್ರಧಾರ ಮತ್ತು ಐಟಿ ಪಾರ್ಕ್ ಪ್ರದೇಶದಲ್ಲಿ ಜಲಾವೃತಗೊಂಡಿದೆ. ಈ ಮಧ್ಯೆ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಲ್ಲಿನ ಪ್ರಮುಖ ದೇವಾಲಯಗಳಲ್ಲಿ ಒಂದಾಗಿರುವ ತಪಕೇಶ್ವರ ಮಹಾದೇವ ದೇವಾಲಯ ಜಲಾವೃತಗೊಂಡಿದೆ. ಮೇಘಸ್ಫೋಟ ಮತ್ತು ಭಾರಿ ಪ್ರವಾಹ ಪರಿಸ್ಥಿತಿಯಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಹಾನಿ ಉಂಟಾಗಿದ್ದು, ಆ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ನಿರಂತರ ಮಳೆಯಿಂದ ಹೊಳೆ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತಿದ್ದು ಸೋಮವಾರ ತಡರಾತ್ರಿ ಪ್ರಮುಖ ಸೇತುವೆ ಕುಸಿದು ಅದರ ದಡದಲ್ಲಿರುವ ಆಸ್ತಿ ಪಾಸ್ತಿಗೆ ವ್ಯಾಪಕ ಹಾನಿಯಾಗಿದೆ. ನೀರಿನ ಮಟ್ಟ 10-12 ಅಡಿಗಳಿಗೆ ಏರಿಕೆಯಾಗಿದೆ. ದೇವಾಲಯ ಸಂಪೂರ್ಣ ಜಲಾವೃತಗೊಂಡಿದೆ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

![]()


ಮಂಗಳವಾರ ಬೆಳಗ್ಗೆ 4:45 ರ ಸುಮಾರಿಗೆ, ನೀರು ದೇವಾಲಯ ಪ್ರವೇಶಿಸಿತು. ಕ್ರಮೇಣ ನೀರಿನ ಮಟ್ಟ ಹೆಚ್ಚಾಗಲು ಆರಂಭವಾಗಿ, 10-12 ಅಡಿಗಳಿಗೆ ನೀರಿನ ಮಟ್ಟ ತಲುಪಿತು. ಶಿವಲಿಂಗವನ್ನೂ ನೀರು ತಲುಪಿತು. ಬಳಿಕ ಹಗ್ಗದ ಸಹಾಯದಿಂದ ನಾವು ಮೇಲಕ್ಕೆ ಬಂದೆವು ಎಂದು ತಿಳಿಸಿದ್ದಾರೆ.
ಏತನ್ಮಧ್ಯೆ, ಭಾರೀ ಮಳೆಯು ಋಷಿಕೇಶದ ಮೇಲೂ ಪರಿಣಾಮ ಬೀರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಂದ್ರಭಾಗ ನದಿ ಬೆಳಿಗ್ಗೆಯಿಂದ ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಾಗಿ ಹರಿಯುತ್ತಿದ್ದು, ನೀರು ಹೆದ್ದಾರಿಯನ್ನು ತಲುಪಿದೆ ಎಂದು ತಿಳಿಸಿದ್ದಾರೆ.
ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಮಾಹಿತಿಯ ಪ್ರಕಾರ, ನದಿಯಲ್ಲಿ ಸಿಲುಕಿದ್ದ ಮೂವರನ್ನು ರಕ್ಷಿಸಲಾಗಿದೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರತಿಕ್ರಿಯೆ ನೀಡಿದ್ದು, ಡೆಹ್ರಾಡೂನ್ನ ಸಹಸ್ತ್ರಧಾರದಲ್ಲಿ ಭಾರೀ ಮಳೆಯಿಂದಾಗಿ ಅಂಗಡಿಗಳು ಹಾನಿಗೊಳಗಾಗಿವೆ ಎಂದು ಹೇಳಿದ್ದಾರೆ. ಗೃಹ ಸಚಿವ ಅಮಿತ್ ಷಾ ಮುಖ್ಯಮಂತ್ರಿಯವರ ಜೊತೆ ದೂರವಾಣಿ ಮೂಲಕ ಚರ್ಚೆ ನಡೆಸಿದ್ದು, ಗೃಹ ಸಚಿವಾಲಯದಿಂದ ಸಾಧ್ಯವಿರುವ ಎಲ್ಲ ಸಹಾಯ ಮಾಡುವ ಭರವಸೆ ನೀಡಿದ್ದಾರೆ.
A severe cloudburst struck Dehradun late Monday night, triggering flash floods and widespread waterlogging in several parts of the city. The sudden deluge led to the Tamsa River overflowing, submerging houses and flooding key areas like Sahastradhara and IT Park. According to initial reports, two individuals are reported missing.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm