ಬ್ರೇಕಿಂಗ್ ನ್ಯೂಸ್
22-09-25 10:50 am HK News Desk ದೇಶ - ವಿದೇಶ
ನವದೆಹಲಿ, ಸೆ.22 : ಬಿಹಾರ ಮಾದರಿಯಲ್ಲಿ ಮತಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಯನ್ನು ದೇಶಾದ್ಯಂತ ಜಾರಿಗೆ ತರಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಎಸ್ ಐಆರ್ ಜಾರಿಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳನ್ನು ಸೆ.30ರೊಳಗೆ ಪೂರ್ಣಗೊಳಿಸುವಂತೆ ರಾಜ್ಯಗಳ ಚುನಾವಣಾ ಅಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.
ದೇಶವ್ಯಾಪಿ ಎಸ್ಐಆರ್ ಜಾರಿ ಸಂಬಂಧ ಅಗತ್ಯ ಪೂರ್ವ ಸಿದ್ಧತೆಗಳನ್ನು ಚರ್ಚಿಸಲು ಕೇಂದ್ರ ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳು ಸೆಪ್ಟೆಂಬರ್ ಆರಂಭದಲ್ಲಿ ವಿವಿಧ ರಾಜ್ಯಗಳ ಚುನಾವಣಾ ಅಧಿಕಾರಿಗಳ ಜತೆ ಸಭೆ ನಡೆಸಿದ್ದರು. ಸಭೆಯಲ್ಲಿ ಮುಂದಿನ 10 ರಿಂದ 15 ದಿನಗಳಲ್ಲಿ ಎಸ್ಐಆರ್ ಜಾರಿಗೆ ಸಿದ್ಧರಾಗಿರುವಂತೆ ಮುಖ್ಯ ಚುನಾವಣಾ ಆಯುಕ್ತರು ಸೂಚಿಸಿದ್ದರು ಎಂದು ಮೂಲಗಳು ಹೇಳಿವೆ. ಆದರೆ ಈಗ ಸೆಪ್ಟೆಂಬರ್ 30ರ ಅಂತಿಮ ಗಡುವನ್ನು ನಿಗದಿಪಡಿಸಲಾಗಿದೆ.
ವರ್ಷಾಂತ್ಯಕ್ಕೆ ಬಿಹಾರ ಹಾಗೂ ಮುಂದಿನ ವರ್ಷ ಅಸ್ಸಾಂ, ಕೇರಳ, ಪುದುಚೆರಿ, ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಅಷ್ಟರೊಳಗೆ ಮತದಾರ ಪಟ್ಟಿ ಪರಿಷ್ಕರಣೆ ಕೈಗೊಳ್ಳಲು ಆಯೋಗ ಮುಂದಾಗಿದೆ. ಕೊನೆಯ ಬಾರಿಗೆ ಪರಿಷ್ಕರಣೆ ಮಾಡಲಾಗಿರುವ ಮತದಾರರ ಪಟ್ಟಿಯನ್ನು ಅನೇಕ ರಾಜ್ಯಗಳು ಈಗಾಗಲೇ ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಿವೆ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 2008ರಲ್ಲಿ ಕೊನೆಯ ಬಾರಿಗೆ ಎಸ್ಐಆರ್ ನಡೆದಿತ್ತು.
The Election Commission of India (ECI) is making preparations to implement the Special Summary Revision (SSR) of electoral rolls across the country, following the Bihar model. The Commission has directed Chief Electoral Officers of all states to complete the necessary arrangements for the exercise by September 30.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm