ಬ್ರೇಕಿಂಗ್ ನ್ಯೂಸ್
29-09-25 10:52 pm HK News Desk ದೇಶ - ವಿದೇಶ
ಲಕ್ನೋ, ಸೆ.29 : ಪರಿಶಿಷ್ಟ ಜಾತಿಯ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು 'ಪವಾಡ ಚಿಕಿತ್ಸೆ' ಮೂಲಕ ಆಮಿಷ ಒಡ್ಡುತ್ತಿದ್ದ ಆರೋಪಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಬಕ್ತೌರಿ ಖೇಡಾ ನಿವಾಸಿ ಮಲ್ಖಾನ್ (43) ಬಂಧಿತ ಆರೋಪಿ. ಎಫ್ಐಆರ್ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸ್ ತಂಡ ಪತ್ತೆಹಚ್ಚಿ ಬಂಧಿಸಿದೆ. ಆರೋಪಿ ಮಲ್ಖಾನ್ ತನ್ನ ಕೃಷಿ ಭೂಮಿಯಲ್ಲಿ ಹಾಲ್ ತರಹದ ಕಟ್ಟಡ ನಿರ್ಮಿಸಿಕೊಂಡಿದ್ದು ಅದನ್ನು ತಾತ್ಕಾಲಿಕ ಚರ್ಚ್ ಆಗಿ ಬಳಸುತ್ತಿದ್ದ ಎಂದು ಆರೋಪಿಸಲಾಗಿದೆ.
ಪ್ರತಿ ಭಾನುವಾರ ಮತ್ತು ಗುರುವಾರ, ಅವನು ಪರಿಶಿಷ್ಟ ಜಾತಿಯ ಮಹಿಳೆಯರು ಮತ್ತು ಮಕ್ಕಳನ್ನು ಒಟ್ಟುಗೂಡಿಸಿ, ಅನಾರೋಗ್ಯಕ್ಕೆ ಚಿಕಿತ್ಸೆ ನೀಡುವುದಾಗಿ ಹೇಳಿ ಪ್ರಾರ್ಥನೆಗೆ ಬರುವಂತೆ ಹೇಳುತ್ತಿದ್ದನು. ಈ ಕೂಟಗಳಲ್ಲಿ, ಭಾಗವಹಿಸುವವರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಯತ್ನಿಸುತ್ತಿದ್ದರು. ಪೊಲೀಸರು ಹೇಳುವಂತೆ, ಮಲ್ಖಾನ್ ಕೂಡ ಕ್ರಿಶ್ಚಿಯನ್ ಧರ್ಮವನ್ನು ಅಳವಡಿಸಿಕೊಂಡಿದ್ದು, ತನ್ನ ಮಕ್ಕಳು ಮತ್ತು ಸಂಬಂಧಿಕರ ಹೆಸರನ್ನು ಕ್ರಿಶ್ಚಿಯನ್ ಹೆಸರುಗಳಿಗೆ ಬದಲಾಯಿಸಿದ್ದಾನೆ. ಪರಿಶಿಷ್ಟ ಜಾತಿಯ ಸದಸ್ಯರನ್ನು ಸಂಪರ್ಕಿಸಲು 'ಯೇಸು ಚಂಗೈ ಸಭಾ' ಎಂಬ ವಾಟ್ಸಾಪ್ ಗ್ರೂಪ್ ನಡೆಸುತ್ತಿದ್ದ.
ಬಂಧನದ ವೇಳೆ ಬೈಬಲ್ ಬೋಧನೆಗಳ ಕುರಿತಾದ ಎರಡು ಪುಸ್ತಕಗಳು ಮತ್ತು ಇತರ ಪ್ರಚಾರ ಸಾಮಗ್ರಿಗಳನ್ನು ವಶಪಡಿಸಲಾಗಿದೆ. ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ 2021ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮತಾಂತರ ಜಾಲದ ಮಾಸ್ಟರ್ ಮೈಂಡ್ ಎನ್ನಲಾದ ಆರೋಪಿಯನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ಇಲಾಖೆಯಿಂದ 25,000 ರೂ. ನಗದು ಬಹುಮಾನ ನೀಡಲಾಗಿದೆ.
Uttar Pradesh police have arrested a man accused of luring Dalit communities into Christianity by promising “miracle cures.” The accused, identified as 43-year-old Malkhan of Baktauri Kheda, allegedly converted his farmland shed into a makeshift church where he gathered women and children for prayer sessions twice a week. During these meetings, he reportedly attempted to persuade attendees to convert. Police recovered religious texts and promotional material during the arrest.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm