ಬ್ರೇಕಿಂಗ್ ನ್ಯೂಸ್
03-10-25 09:09 pm HK News Desk ದೇಶ - ವಿದೇಶ
ನವದೆಹಲಿ, ಅ.3 : ಪಾಕಿಸ್ತಾನ ಭೂಪಟದಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಬಯಸಿದರೆ ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಭೌಗೋಳಿಕ ನಕ್ಷೆಯಲ್ಲಿ ಇಲ್ಲದಂತೆ ಪಾಕಿಸ್ತಾನವನ್ನು ಅಳಿಸಿ ಹಾಕುತ್ತೇವೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಎಚ್ಚರಿಕೆ ನೀಡಿದ್ದಾರೆ.
ರಾಜಸ್ಥಾನದ ಅನುಪ್ಗಢದಲ್ಲಿರುವ ಸೇನಾ ಪೋಸ್ಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, 'ಭಯೋತ್ಪಾದನೆ ಬೆಂಬಲಿಸುವುದನ್ನು ಮೊದಲು ನಿಲ್ಲಿಸಿ.. ಇಲ್ಲವಾದಲ್ಲಿ ನಿಮ್ಮ ಭೌಗೋಳಿಕ ನಕ್ಷೆಯನ್ನು ಕಳೆದುಕೊಳ್ಳುತ್ತೀರಿ. ಪಾಕಿಸ್ತಾನವು ನಕ್ಷೆಯಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಬಯಸಿದರೆ, ಅದು ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಪಾಕಿಸ್ತಾನವನ್ನು ಭೂಪಟದಿಂದಲೇ ಅಳಿಸಿ ಬಿಡುತ್ತೇವೆ ಎಂದು ಹೇಳಿದರು.
ಪಾಕಿಸ್ತಾನ ಸರ್ಕಾರ ಮತ್ತು ಸೇನೆಯು ತನ್ನ ನಿಲುವನ್ನು ಬದಲಿಸಿಕೊಳ್ಳಬೇಕು. ಹದ್ದು ಮೀರಿ ವರ್ತಿಸಿದರೆ ಈ ಬಾರಿ ಭಾರತೀಯ ಪಡೆಗಳು ಯಾವುದೇ ಸಂಯಮ ತೋರಿಸುವುದಿಲ್ಲ. ಭಯೋತ್ಪಾದನೆಯನ್ನು ನೆರೆ ರಾಷ್ಟ್ರಕ್ಕೆ ರಫ್ತು ಮಾಡುವುದನ್ನು ನಿಲ್ಲಿಸದಿದ್ದರೆ 'ಆಪರೇಷನ್ ಸಿಂಧೂರ್' ಎರಡನೇ ಆವೃತ್ತಿ ಹೆಚ್ಚು ದೂರವಿಲ್ಲ ಎಂದು ದ್ವಿವೇದಿ ಎಚ್ಚರಿಸಿದರು.
ಮುಂದಿನ ಬಾರಿ ನಾವು ಆಪರೇಷನ್ ಸಿಂಧೂರ್ ನಲ್ಲಿ ಹೊಂದಿದ್ದ ಸಂಯಮವನ್ನು ಕಾಯ್ದುಕೊಳ್ಳಲ್ಲ. ಪಾಕಿಸ್ತಾನ ಭೌಗೋಳಿಕವಾಗಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಬಯಸುತ್ತೋ ಇಲ್ಲವೋ ಎಂದು ಯೋಚಿಸುವಂತೆ ಮಾಡುತ್ತೇವೆ ಎಂದು ಹೇಳುವ ಮೂಲಕ ದ್ವಿವೇದಿ ಸೈನಿಕರಿಗೆ ಯಾವುದೇ ಪರಿಸ್ಥಿತಿಗೂ ಸಿದ್ಧರಾಗಿರುವಂತೆ ಸೂಚಿಸಿದರು.
ಪಾಕಿಸ್ತಾನದ 6 ಯುದ್ದ ವಿಮಾನಗಳು ಪತನ
ಇದೇ ವೇಳೆ ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಪಡೆಗಳು ಅಮೆರಿಕ ನಿರ್ಮಿತ ಎಫ್ -16 ಮತ್ತು ಚೀನಾದ ಜೆಎಫ್ -17 ಸೇರಿದಂತೆ ನಾಲ್ಕರಿಂದ ಆರು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ. ಈ ಪೈಕಿ ಐದು ಫೈಟರ್ ಜೆಟ್ಗಳು ಮತ್ತು ಒಂದು 'ದೊಡ್ಡ ಹಕ್ಕಿ'ಯನ್ನು ಹೊಡೆಯಲಾಗಿದೆ ಎಂದು ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಹೇಳಿದ್ದರು.
In a fiery warning from Rajasthan’s Anupgarh, Army Chief General Upendra Dwivedi cautioned Pakistan to halt state-sponsored terrorism or risk being erased from the world map. He stressed that India would show no restraint if provoked again, hinting at a second “Operation Sindhoor.” Earlier this year, Indian forces shot down up to six Pakistani fighter jets, including U.S.-made F-16s and China’s JF-17s.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm