ಬ್ರೇಕಿಂಗ್ ನ್ಯೂಸ್
04-10-25 04:45 pm HK Staffer ದೇಶ - ವಿದೇಶ
ನವದೆಹಲಿ, ಅ.4: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಸುಮಾರು 11 ಮಕ್ಕಳು ಸಾವನಪ್ಪಿದ ಘಟನೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಆದೇಶ ಹೊರಡಿಸಿದೆ.
ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ 9 ಮಕ್ಕಳು ಮತ್ತು ರಾಜಸ್ಥಾನದ ಭರತ್ ಹಾಗೂ ಸಿಕರ್ ಜಿಲ್ಲೆಯಲ್ಲಿ 2 ಮಕ್ಕಳು ಸೇರಿ ಒಟ್ಟು 11 ಕಂದಮ್ಮಗಳು ಸಾವನ್ನಪ್ಪಿದ್ದಾರೆ. ಈ ಘಟನೆಗಳ ಬೆನ್ನಲ್ಲೇ ರಾಜಸ್ಥಾನ ಸರ್ಕಾರವು ಕೇಸನ್ಸ್ ಫಾರ್ಮಾ ಕಂಪನಿಯ 19 ಔಷಧಿಗಳ ಮಾರಾಟ ಮತ್ತು ವಿತರಣೆಯನ್ನು ಸ್ಥಗಿತಗೊಳಿಸಿದೆ. ಅಲ್ಲದೆ, ರಾಜಸ್ಥಾನದ ಔಷಧ ನಿಯಂತ್ರಕರಾದ ರಾಜಾರಾಮ್ ಶರ್ಮಾ ಅವರನ್ನು ಅಮಾನತುಗೊಳಿಸಿದೆ.
ಕೋಲ್ಡ್ರಿಫ್ ಮತ್ತು ನೆಕ್ಸ್ಟ್ರೋ-ಡಿಎಸ್ ಎಂಬ ಎರಡು ಕೆಮ್ಮಿನ ಸಿರಪ್ಗಳು ಮಕ್ಕಳ ಸಾವಿಗೆ ಕಾರಣವಾಗಿವೆ ಎಂದು ಆರೋಪಿಸಲಾಗಿದೆ. ಈ ಸಿರಪ್ಗಳನ್ನು ಸೇವಿಸಿದ ಮಕ್ಕಳಿಗೆ ಮೂತ್ರ ವಿಸರ್ಜನೆ ನಿಂತು, ದೇಹದಲ್ಲಿ ಊತ ಕಾಣಿಸಿಕೊಂಡು, ಕಿಡ್ನಿ ವೈಫಲ್ಯಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಸಿರಪ್ ನೀಡದಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತಕ್ಕೆ ಸಾಮಾನ್ಯವಾಗಿ ಸಿರಪ್ಗಳ ಅಗತ್ಯ ಇರುವುದಿಲ್ಲ. ತೀರಾ ಅಗತ್ಯವಿದ್ದರೆ ಮಾತ್ರ ವೈದ್ಯರ ಸಲಹೆಯಂತೆ ಸೂಕ್ತ ಪ್ರಮಾಣದಲ್ಲಿ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.
The Madhya Pradesh government on Saturday (October 4, 2025) banned the sale of Coldrif syrup following the death of nine children due to suspected kidney infection in Chhindwara district since September 7.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm