ಬ್ರೇಕಿಂಗ್ ನ್ಯೂಸ್
27-12-20 10:08 pm Headline Karnataka News Network ದೇಶ - ವಿದೇಶ
ಲಕ್ನೋ, ಡಿ.27: ಕೆಲವರಿಗೆ ವಾಹನಗಳಲ್ಲಿ ತಮ್ಮ ಹೆಸರು, ತಾಯಿ ಆಶೀರ್ವಾದ, ತಮ್ಮ ಜಾತಿಯ ಹೆಸರು, ಗೆಳೆಯ- ಗೆಳತಿಯರ ಹೆಸರು ಹೀಗೆ ಏನೇನೊ ಬರೆದುಕೊಳ್ಳುವುದು ಹವ್ಯಾಸ. ಸ್ಟಿಕ್ಕರ್ ಇಲ್ಲವೇ ನಂಬರ್ ಪ್ಲೇಟಲ್ಲೇ ತಮ್ಮ ಜಾತಕ ಬರೆದುಕೊಳ್ಳುವ ಮಂದಿಯೂ ಇದ್ದಾರೆ. ಆದರೆ, ಹೀಗೆ ಏನೆಲ್ಲಾ ಬರೆದುಕೊಳ್ಳುವ ಮಂದಿಗೆ ಅಂತಲೇ ಉತ್ತರ ಪ್ರದೇಶ ಸರಕಾರ ಹೊಸತೊಂದು ಕಾನೂನು ಜಾರಿ ಮಾಡಿದೆ.
ನೀವು ಏನೇ ಬರೆದುಕೊಳ್ಳಿ. ವಾಹನಗಳ ಮೇಲೆ ನಿಮ್ಮ ಜಾತಿಯನ್ನು ಸೂಚಿಸುವ ಪದಗಳನ್ನು ಅಥವಾ ಜಾತಿ ಹೆಸರನ್ನು ಬರೆದುಕೊಂಡಲ್ಲಿ ನಿಮ್ಮ ವಾಹನಗಳನ್ನೇ ಸೀಜ್ ಮಾಡಲಾಗುವುದು ಎಂದು ಯೋಗಿ ಸರಕಾರ ಆದೇಶ ಮಾಡಿದೆ. ಈಗಾಗ್ಲೇ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೊಳಿಸಿ ಸುದ್ದಿಯಾಗಿರುವ ಉತ್ತರ ಪ್ರದೇಶ ಸರಕಾರ ಈಗ ವಾಹನದಲ್ಲಿ ಜಾತಿ ಬಳಸುವುದನ್ನು ನಿಷೇಧಿಸಿ ಆದೇಶ ಜಾರಿ ಮಾಡಿದೆ.

ಪ್ರಧಾನಿ ಕಚೇರಿಯಿಂದ ಬಂದ ಸೂಚನೆ ಮೇರೆಗೆ ಉತ್ತರ ಪ್ರದೇಶದ ಸರಕಾರ ಸಾರಿಗೆ ಇಲಾಖೆ ಮೂಲಕ ಈ ಕ್ರಮ ಕೈಗೊಂಡಿದೆ. ಸಾರಿಗೆ ಅಧಿಕಾರಿಗಳು ವಾಹನ ತಪಾಸಣೆ ಮಾಡುವ ವೇಳೆ ಜಾತಿ ಹೆಸರು ಕಂಡುಬಂದರೆ ಅಂಥ ವಾಹನಗಳನ್ನು ಮುಲಾಜಿಲ್ಲದೆ ಜಪ್ತಿ ಮಾಡಲು ಸಾರಿಗೆ ಇಲಾಖೆ ಆದೇಶ ಮಾಡಿದೆ.
ಇಂಥ ಸೂಚನೆ ಏಕಾಗಿ ?
ಉತ್ತರ ಪ್ರದೇಶದಲ್ಲಿ ಜಾಟ್, ಯಾದವ್, ಗುಜ್ಜಾರ್, ಬ್ರಾಹ್ಮಣ, ಪಂಡಿತ್, ಖತ್ರಿ, ಮೌರ್ಯ ಹೀಗೆ ತಮ್ಮ ತಮ್ಮ ಜಾತಿಗಳ ಹೆಸರುಗಳನ್ನು ವಾಹನಗಳಲ್ಲಿ ನಮೂದಿಸಿಕೊಂಡು ಸಾಮಾನ್ಯವಾಗಿದೆ. ಹೆಚ್ಚಿನ ಮಂದಿ ತಮ್ಮ ಜಾತಿಗಳನ್ನೇ ಪ್ರತಿಷ್ಠೆಯಾಗಿ ತೋರಿಸಲು ಹೆಸರಿನ ಜೊತೆಗೆ ಅಥವಾ ಖಾಲಿ ಜಾತಿ ಸೂಚಕ ಪದಗಳನ್ನೇ ವಾಹನಗಳಲ್ಲಿ ಬರೆದುಕೊಳ್ಳುತ್ತಾರೆ. ಉತ್ತರ ಪ್ರದೇಶದಲ್ಲಿ ಇದು ಸಾಮಾನ್ಯವಾಗಿದ್ದು, ಪ್ರತೀ 20 ವಾಹನಗಳಲ್ಲಿ ಒಂದರಲ್ಲಿ ಹೀಗೆ ಹೆಸರು ಬರೆದಿದ್ದು ಕಾಣಸಿಗುತ್ತದೆ.
ನಂಬರ್ ಪ್ಲೇಟ್, ವಾಹನದ ಗ್ಲಾಸ್ ಗಳಲ್ಲಿ ಹೀಗೆ ಹೆಸರು ಬರೆಯುವುದನ್ನು, ಸ್ಟಿಕ್ಕರ್ ಅಂಟಿಸುವುದನ್ನು ನಿಷೇಧಿಸಬೇಕು. ಇದರಿಂದ ಸಮಾಜದ ಸಾಮರಸ್ಯಕ್ಕೆ ಅಪಾಯ ಎಂದು ಶಿಕ್ಷಕ ಹರ್ಷಲ್ ಪ್ರಭು ಎಂಬವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಅದರಂತೆ, ಪ್ರಧಾನಿ ಕಚೇರಿಯಿಂದ ಉತ್ತರ ಪ್ರದೇಶ ಸರಕಾರಕ್ಕೆ ಸೂಚನೆ ಬಂದಿತ್ತು.
The fad of many people taking pride in ‘boldly’ displaying their caste identities on windscreens or number plates of their vehicles is gaining ground rapidly in Uttar Pradesh, the state where caste has always been pivotal to electoral politics.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm