ಬ್ರೇಕಿಂಗ್ ನ್ಯೂಸ್
07-10-25 11:16 pm HK News Desk ದೇಶ - ವಿದೇಶ
ಕಾಸರಗೋಡು, ಅ.7 : ಮಂಜೇಶ್ವರ ಠಾಣೆ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಕಳೆನಾಶಕಕ್ಕೆ ಬಳಸುವ ವಿಷ ಸೇವಿಸಿ ದಂಪತಿ ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಡಂಬಾರು ನಿವಾಸಿಗಳಾದ ಅಜಿತ್ (35) ಮತ್ತು ಅವರ ಪತ್ನಿ ಶ್ವೇತಾ (27) ಮೃತರು. ಅಜಿತ್ ಪೈಂಟ್ ವೃತ್ತಿಯವರಾಗಿದ್ದು, ಶ್ವೇತಾ ವರ್ಕಾಡಿ ಬೇಕರಿ ಜಂಕ್ಷನ್ನಲ್ಲಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಸೋಮವಾರ ಸಂಜೆ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಉಪ್ಪಳ ಆಸ್ಪತ್ರೆಗೆ ಒಯ್ದು ಬಳಿಕ ದೇರಳಕಟ್ಟೆಯ ಕೆಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಜಿತ್ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಮೃತಪಟ್ಟಿದ್ದರೆ, ಶ್ವೇತಾ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಇವರಿಗೆ ಮೂರು ವರ್ಷದ ಮಗು ಹೊಂದಿದ್ದು ಸೋಮವಾರ ಬೆಳಗ್ಗೆ ಅಜಿತ್ ಮಗುವನ್ನು ಪತ್ನಿಯ ಸಹೋದರಿಯ ಮನೆಗೆ ತೆರಳಿ, “ನಾವು ಹೊರಗೆ ಹೋಗುತ್ತಿದ್ದೇವೆ, ಮಗುವನ್ನು ನೋಡಿಕೊಳ್ಳಿ” ಎಂದು ಹೇಳಿ ಮರಳಿದ್ದರು. ಬಳಿಕ ಪತ್ನಿಯೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ವೇಳೆಗೆ ಮನೆ ವರಾಂಡಾದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದ ಇಬ್ಬರನ್ನು ನೆರೆಮನೆಯವರು ಆಸ್ಪತ್ರೆಗೆ ದಾಖಲಿಸಿದ್ದರು. ಮಂಜೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಸ್ಥಳೀಯರ ಮಾಹಿತಿ ಪ್ರಕಾರ, ದಂಪತಿ ಬೇರೊಬ್ಬ ಮಹಿಳೆಯ ಚಿನ್ನವನ್ನು ಪಡೆದು ಅಡವಿಟ್ಟಿದ್ದರಂತೆ. ಅದನ್ಜು ಮರಳಿಸದೇ ಇದ್ದುದರಿಂದ ಚಿನ್ನವನ್ನು ಮರಳಿಸುವಂತೆ ಒತ್ತಡ ಹೇರಿದ್ದರು. ಮನೆಗೆ ಬಂದು ಕೇಳಿದ್ದರಿಂದ ಮರ್ಯಾದೆಗಂಜಿ ದಂಪತಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
A heartbreaking incident was reported from Kadambar in Manjeshwar, Kasaragod district, where a couple ended their lives by consuming pesticide at their home. The deceased have been identified as Ajith (35), a painter by profession, and his wife Shwetha (27), a teacher at a private school in Varkadi Bakery Junction.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 05:28 pm
HK News Desk
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm