ಬ್ರೇಕಿಂಗ್ ನ್ಯೂಸ್
08-10-25 08:40 pm HK News Desk ದೇಶ - ವಿದೇಶ
ಮುಂಬೈ, ಅ.8: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊನೆಗೂ ತಮ್ಮ ಹೆಸರಲ್ಲಿ ಹರಿದಾಡುತ್ತಿರುವ ಡೀಪ್ಫೇಕ್ ವಿಡಿಯೋಗಳ ಬಗ್ಗೆ ಹೇಳಿಕೆ ನೀಡಿದ್ದು ತನ್ನ ಹೆಸರಲ್ಲಿರುವ ಹಲವಾರು ಡೀಪ್ ಫೇಕ್ ವಿಡಿಯೋಗಳನ್ನು ನೋಡಿದ್ದು ಜನರ ನಂಬಿಕೆ ಉಳಿಸಿಕೊಳ್ಳಲು ದೇಶದಲ್ಲಿ ಸೈಬರ್ ಭದ್ರತೆ ಬಲಪಡಿಸುವಂತೆ ಕರೆ ನೀಡಿದ್ದಾರೆ.
ಮುಂಬೈನಲ್ಲಿ ನಡೆದ ವಾರ್ಷಿಕ ಗ್ಲೋಬಲ್ ಫಿನ್ಟೆಕ್ ಫೆಸ್ಟ್ನಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಕೃತಕ ಬುದ್ಧಿಮತ್ತೆಯು ನಮ್ಮ ನಡುವಿನ ಹಣಕಾಸು, ಆಡಳಿತ ಮತ್ತು ದೈನಂದಿನ ಜೀವನವನ್ನು ಪರಿವರ್ತಿಸುತ್ತಿದೆ ಎಂದು ಹೇಳಿದರು.
ಹೊಸತನ, ತಂತ್ರಜ್ಞಾನಕ್ಕೆ ಶಕ್ತಿ ತುಂಬುವ ಅದೇ ಸಾಧನಗಳನ್ನು ವಂಚನೆಯ ಅಸ್ತ್ರವಾಗಿ ಬಳಸಿಕೊಳ್ಳಬಹುದು. ನಾನು ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಿಲ್ಲ. ಆದರೆ ನನ್ನ ಹಲವಾರು ಡೀಪ್ಫೇಕ್ ವಿಡಿಯೋಗಳನ್ನು ಆನ್ಲೈನ್ನಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಮೂಲಕ ನಾಗರಿಕರನ್ನು ದಾರಿ ತಪ್ಪಿಸಲು ಮತ್ತು ಸತ್ಯಗಳನ್ನು ವಿರೂಪಗೊಳಿಸಿ ಸುಳ್ಳನ್ನು ಸತ್ಯವೆಂದು ಹೇಳಲು ಬಳಸುವುದನ್ನು ನೋಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಈ ರೀತಿ ಮಾಡುವವರ ವಿರುದ್ಧ ನಾವು ನಮ್ಮ ರಕ್ಷಣೆಯನ್ನು ಹೆಚ್ಚಿಸಿಕೊಳ್ಳಬೇಕಾದ ತುರ್ತು ಅಗತ್ಯ ಇದೆ. ಹೊಸ ಪೀಳಿಗೆಯ ವಂಚನೆಯು ಫೈರ್ವಾಲ್ಗಳನ್ನು ಉಲ್ಲಂಘಿಸುವ ಬಗ್ಗೆ ಅಲ್ಲ. ಇದು ನಂಬಿಕೆಯ ಪ್ರಶ್ನೆ. ಫಿನ್ಟೆಕ್ ಬಳಕೆದಾರರು, ಹೂಡಿಕೆದಾರರು ಮತ್ತು ನಿಯಂತ್ರಕರು ಸೇರಿದಂತೆ ಇಡೀ ಪರಿಸರ ವ್ಯವಸ್ಥೆಯು ಈ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದವರು ಹೇಳಿದರು.
Union Finance Minister Nirmala Sitharaman has raised concerns over multiple deepfake videos circulating online in her name, saying they are being used to mislead the public and distort facts. Speaking at the Global FinTech Fest in Mumbai, she emphasized the urgent need to strengthen cybersecurity and public awareness to safeguard digital trust.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm