ಬ್ರೇಕಿಂಗ್ ನ್ಯೂಸ್
13-10-25 05:31 pm HK News Desk ದೇಶ - ವಿದೇಶ
ತಿರುವನಂತಪುರಂ, ಅ.13 : ವೃತ್ತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ 26 ವರ್ಷದ ಯುವಕನೊಬ್ಬ ಕೇರಳ ರಾಜಧಾನಿ ತಿರುವನಂತಪುರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಇನ್ ಸ್ಟಾ ಗ್ರಾಮ್ ಪೋಸ್ಟ್ ನಲ್ಲಿ ತನ್ನ ಸಾವಿಗೆ ಆರೆಸ್ಸೆಸ್ ಸದಸ್ಯರ ಲೈಂಗಿಕ ದೌರ್ಜನ್ಯ ಕಾರಣ ಎಂದು ಆರೋಪ ಮಾಡಿ ಸಂಚಲನ ಮೂಡಿಸಿದ್ದಾನೆ.
ಕೊಟ್ಟಾಯಂ ಜಿಲ್ಲೆಯ ತಂಪಲಕಾಡ್ ನಿವಾಸಿ ಆನಂದ್ ಸಾವಿಗೆ ಶರಣಾದ ಯುವಕನಾಗಿದ್ದು, ಡೆತ್ ನೋಟ್ ನಲ್ಲಿ ಹೇಳಿರುವ ಪ್ರಕಾರ ಬಾಲ್ಯದಿಂದಲೇ ಆರೆಸ್ಸೆಸ್ ಕಾರ್ಯಕರ್ತನಾಗಿದ್ದೆ. ಸಣ್ಣದಿರುವಾಗಲೇ ತಾನು ನಂಬಿದ ವ್ಯಕ್ತಿಗಳೇ ಲೈಂಗಿಕ ದೌರ್ಜನ್ಯ ಎಸಗಿದರು. ಅದರಿಂದಾಗಿ ತೀವ್ರ ಮಾನಸಿಕ ಕಿರುಕುಳ ಅನುಭವಿಸಿದ್ದೇನೆ ಎಂದಿದ್ದಾನೆ. ತಿರುವನಂತಪುರದಲ್ಲಿ ಉದ್ಯೋಗ ಮಾಡುತ್ತಿದ್ದ ಆನಂದ್, ಅಲ್ಲಿಯೇ ಲಾಡ್ಜ್ ಒಂದರಲ್ಲಿ ಎರಡು ದಿನಗಳ ಹಿಂದೆ ಸಾವಿಗೆ ಶರಣಾಗಿದ್ದಾನೆ.


ನಾನು ಸಾವಿಗೆ ಶರಣಾಗುತ್ತಿರುವುದು ಲವ್ ಅಫೇರ್, ಹುಡುಗಿಯ ಕಾರಣಕ್ಕೆ ಅಥವಾ ಯಾವುದೇ ಸಾಲದ ಕಾರಣಕ್ಕೆ ಅಲ್ಲ. ತೀವ್ರ ಖಿನ್ನತೆ ಮತ್ತು ಮಾನಸಿಕ ಕಿರುಕುಳದಿಂದಾಗಿ ಈ ನಿರ್ಧಾರಕ್ಕೆ ಬಂದಿದ್ದೇನೆ. ವೈದ್ಯರು ಕೊಟ್ಟಿರುವ ಔಷಧಿಗಳನ್ನು ಸೇವಿಸುತ್ತ ನನ್ನ ಕೆಲಸ ಮಾಡುವುದಕ್ಕೆ ಆಗುತ್ತಿಲ್ಲ. ಹಾಗಾಗಿ ಸಾವಿಗೆ ಶರಣಾಗುತ್ತಿದ್ದೇನೆ ಎಂದು 15 ಪುಟಗಳಷ್ಟು ಉದ್ದಕ್ಕೆ ದೀರ್ಘ ಪತ್ರ ಬರೆದು ಇನ್ ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾನೆ.
ತಂದೆಯ ಸಲಹೆಯಂತೆ ಸಣ್ಣ ವಯಸ್ಸಿನಲ್ಲೇ ಆರೆಸ್ಸೆಸ್ ಸೇರ್ಪಡೆಯಾಗಿದ್ದೆ. ಆದರೆ ನಾನು ಸೋದರನೆಂದುಕೊಂಡಿದ್ದ ವ್ಯಕ್ತಿಯೊಬ್ಬರು ನನಗೆ ತೀವ್ರ ಕಿರುಕುಳ ನೀಡಿದ್ದಾರೆ. ಅದೇ ರೀತಿ ಹಲವಾರು ಆರೆಸ್ಸೆಸ್ ಕಾರ್ಯಕರ್ತರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದಿರುವ ಆನಂದ್, ಎನ್.ಎಂ. ಎಂದು ನಮೂದಿಸಿರುವ ವ್ಯಕ್ತಿ ಆರೆಸ್ಸೆಸ್ ಮತ್ತು ಬಿಜೆಪಿಯಲ್ಲಿ ಸಕ್ರಿಯನಾಗಿದ್ದು ಅತಿ ಹೆಚ್ಚು ಬಾರಿ ಕಿರುಕುಳ ನೀಡಿದ್ದಾನೆಂದು ತಿಳಿಸಿದ್ದಾನೆ. ನನ್ನನ್ನು ಸೆಕ್ಸ್ ಟೂಲ್ ನಂತೆ ಮಾಡಿಕೊಂಡಿದ್ದ. ಮಾನಸಿಕ ನೋವಿನಿಂದಾಗಿ ವೈದ್ಯರಿಗೆ ತೋರಿಸಿದಾಗ ಅಬ್ಸೆಸ್ಸಿವ್ ಕಂಪಲ್ಸಿವ್ ಡಿಸಾರ್ಡರ್ ಎಂದು ತಿಳಿಸಿದರು. ಆತನಿಂದಾಗಿಯೇ ಈ ರೀತಿಯ ಕಾಯಿಲೆ ನನಗೆ ಆವರಿಸಿತ್ತು. ಕುಟುಂಬದಲ್ಲಿ ಸಂಬಂಧಿಕ ಮತ್ತು ಸೋದರನಾಗಿದ್ದ ಆ ವ್ಯಕ್ತಿ ನನಗೆ ತೀವ್ರ ಕಿರುಕುಳ ನೀಡಿದ್ದಾನೆ.
ಆರೆಸ್ಸೆಸ್ ಶಿಬಿರಗಳಲ್ಲಿಯೂ ಕೆಲವರು ನನಗೆ ಕಿರುಕುಳ ನೀಡಿದ್ದಾರೆ. ಅವರ ಹೆಸರು ಈಗ ನೆನಪಿಗೆ ಬರುತ್ತಿಲ್ಲ. ಕೆಲವರಿಂದ ದೈಹಿಕವಾಗಿಯೂ ಹಲ್ಲೆಗೀಡಾಗಿದ್ದೇನೆ ಎಂದು ಆನಂದು ಡೆತ್ ನೋಟ್ ನಲ್ಲಿ ಬರೆದಿದ್ದಾನೆ. ಘಟನೆ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಡಿವೈಎಫ್ಐ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಆಗ್ರಹಿಸಿದೆ.
In a suspected case of suicide, a 26-year-old software engineer, Anandu Aji, was found dead in a lodge room in Thampanoor, Thiruvananthapuram on Thursday. Anandu, a native of Thampalakad in Kottayam district, was reportedly suffering severe mental distress following repeated sexual abuse by members of the Rashtriya Swayamsevak Sangh (RSS).
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm