ಬ್ರೇಕಿಂಗ್ ನ್ಯೂಸ್
17-10-25 05:25 pm HK News Desk ದೇಶ - ವಿದೇಶ
ಅಹ್ಮದಾಬಾದ್, ಅ.17 : ಗುಜರಾತ್ ಬಿಜೆಪಿ ಸರ್ಕಾರದಲ್ಲಿ ಎಲ್ಲ 16 ಸಚಿವರ ರಾಜಿನಾಮೆ ಪಡೆದು ಸಂಪುಟ ಪುನಾರಚನೆ ಮಾಡಲಾಗಿದೆ. ಗೃಹ ಸಚಿವರಾಗಿದ್ದ ಹರ್ಷ ಸಾಂಘ್ವಿ ಅವರನ್ನು ನೂತನ ಉಪ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಂಪುಟ ಸಚಿವರ ಸಂಖ್ಯೆಯನ್ನು 25ಕ್ಕೆ ವಿಸ್ತರಿಸಲಾಗಿದೆ.
ಹೊಸ ಸಂಪುಟದಲ್ಲಿ ಆರು ಮಾಜಿ ಸಚಿವರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ಬಿಜೆಪಿ ಶಾಸಕಿ ರಿವಾಬಾ ಜಡೇಜಾ ಸೇರಿದಂತೆ 19 ಹೊಸಬರಿಗೆ ಸಚಿವ ಸ್ಥಾನ ಸಿಕ್ಕಿದೆ. ಹರ್ಷ ಸಾಂಘ್ವಿ, ಕುನ್ವರ್ಜಿ ಬವಲಿಯಾ, ಪ್ರಫುಲ್ ಪನ್ಸೇರಿಯಾ, ರಿಷಿಕೇಶ್ ಪಟೇಲ್, ಪರಶೋತ್ತಮ್ ಸೋಲಂಕಿ, ಕನುಭಾಯಿ ದೇಸಾಯಿ ತಮ್ಮ ಸಚಿವ ಸ್ಥಾನ ಉಳಿಸಿಕೊಂಡಿದ್ದಾರೆ.
ಹೊಸ ಸಂಪುಟದಲ್ಲಿ ಜಾತಿ ಲೆಕ್ಕಾಚಾರದಲ್ಲಿ ಒಬಿಸಿ ಸಮುದಾಯದ ಎಂಟು ಸಚಿವರು, ಪಾಟಿದಾರ್ ಸಮುದಾಯದ ಆರು ಮಂದಿ, ಬುಡಕಟ್ಟು ಸಮುದಾಯಗಳಿಂದ ನಾಲ್ಕು ಮಂದಿ, ಪರಿಶಿಷ್ಟ ಜಾತಿಗಳಿಂದ ಮೂವರು, ಕ್ಷತ್ರಿಯ ಸಮುದಾಯದ ಇಬ್ಬರು, ಬ್ರಾಹ್ಮಣ ಮತ್ತು ಜೈನ (ಲಘುಮತಿ) ಸಮುದಾಯಗಳಿಂದ ತಲಾ ಒಬ್ಬರು ಸಚಿವರಾಗಿ ಸ್ಥಾನ ಪಡೆದಿದ್ದಾರೆ.
ಭೂಪೇಂದ್ರ ಪಟೇಲ್ ಸಂಪುಟದ ಎಲ್ಲ 16 ಸಚಿವರು ನಿನ್ನೆ ರಾಜೀನಾಮೆ ನೀಡಿದ್ದರು. ಗುಜರಾತ್ ವಿಧಾನಸಭೆ 182 ಸದಸ್ಯರ ಬಲವನ್ನು ಹೊಂದಿದ್ದು, ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಗರಿಷ್ಠ 27 ಸಚಿವರಿಗೆ ಅವಕಾಶ ನೀಡುತ್ತದೆ. ಭೂಪೇಂದ್ರ ಪಟೇಲ್ ನೇತೃತ್ವದ ಸರ್ಕಾರವು 2022ರಲ್ಲಿ ಅಸ್ತಿತ್ವಕ್ಕೆ ಬಂದಿತ್ತು. ಇದೀಗ ಎರಡೂವರೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಾತಿ ಲೆಕ್ಕಾಚಾರ ಅನುಸರಿಸಿ ಹೊಸಬರಿಗೆ ಅವಕಾಶ ನೀಡಲಾಗಿದೆ.
In a major political overhaul, the Gujarat BJP government has restructured its Cabinet, with Chief Minister Bhupendra Patel expanding his team to 25 ministers after the resignation of all 16 previous members.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm