ಬ್ರೇಕಿಂಗ್ ನ್ಯೂಸ್
17-10-25 05:25 pm HK News Desk ದೇಶ - ವಿದೇಶ
ಅಹ್ಮದಾಬಾದ್, ಅ.17 : ಗುಜರಾತ್ ಬಿಜೆಪಿ ಸರ್ಕಾರದಲ್ಲಿ ಎಲ್ಲ 16 ಸಚಿವರ ರಾಜಿನಾಮೆ ಪಡೆದು ಸಂಪುಟ ಪುನಾರಚನೆ ಮಾಡಲಾಗಿದೆ. ಗೃಹ ಸಚಿವರಾಗಿದ್ದ ಹರ್ಷ ಸಾಂಘ್ವಿ ಅವರನ್ನು ನೂತನ ಉಪ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಂಪುಟ ಸಚಿವರ ಸಂಖ್ಯೆಯನ್ನು 25ಕ್ಕೆ ವಿಸ್ತರಿಸಲಾಗಿದೆ.
ಹೊಸ ಸಂಪುಟದಲ್ಲಿ ಆರು ಮಾಜಿ ಸಚಿವರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ಬಿಜೆಪಿ ಶಾಸಕಿ ರಿವಾಬಾ ಜಡೇಜಾ ಸೇರಿದಂತೆ 19 ಹೊಸಬರಿಗೆ ಸಚಿವ ಸ್ಥಾನ ಸಿಕ್ಕಿದೆ. ಹರ್ಷ ಸಾಂಘ್ವಿ, ಕುನ್ವರ್ಜಿ ಬವಲಿಯಾ, ಪ್ರಫುಲ್ ಪನ್ಸೇರಿಯಾ, ರಿಷಿಕೇಶ್ ಪಟೇಲ್, ಪರಶೋತ್ತಮ್ ಸೋಲಂಕಿ, ಕನುಭಾಯಿ ದೇಸಾಯಿ ತಮ್ಮ ಸಚಿವ ಸ್ಥಾನ ಉಳಿಸಿಕೊಂಡಿದ್ದಾರೆ.
ಹೊಸ ಸಂಪುಟದಲ್ಲಿ ಜಾತಿ ಲೆಕ್ಕಾಚಾರದಲ್ಲಿ ಒಬಿಸಿ ಸಮುದಾಯದ ಎಂಟು ಸಚಿವರು, ಪಾಟಿದಾರ್ ಸಮುದಾಯದ ಆರು ಮಂದಿ, ಬುಡಕಟ್ಟು ಸಮುದಾಯಗಳಿಂದ ನಾಲ್ಕು ಮಂದಿ, ಪರಿಶಿಷ್ಟ ಜಾತಿಗಳಿಂದ ಮೂವರು, ಕ್ಷತ್ರಿಯ ಸಮುದಾಯದ ಇಬ್ಬರು, ಬ್ರಾಹ್ಮಣ ಮತ್ತು ಜೈನ (ಲಘುಮತಿ) ಸಮುದಾಯಗಳಿಂದ ತಲಾ ಒಬ್ಬರು ಸಚಿವರಾಗಿ ಸ್ಥಾನ ಪಡೆದಿದ್ದಾರೆ.
ಭೂಪೇಂದ್ರ ಪಟೇಲ್ ಸಂಪುಟದ ಎಲ್ಲ 16 ಸಚಿವರು ನಿನ್ನೆ ರಾಜೀನಾಮೆ ನೀಡಿದ್ದರು. ಗುಜರಾತ್ ವಿಧಾನಸಭೆ 182 ಸದಸ್ಯರ ಬಲವನ್ನು ಹೊಂದಿದ್ದು, ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಗರಿಷ್ಠ 27 ಸಚಿವರಿಗೆ ಅವಕಾಶ ನೀಡುತ್ತದೆ. ಭೂಪೇಂದ್ರ ಪಟೇಲ್ ನೇತೃತ್ವದ ಸರ್ಕಾರವು 2022ರಲ್ಲಿ ಅಸ್ತಿತ್ವಕ್ಕೆ ಬಂದಿತ್ತು. ಇದೀಗ ಎರಡೂವರೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಾತಿ ಲೆಕ್ಕಾಚಾರ ಅನುಸರಿಸಿ ಹೊಸಬರಿಗೆ ಅವಕಾಶ ನೀಡಲಾಗಿದೆ.
In a major political overhaul, the Gujarat BJP government has restructured its Cabinet, with Chief Minister Bhupendra Patel expanding his team to 25 ministers after the resignation of all 16 previous members.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
18-10-25 01:52 pm
Mangalore Correspondent
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am