ಬ್ರೇಕಿಂಗ್ ನ್ಯೂಸ್
17-10-25 05:25 pm HK News Desk ದೇಶ - ವಿದೇಶ
ಅಹ್ಮದಾಬಾದ್, ಅ.17 : ಗುಜರಾತ್ ಬಿಜೆಪಿ ಸರ್ಕಾರದಲ್ಲಿ ಎಲ್ಲ 16 ಸಚಿವರ ರಾಜಿನಾಮೆ ಪಡೆದು ಸಂಪುಟ ಪುನಾರಚನೆ ಮಾಡಲಾಗಿದೆ. ಗೃಹ ಸಚಿವರಾಗಿದ್ದ ಹರ್ಷ ಸಾಂಘ್ವಿ ಅವರನ್ನು ನೂತನ ಉಪ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಂಪುಟ ಸಚಿವರ ಸಂಖ್ಯೆಯನ್ನು 25ಕ್ಕೆ ವಿಸ್ತರಿಸಲಾಗಿದೆ.
ಹೊಸ ಸಂಪುಟದಲ್ಲಿ ಆರು ಮಾಜಿ ಸಚಿವರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ಬಿಜೆಪಿ ಶಾಸಕಿ ರಿವಾಬಾ ಜಡೇಜಾ ಸೇರಿದಂತೆ 19 ಹೊಸಬರಿಗೆ ಸಚಿವ ಸ್ಥಾನ ಸಿಕ್ಕಿದೆ. ಹರ್ಷ ಸಾಂಘ್ವಿ, ಕುನ್ವರ್ಜಿ ಬವಲಿಯಾ, ಪ್ರಫುಲ್ ಪನ್ಸೇರಿಯಾ, ರಿಷಿಕೇಶ್ ಪಟೇಲ್, ಪರಶೋತ್ತಮ್ ಸೋಲಂಕಿ, ಕನುಭಾಯಿ ದೇಸಾಯಿ ತಮ್ಮ ಸಚಿವ ಸ್ಥಾನ ಉಳಿಸಿಕೊಂಡಿದ್ದಾರೆ.
ಹೊಸ ಸಂಪುಟದಲ್ಲಿ ಜಾತಿ ಲೆಕ್ಕಾಚಾರದಲ್ಲಿ ಒಬಿಸಿ ಸಮುದಾಯದ ಎಂಟು ಸಚಿವರು, ಪಾಟಿದಾರ್ ಸಮುದಾಯದ ಆರು ಮಂದಿ, ಬುಡಕಟ್ಟು ಸಮುದಾಯಗಳಿಂದ ನಾಲ್ಕು ಮಂದಿ, ಪರಿಶಿಷ್ಟ ಜಾತಿಗಳಿಂದ ಮೂವರು, ಕ್ಷತ್ರಿಯ ಸಮುದಾಯದ ಇಬ್ಬರು, ಬ್ರಾಹ್ಮಣ ಮತ್ತು ಜೈನ (ಲಘುಮತಿ) ಸಮುದಾಯಗಳಿಂದ ತಲಾ ಒಬ್ಬರು ಸಚಿವರಾಗಿ ಸ್ಥಾನ ಪಡೆದಿದ್ದಾರೆ.
ಭೂಪೇಂದ್ರ ಪಟೇಲ್ ಸಂಪುಟದ ಎಲ್ಲ 16 ಸಚಿವರು ನಿನ್ನೆ ರಾಜೀನಾಮೆ ನೀಡಿದ್ದರು. ಗುಜರಾತ್ ವಿಧಾನಸಭೆ 182 ಸದಸ್ಯರ ಬಲವನ್ನು ಹೊಂದಿದ್ದು, ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಗರಿಷ್ಠ 27 ಸಚಿವರಿಗೆ ಅವಕಾಶ ನೀಡುತ್ತದೆ. ಭೂಪೇಂದ್ರ ಪಟೇಲ್ ನೇತೃತ್ವದ ಸರ್ಕಾರವು 2022ರಲ್ಲಿ ಅಸ್ತಿತ್ವಕ್ಕೆ ಬಂದಿತ್ತು. ಇದೀಗ ಎರಡೂವರೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಾತಿ ಲೆಕ್ಕಾಚಾರ ಅನುಸರಿಸಿ ಹೊಸಬರಿಗೆ ಅವಕಾಶ ನೀಡಲಾಗಿದೆ.
In a major political overhaul, the Gujarat BJP government has restructured its Cabinet, with Chief Minister Bhupendra Patel expanding his team to 25 ministers after the resignation of all 16 previous members.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:02 pm
HK News Staffer
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm